Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪುತ್ರ ಅರ್ಜುನ್ ಮದುವೆಗೆ ‘ಪ್ರಧಾನಿ ಮೋದಿ’ ಆಹ್ವಾನಿಸಿದ ‘ಸಚಿನ್ ತೆಂಡೂಲ್ಕರ್’.!

10/02/2026 7:54 PM

ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

10/02/2026 7:43 PM

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

10/02/2026 7:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!
KARNATAKA

ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

By kannadanewsnow0910/02/2026 7:43 PM

ಬೆಂಗಳೂರು: ಭಾರತದ ಸುಪ್ರೀಂ ಕೋರ್ಟ್, ಸೋಮವಾರ ದಿನಾಂಕ 09 ಫೆಬ್ರವರಿ 2026 ರಂದು, Deputy Commissioner & Special Land Acquisition Officer vs. SV Global Mills (SLP Civil No. 215 of 2023) ಹಾಗೂ ಸಂಬಂಧಿತ ಪ್ರಕರಣಗಳಲ್ಲಿ ಐತಿಹಾಸಿಕ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿದ್ದ 530 ಮೇಲ್ಮನವಿಗಳನ್ನು ಅನುಮತಿಸಿದೆ. ಈ ಮೇಲ್ಮನವಿಗಳು ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಏತ ನೀರಾವರಿ ಯೋಜನೆ, ರಾಜ್ಯ ಹೆದ್ದಾರಿ ಯೋಜನೆಗಳು ಹಾಗೂ ಇತರೆ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ಧಾವೆಗಳಾಗಿವೆ.

ಈ ತೀರ್ಪು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಮೇಲೆ ವ್ಯಾಪಕ ಪರಿಣಾಮ ಬೀರುವಂತದ್ದಾಗಿದ್ದು, ಕರ್ನಾಟಕ ಸರ್ಕಾರದ ಯಶಸ್ವಿ ಕಾನೂನು ಸವಾಲಿನ ಫಲವಾಗಿ ಪಣದಲ್ಲಿದ್ದ ಹತ್ತು ಸಾವಿರಾರು ಕೋಟಿ ರೂಪಾಯಿಗಳ ಸಾರ್ವಜನಿಕ ಹಣವನ್ನು ರಕ್ಷಿಸಲಾಗಿದೆ.

ಪ್ರಕರಣದ ಹಿನ್ನೆಲೆ

1.ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಹಾಗೂ ಮೂಲಸೌಕರ್ಯ ಯೋಜನೆಗಳಿಗಾಗಿ ಭೂಸ್ವಾಧೀನ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಂಡರು.

2.ಭೂಮಾಲೀಕರು, ಭೂಸ್ವಾಧೀನ ಅಧಿಕಾರಿಗಳು ನೀಡಿದ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರಕ್ಕಾಗಿ ನಾಗರಿಕ ನ್ಯಾಯಾಲಯಗಳ (ರೆಫರೆನ್ಸ್ ಕೋರ್ಟ್) ಮೊರೆ ಹೋದರು.

3.ಹೆಚ್ಚಿನ ಪ್ರಕರಣಗಳಲ್ಲಿ ರೆಫರೆನ್ಸ್ ಕೋರ್ಟ್ಗಳು ಸರಿಯಾದ ಮಾರುಕಟ್ಟೆ ಮೌಲ್ಯ ಅಥವಾ ಮಾರ್ಗಸೂಚಿ ಮೌಲ್ಯಗಳನ್ನು ಪರಿಗಣಿಸದೆ ಅತಿಯಾದ ಮತ್ತು ಸಂಶಯಾಸ್ಪದ ಪರಿಹಾರ ವೃದ್ಧಿಯನ್ನು ಮಂಜೂರು ಮಾಡಿವೆ.

4.ಈ ಆದೇಶಗಳನ್ನು ಪ್ರಶ್ನಿಸಲು ರಾಜ್ಯ ಸರ್ಕಾರವು ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ಸ್ಥಾಪನೆಗಳಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆ ಕಾಯ್ದೆ 2013ರ ಸೆಕ್ಷನ್ 74 ಅಡಿಯಲ್ಲಿ ಹೈಕೋರ್ಟ್ಗಳಿಗೆ ಮೇಲ್ಮನವಿಗಳನ್ನು ಸಲ್ಲಿಸಿತ್ತು.

5.ಆದರೆ, ಹೆಚ್ಚಿನ ಮೇಲ್ಮನವಿಗಳನ್ನು 120 ದಿನಗಳ ಅವಧಿಯನ್ನು ಮೀರಿದ ಕಾರಣ ವಿಳಂಬ ಕ್ಷಮಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿ ಹೈಕೋರ್ಟ್ ಮನವಿಯನ್ನು ವಜಾಗೊಳಿಸಿತು. ಪರಿಣಾಮವಾಗಿ ಇಂತಹ ಪ್ರಕರಣಗಳ ತಾತ್ವಿಕ ಅಂಶಗಳನ್ನು ಪರಿಶೀಲಿಸದೆ, ರೆಫರೆನ್ಸ್ ಕೋರ್ಟ್ಗಳು ನೀಡಿದ್ದ ಅತಿಯಾದ ಪರಿಹಾರಗಳನ್ನು ದೃಢಪಡಿಸಲಾಯಿತು.

ಆದರೆ, ಸರ್ಕಾರ ಗಮನಿಸಿದಂತೆ ರೆಫರೆನ್ಸ್ ಕೋರ್ಟ್ಗಳಲ್ಲಿ ಸರಿಯಾದ ವಾದಗಳನ್ನು ಮಂಡಿಸದಿರುವುದು ಹಾಗೂ ಹೈಕೋರ್ಟ್ಗಳಲ್ಲಿ ಸಮಯಕ್ಕೆ ಸರಿಯಾಗಿ ಮೇಲ್ಮನವಿಗಳನ್ನು ಸಲ್ಲಿಸದಿರುವುದು ಹಾಗೂ ಹೀಗೆ ಮೇಲ್ಮನವಿ ಸಲ್ಲಿಸದಿರಲು ಅಧಿಕಾರಿಗಳು ಮತ್ತು ವಕೀಲರ ನಡುವೆ ಗಂಭೀರ ಹಾಗೂ ವ್ಯವಸ್ಥಿತ ಒಳ ಒಪ್ಪಂದಗಳು (collusion) ನಡೆದಿರುವ ಸಾಧ್ಯತೆ ಕಂಡುಬಂದಿದೆ. ಇದರ ಪರಿಣಾಮವಾಗಿ, ಅತಿರೇಕದ ದುಪ್ಪಟ್ಟು ಪರಿಹಾರ ಆದೇಶಗಳನ್ನು ಹೊರಡಿಸಲಾಗಿದೆ.

ಇದರಿಂದಾಗಿ ಸಾರ್ವಜನಿಕ ಖಜಾನೆಗೆ ಸಾವಿರಾರು ಕೋಟಿ ರೂಪಾಯಿಗಳ ಭಾರೀ ನಷ್ಟವಾಗುವ ಸಾಧ್ಯತೆ ಇದ್ದು, ಈ ರೀತಿಯ ಪದ್ಧತಿ ರಾಜ್ಯದಾದ್ಯಂತ ಮುಂದುವರಿದಿದ್ದು, ಭವಿಷ್ಯದಲ್ಲಿಯೂ ಸಾವಿರಾರು ಕೋಟಿ ರೂಪಾಯಿಗಳ ನಷ್ಟಕ್ಕೆ ಕಾರಣವಾಗುವ ಸಾಧ್ಯತೆಯೇ ಹೆಚ್ಚಾಗಿದೆ.

6.ರಾಜ್ಯದ ಖಜಾನೆಯ ಮೇಲೆ ಉಂಟಾಗುವ ಗಂಭೀರ ಆರ್ಥಿಕ ಪರಿಣಾಮವನ್ನು ಗಮನಿಸಿ ಕರ್ನಾಟಕ ಸರ್ಕಾರವು ಈ ವ್ಯಾಖ್ಯಾನವನ್ನು ಮಾನ್ಯ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತು.

ಮಾನ್ಯ ಸುಪ್ರೀಂ ಕೋರ್ಟ್ ನ ಪ್ರಮುಖ ನಿರ್ಣಯಗಳು

09.02.2026 ರಂದು ನೀಡಿದ ತೀರ್ಪಿನಲ್ಲಿ ಮಾನ್ಯ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿಗಳನ್ನು ಅನುಮತಿಸಿ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಅಂಶಗಳನ್ನು ನಿರ್ಧರಿಸಿದೆ:

  • ಭೂಸ್ವಾಧೀನ ಪ್ರಕರಣಗಳಲ್ಲಿ ವಿಳಂಬ ಅರ್ಜಿಗಳನ್ನು ಪರಿಗಣಿಸುವಾಗ, ಹೈಕೋರ್ಟ್ಗಳು ಉದಾರ ಮತ್ತು ಪ್ರಾಯೋಗಿಕ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.
  • 2013ರ ಕಾಯ್ದೆಯ ಸೆಕ್ಷನ್ 74 ಅಡಿಯಲ್ಲಿ ನಿಗದಿಪಡಿಸಿದ 120 ದಿನಗಳ ಅವಧಿಯನ್ನು ಮೀರಿದರೂ, ಮಿತಿ ಕಾಯ್ದೆ (Limitation Act) ಯ ಸೆಕ್ಷನ್ 5 ಅನ್ನು ಅನ್ವಯಿಸಿ ವಿಳಂಬವನ್ನು ಕ್ಷಮಿಸಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ವಿಳಂಬ, ಸಂಧಿ ಮತ್ತು ಹೊಣೆಗಾರಿಕೆ ಕುರಿತು ನ್ಯಾಯಾಲಯದ ಅವಲೋಕನ

ರಾಜ್ಯಕ್ಕೆ ಪರಿಹಾರ ನೀಡುವ ವೇಳೆ ಮಾನ್ಯ ಸುಪ್ರೀಂ ಕೋರ್ಟ್ ದೇಶದಾದ್ಯಂತ ಮೇಲ್ಮನವಿಗಳ ಸಲ್ಲಿಕೆಯಲ್ಲಿ ಸಂಭವಿಸಿರುವ ವಿಳಂಬಗಳ ಬಗ್ಗೆ ಗಂಭೀರ ಚಿಂತೆಯನ್ನು ವ್ಯಕ್ತಪಡಿಸಿದೆ. ನ್ಯಾಯಾಲಯದ ಪೀಠದ ಎದುರು ಬಂದಿದ್ದ ಸುಮಾರು 530 ಮೇಲ್ಮನವಿಗಳು, ಅಧಿಕಾರಿಗಳ ಅಲಕ್ಷ್ಯಪೂರ್ಣ ಕಾರ್ಯವೈಖರಿ ಮತ್ತು ಸಾಧ್ಯವಿರುವ ಸಂಧಿಯ ಸ್ಪಷ್ಟ ಉದಾಹರಣೆಗಳಾಗಿವೆ ಎಂಬುದನ್ನು ಕೋರ್ಟ್ ಗಮನಿಸಿದೆ. ಅನೇಕ ಪ್ರಕರಣಗಳಲ್ಲಿ ರೆಫರೆನ್ಸ್ ಕೋರ್ಟ್ ತೀರ್ಪಿನ ನಂತರ ನಿಗದಿತ ಅವಧಿಯಲ್ಲಿ ಪ್ರಮಾಣಿತ ಪ್ರತಿಗಳ ಅರ್ಜಿಯನ್ನೂ ಸಲ್ಲಿಸಲಾಗಿರಲಿಲ್ಲ ಎಂದು ಕೋರ್ಟ್ ಸೂಚಿಸಿದೆ.

ಇದೇ ರೀತಿಯ ಪ್ರಕರಣಗಳು ದೇಶದ ವಿವಿಧ ಭಾಗಗಳಿಂದ ನಿರಂತರವಾಗಿ ಎದುರಾಗುತ್ತಿರುವುದರಿಂದ, 2013ರ ಕಾಯ್ದೆಯ ಸೆಕ್ಷನ್ 74 ಅಡಿಯಲ್ಲಿ ಮೇಲ್ಮನವಿಗಳ ವಿಳಂಬವು ಪ್ಯಾನ್-ಇಂಡಿಯಾ ಸಮಸ್ಯೆಯಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ಗೂ ಮೇಲ್ಮನವಿಗಳನ್ನು ಸಲ್ಲಿಸುವಲ್ಲಿಯೂ ವಿಳಂಬವಾಗಿರುವುದನ್ನು ಗಮನಿಸಿ, ಭೂಸ್ವಾಧೀನ ಸಂಸ್ಥೆಗಳು ಮತ್ತು ಅವರ ವಕೀಲರ ನಡುವಿನ ಸಮನ್ವಯದ ಕೊರತೆ, ನಿರ್ಲಕ್ಷ್ಯ ಹಾಗೂ ಕೆಲವು ಪ್ರಕರಣಗಳಲ್ಲಿ ಸಂಧಿಯ ಸಾಧ್ಯತೆಗಳನ್ನೂ ಕೋರ್ಟ್ ಉಲ್ಲೇಖಿಸಿದೆ.

ಕಾನೂನು ಆಳ್ವಿಕೆಗೆ ಒಳಪಟ್ಟ ಸಂವಿಧಾನಾತ್ಮಕ ಪ್ರಜಾಪ್ರಭುತ್ವದಲ್ಲಿ ಹೊಣೆಗಾರಿಕೆ ಎಂಬುದು ಮೂಲಭೂತ ತತ್ವ ಎಂದು ಒತ್ತಿಹೇಳಿದ ನ್ಯಾಯಾಲಯ, ಈ ರೀತಿಯ ವರ್ತನೆ ನ್ಯಾಯ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕುಂದಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಕಾನೂನು ಪರಿಹಾರಗಳನ್ನು ಸಮಯಕ್ಕೆ ಸರಿಯಾಗಿ ಅನುಸರಿಸದಿರುವುದು ಕೇವಲ ನಿರ್ಲಕ್ಷ್ಯ ಎಂದು ಪರಿಗಣಿಸಲಾಗದು; ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಸಂಧಿ ಸಾಬೀತಾಗದಿದ್ದರೂ ಸಹ ಭಾರೀ ಸಾರ್ವಜನಿಕ ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಗಂಭೀರ ನಿರ್ಲಕ್ಷ್ಯ ಮತ್ತು ಉದಾಸೀನತೆ ಸ್ಪಷ್ಟವಾಗಿ ಕಾಣಿಸುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಆದ್ದರಿಂದ, ಭವಿಷ್ಯದಲ್ಲಿ ಮೇಲ್ಮನವಿಗಳು ಮತ್ತು ವಿಶೇಷ ಅನುಮತಿ ಅರ್ಜಿಗಳು (SLP) ಸಮಯಕ್ಕೆ ಸರಿಯಾಗಿ ಸಲ್ಲಿಸಲ್ಪಡಬೇಕು, ಭೂಸ್ವಾಧೀನ ಸಂಸ್ಥೆಗಳು ಹಾಗೂ ರಾಜ್ಯ ಅಧಿಕಾರಿಗಳು ಪರಿಣಾಮಕಾರಿ ನಿರ್ವಹಿಸಬೇಕು, ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆ ವ್ಯವಸ್ಥೆಗಳನ್ನು ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕರ್ನಾಟಕ ಸರ್ಕಾರ ಕೈಗೊಂಡ ಕ್ರಮಗಳು

ಈ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 2025ರಲ್ಲಿ, ಭೂಸ್ವಾಧೀನ ಮೇಲ್ಮನವಿಗಳ ಸಲ್ಲಿಕೆಯಲ್ಲಿ ಉಂಟಾಗುತ್ತಿರುವ ವಿಳಂಬಗಳ ಕಾರಣಗಳನ್ನು ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಕೆ ನಿಗದಿಪಡಿಸಲು ಕರ್ನಾಟಕ ಸರ್ಕಾರವು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಿದೆ. ಸಮಿತಿಯ ವರದಿ ಶೀಘ್ರದಲ್ಲೇ ಮಂಡನೆಯಾಗುವ ನಿರೀಕ್ಷೆ ಇದೆ. 2019ರಿಂದ ಇಂತಹ ವಿಳಂಬಗಳ ಅನೇಕ ಉದಾಹರಣೆಗಳು ಗಮನಕ್ಕೆ ಬಂದಿವೆ.

ಇದಲ್ಲದೆ, ಭೂಸ್ವಾಧೀನ ಮತ್ತು ನ್ಯಾಯಾಲಯದ ದಾಖಲೆಗಳ ಸಲ್ಲಿಕೆಯಲ್ಲಿ ವಿಳಂಬವಾಗದಂತೆ ತಡೆಯಲು ರಾಜ್ಯ ಸರ್ಕಾರವು ಬಲಿಷ್ಠ ಸಂಸ್ಥಾತ್ಮಕ ವ್ಯವಸ್ಥೆ ಹಾಗೂ ವಿಶೇಷ ಸಾಫ್ಟ್ವೇರ್ ವ್ಯವಸ್ಥೆಗಳನ್ನು ಜಾರಿಗೆ ತರುವ ಕೆಲಸ ಪ್ರಗತಿಯಲ್ಲಿದೆ. ಇದರಿಂದ ಆಡಳಿತಾತ್ಮಕ ಲೋಪಗಳಿಂದಾಗಿ ರಾಜ್ಯದ ಸಂಪನ್ಮೂಲಗಳು ಆರ್ಥಿಕ ಅಪಾಯಕ್ಕೆ ಒಳಗಾಗದಂತೆ ನೋಡಿಕೊಳ್ಳಲಾಗುತ್ತದೆ.

ಈ ತೀರ್ಪು ಸಾರ್ವಜನಿಕ ಹಣವನ್ನು ರಕ್ಷಿಸುವುದು ಹಾಗೂ ಕರ್ನಾಟಕದ ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಅದನ್ನು ಸಮರ್ಪಕವಾಗಿ ಬಳಸುವ ದಿಕ್ಕಿನಲ್ಲಿ ಒಂದು ಮಹತ್ವದ ಮೈಲಿಗಲ್ಲಾಗಿದೆ. ಕರ್ನಾಟಕ ಸರ್ಕಾರವು ಈ ತೀರ್ಪನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಮತ್ತು ಸಮಯೋಚಿತ ಹಾಗೂ ತತ್ವಬದ್ಧ ಹಸ್ತಕ್ಷೇಪಕ್ಕಾಗಿ ಮಾನ್ಯ ಭಾರತದ ಸುಪ್ರೀಂ ಕೋರ್ಟ್ಗೆ ತನ್ನ ಕೃತಜ್ಞತೆಯನ್ನು ತಿಳಿಸುತ್ತದೆ. ಈ ಮಹತ್ವದ ಸಾಧನೆಗೆ ಪರಿಣಾಮಕಾರಿಯಾಗಿ ವಾದ ಮಂಡಿಸಿದ ರಾಜ್ಯದ ಕಾನೂನು ತಂಡದ ಪ್ರಯತ್ನಗಳನ್ನೂ ಸರ್ಕಾರ ಶ್ಲಾಘಿಸುತ್ತದೆ.

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರಿಗೆ GBA ಶಾಕ್: 3 ತಿಂಗಳಲ್ಲಿ 30 ಲಕ್ಷ ದಂಡ ವಸೂಲಿ

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

10/02/2026 7:30 PM3 Mins Read

ಇಂದಿನಿಂದ ಮೈಸೂರು ಸ್ಯಾಂಡಲ್ ವುಡ್ ಸೋಪಿಗೆ ನಟಿ ತಮನ್ನಾ ರಾಯಭಾರಿ: 57 ಹೊಸ ಉತ್ಪನ್ನ ಬಿಡುಗಡೆ

10/02/2026 7:26 PM2 Mins Read

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರಿಗೆ GBA ಶಾಕ್: 3 ತಿಂಗಳಲ್ಲಿ 30 ಲಕ್ಷ ದಂಡ ವಸೂಲಿ

10/02/2026 7:17 PM1 Min Read
Recent News

BREAKING : ಪುತ್ರ ಅರ್ಜುನ್ ಮದುವೆಗೆ ‘ಪ್ರಧಾನಿ ಮೋದಿ’ ಆಹ್ವಾನಿಸಿದ ‘ಸಚಿನ್ ತೆಂಡೂಲ್ಕರ್’.!

10/02/2026 7:54 PM

ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

10/02/2026 7:43 PM

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

10/02/2026 7:30 PM

ಇಂದಿನಿಂದ ಮೈಸೂರು ಸ್ಯಾಂಡಲ್ ವುಡ್ ಸೋಪಿಗೆ ನಟಿ ತಮನ್ನಾ ರಾಯಭಾರಿ: 57 ಹೊಸ ಉತ್ಪನ್ನ ಬಿಡುಗಡೆ

10/02/2026 7:26 PM
State News
KARNATAKA

ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

By kannadanewsnow0910/02/2026 7:43 PM KARNATAKA 4 Mins Read

ಬೆಂಗಳೂರು: ಭಾರತದ ಸುಪ್ರೀಂ ಕೋರ್ಟ್, ಸೋಮವಾರ ದಿನಾಂಕ 09 ಫೆಬ್ರವರಿ 2026 ರಂದು, Deputy Commissioner & Special Land…

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ

10/02/2026 7:30 PM

ಇಂದಿನಿಂದ ಮೈಸೂರು ಸ್ಯಾಂಡಲ್ ವುಡ್ ಸೋಪಿಗೆ ನಟಿ ತಮನ್ನಾ ರಾಯಭಾರಿ: 57 ಹೊಸ ಉತ್ಪನ್ನ ಬಿಡುಗಡೆ

10/02/2026 7:26 PM

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರಿಗೆ GBA ಶಾಕ್: 3 ತಿಂಗಳಲ್ಲಿ 30 ಲಕ್ಷ ದಂಡ ವಸೂಲಿ

10/02/2026 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.