ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಬಗ್ಗೆ ಅವರು ಹೇಳಿದ್ದೇನು ಅಂತ ಮುಂದ ಓದಿ.
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, ನಾವು ನ್ಯಾಯಾಲಯದ ಆದೇಶವನ್ನು ಪಾಲಿಸಬೇಕಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕೋರ್ಟ್ ಆದೇಶ ಕೊಟ್ಟಿದೆ. ಅದರ ಬಗ್ಗೆ ನಾನು ಮಾತನಾಡಲ್ಲ ಎಂದರು.
ಜಾಮೀನು ರದ್ದತಿಯ ಹಿಂದೆ ಹಲವರ ಕೈವಾಡವಿದೆ. ಇದೇನು ದೊಡ್ಡ ಸಮಸ್ಯೆ ಅಲ್ಲ. ನ್ಯಾಯಾಲಯದಲ್ಲಿ ಸಾಕ್ಷಿ ಬೇಕು. ಸಾಕ್ಷ್ಯಾಧಾರಗಳ ಮೇಲೆ ಕೋರ್ಟ್ ತೀರ್ಮಾನ ಮಾಡುತ್ತದೆ ಎಂದರು.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನನ್ನ ಯಾವುದೇ ರೀತಿಯ ಕೈವಾಡವಿಲ್ಲ. ಒಂದು ಸಿಂಗಲ್ ಕಾಲ್ ಕೂಡ ನಾನು ಯಾರ ಜೊತೆಗೂ ಮಾತಾಡಿಲ್ಲ. ಇನ್ನೂ 15 ದಿನ ಇದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ನೋಡುತ್ತೇವೆ. ಅವರು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ. ನನ್ನನ್ನು ಮತ್ತೆ ಜೈಲಿಗೆ ಕಳಿಸಬೇಕು ಅಂತ ಮಾಡುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಭಾಗದ ನಾಯಕರು ಸೇರಿದಂತೆ ತುಂಬಾ ಜನ ಇದ್ದಾರೆ ಎಂದರು.
ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ