Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 6,000 ಉದ್ಯೋಗಿಗಳನ್ನು ವಜಾ | Microsoft laid off

18/05/2025 9:42 PM

BREAKING: ಸನ್ ರೈಸರ್ಸ್ ಹೈದರಾಬಾದ್ ತಂಡದ ‘ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್’ಗೆ ಕೊರೋನಾ ಪಾಸಿಟಿವ್ | Travis Head

18/05/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರದಿಂದ ಬರ ಪರಿಹಾರದ ವಿಷಯದಲ್ಲಿ ಸುಪ್ರೀಂ ಕೋರ್ಟ್ ಗೂ ತಪ್ಪು ಮಾಹಿತಿ – ಸಿಎಂ ಸಿದ್ಧರಾಮಯ್ಯ ಕಿಡಿ
KARNATAKA

ಕೇಂದ್ರದಿಂದ ಬರ ಪರಿಹಾರದ ವಿಷಯದಲ್ಲಿ ಸುಪ್ರೀಂ ಕೋರ್ಟ್ ಗೂ ತಪ್ಪು ಮಾಹಿತಿ – ಸಿಎಂ ಸಿದ್ಧರಾಮಯ್ಯ ಕಿಡಿ

By kannadanewsnow0908/04/2024 7:14 PM

ಬೆಂಗಳೂರು: ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಬರ ಪರಿಹಾರದ ವಿಷಯದಲ್ಲಿ ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದಿದ್ದಾರೆ.

ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದ್ದಾರೆ.

ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ’’ ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ.

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ.

ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ.

BREAKING : ಬಂಧನ ಪ್ರಶ್ನಿಸಿ ಹೈಕೋರ್ಟ್’ಗೆ ‘ಕೇಜ್ರಿವಾಲ್’ ಅರ್ಜಿ ಸಲ್ಲಿಕೆ ; ನಾಳೆ ಮಧ್ಯಾಹ್ನ 2:30ಕ್ಕೆ ತೀರ್ಪು ಪ್ರಕಟ

‘ಯುಗಾದಿ’ಯಿಂದ ‘ಪ್ರಧಾನಿ ಮೋದಿ’ ಜಾತಕ ಹೇಗಿದೆ.? ಖ್ಯಾತ ‘ಜ್ಯೋತಿಷಿ’ಗಳು ನುಡಿದ ಭವಿಷ್ಯ ಹೀಗಿದೆ!

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM1 Min Read

ದಕ್ಷಿಣಕನ್ನಡದಲ್ಲಿ ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ : ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

18/05/2025 9:24 PM1 Min Read

ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ

18/05/2025 9:08 PM1 Min Read
Recent News

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

18/05/2025 9:59 PM

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 6,000 ಉದ್ಯೋಗಿಗಳನ್ನು ವಜಾ | Microsoft laid off

18/05/2025 9:42 PM

BREAKING: ಸನ್ ರೈಸರ್ಸ್ ಹೈದರಾಬಾದ್ ತಂಡದ ‘ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್’ಗೆ ಕೊರೋನಾ ಪಾಸಿಟಿವ್ | Travis Head

18/05/2025 9:35 PM

ಮಾದಕ ದ್ರವ್ಯಗಳನ್ನು ಮಾರಾಟ ಮಾಡುವ ನಕಲಿ ಪಾಡ್‌ಕಾಸ್ಟ್‌ಗಳನ್ನು ಹೋಸ್ಟ್ ಮಾಡಿ ಸಿಕ್ಕಿಬಿದ್ದ ಸ್ಪಾಟಿಫೈ: ವರದಿ | Spotify

18/05/2025 9:27 PM
State News
KARNATAKA

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: ‘ಕೆಳದಿ ಕೆರೆ’ಯಲ್ಲಿ ಜಲಕ್ರೀಡೆಗೆ ಪ್ರವಾಸೋದ್ಯಮ ಇಲಾಖೆ ಗ್ರೀನ್ ಸಿಗ್ನಲ್

By kannadanewsnow0918/05/2025 9:59 PM KARNATAKA 1 Min Read

ಶಿವಮೊಗ್ಗ: ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ, ಸಾಗರ ಸಮೀಪದ ಕೆಳದಿ ಕೆರೆಯಲ್ಲಿ ಜಲಕ್ರೀಡೆ, ಜಲಸಾಹಸಕ್ಕೆ ಪ್ರವಾಸೋದ್ಯಮ ಇಲಾಖೆ…

ದಕ್ಷಿಣಕನ್ನಡದಲ್ಲಿ ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ : ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

18/05/2025 9:24 PM

ನಾಡೋಜ ಪ್ರಶಸ್ತಿ ಪುರಸ್ಕೃತ ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ಇನ್ನಿಲ್ಲ

18/05/2025 9:08 PM

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ 112 ಸಿಬ್ಬಂದಿ: ಎಲ್ಲಿ.? ಹೇಗೆ ಅಂತ ಈ ಸುದ್ದಿ ಓದಿ!

18/05/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.