Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `BBMP’ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಡಿ.20ಕ್ಕೆ ಮುಕ್ತಾಯ : ವ್ಯಾಪಾರಿಗಳಿಗೆ ಈ ದಾಖಲೆಗಳು ಕಡ್ಡಾಯ.!
KARNATAKA

`BBMP’ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಡಿ.20ಕ್ಕೆ ಮುಕ್ತಾಯ : ವ್ಯಾಪಾರಿಗಳಿಗೆ ಈ ದಾಖಲೆಗಳು ಕಡ್ಡಾಯ.!

By kannadanewsnow5711/12/2024 6:30 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು 20ನೇ ಡಿಸೆಂಬರ್ 2024ಕ್ಕೆ ಮುಕ್ತಾಯವಾಗಲಿದೆಯೆಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ-2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಗಿ) ಯೋಜನೆ-2020 ರಂತೆ ಪಾಲಿಕೆಯಲ್ಲಿ ನಗರ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ಪಾಲಿಕೆಯ ಎಲ್ಲಾ 08 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಕೈಗೊಂಡಿದ್ದು, ಗಣತಿದಾರರಿಂದ ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ. ಮೊಬೈಲ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಇದುವರೆಗೆ ವಲಯವಾರು ಸುಮಾರು 23407 ಬೀದಿ ಬದಿ ವ್ಯಾಪಾರಿಗಳನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದೆ.

ಸಮೀಕ್ಷೆಯ ಅನುಸಾರ ಅರ್ಹ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಅಲ್ಲದೇ ವಲಯ ಮಟ್ಟದಲ್ಲಿ ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸಿ, ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ-2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಗಿ) ಯೋಜನೆ-2020 ರಂತೆ ಬೀದಿ ವ್ಯಾಪಾರಿಗಳ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತದೆ.

ಸಮೀಕ್ಷೆಗೆ ಅಗತ್ಯವಿರುವ ದಾಖಲೆಗಳು:

ಕಲ್ಯಾಣ ವಿಭಾಗದಿಂದ ನಿಯೋಜಿಸಿರುವ ಗಣತಿದಾರರು ಸಮೀಕ್ಷೆ ಮಾಡುವ ಸಮಯದಲ್ಲಿ ಬೀದಿ ಬದಿ ವ್ಯಾಪಾರಿಗಳು ಸಹಕಾರ ನೀಡಬೇಕಿದ್ದು, ಸಮೀಕ್ಷೆ ಸಮಯದಲ್ಲಿ ಈ ಕೆಳಗಿನ ದಾಖಲೆಗಳನ್ನು ಗಣತಿದಾರರಿಗೆ ನೀಡಬೇಕು.

* ಆಧಾರ್ ಕಾರ್ಡ್
* ಮತದಾರರ ಗುರುತಿನ ಚೀಟಿ
* ಬ್ಯಾಂಕ್ ಪಾಸ್ ಬುಕ್
* ಕುಟುಂಬ ಪಡಿತರ ಚೀಟಿ
* ಕುಟುಂಬ ಸದಸ್ಯರ ಮಾಹಿತಿ
* ಸ್ವ ಯಂ ಘೋಷಣೆ ಪ್ರಮಾಣ ಪತ್ರ

ಪಾಲಿಕೆಯಿಂದ ವಿವಿಧ ಸೌಲಭ್ಯಗಳು ಲಭ್ಯ:

ಬೀದಿ ಬದಿ ವ್ಯಾಪಾರಿಗಳ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಿಂದ ಸಾಕಷ್ಟು ಯೋಜನೆಗಳಿದ್ದು, ಅದನ್ನು ಬೀದಿ ಬದಿ ವ್ಯಾಪಾರಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ. ಪಿಎಂ ಸ್ವನಿಧಿ ಮಾತ್ರವಲ್ಲದೆ, ಪಾಲಿಕೆಯ ಕಲ್ಯಾಣ ವಿಭಾಗದಿಂದ ಇ-ಮಾರಾಟ ವಾಹನ ಖರೀದಿಗೆ ಸಹಾಯಧನ, ಒಂಟಿ ಮನೆ/ಅಮೃತ ಮಹೋತ್ಸವ ಮನೆ ಯೋಜನೆಗೆ ಸಹಾಯಧನ, ಗಂಭೀರ ಸ್ವರೂಪ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ವೈದ್ಯಕೀಯ ವೆಚ್ಚ ಮರು ಪಾವತಿ, ಕೌಶಲ್ಯ ತರಬೇತಿ ಕಾರ್ಯಕ್ರಮ, ಬೀದಿ ಬದಿ ವ್ಯಾಪಾರಿಗಳ ಮಕ್ಕಳ ಶಿಕ್ಷಣಕ್ಕೆ ಶುಲ್ಕ ಮರುಪಾವತಿ ಸೇರಿದಂತೆ ಇನ್ನಿತರೆ ಸೌಲಭ್ಯಗಳಿದ್ದು, ಅದರ ಸದುಪಯೋಗ ಪಡೆದುಕೊಳ್ಳಬಹುದು.

ಫಿಎಂ ಸ್ವ-ನಿಧಿ ಯೋಜನೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಿಎಂ ಸ್ವನಿಧಿ ಯೋಜನೆಯಿಂದ ಅನುಕೂಲ ಪಡೆದಿರುವ ವಿವರವನ್ನು ಪಿಎಂಎಸ್ ಡ್ಯಾಶ್‌ಬೋರ್ಡ್ ಲಿಂಕ್ https://pmsvanidhi.mohua.gov.in/Home/PMSDashboard ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಡಿಸೆಂಬರ್ 20ರೊಳಗಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ:

ಪಾಲಿಕೆ 8 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ಕಾರ್ಯವನ್ನು ಇದೇ 20ನೇ ಡಿಸೆಂಬರ್ 2024ರ ವರೆಗೆ ಮಾತ್ರ ನಡೆಸಲಿದ್ದು, ನಗರದ ಎಲ್ಲಾ ಬೀದಿ ಬದಿ ವ್ಯಾಪಾರಿಗಳು ಕೂಡಲೆ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳಲು ಕೋರಿದೆ.

ಸೌಲಭ್ಯಗಳಿಂದ ವಂಚಿತರಾಗದಿರಿ:

ಇದುವರೆಗೆ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳದವರು ಆಯಾ ವಲಯ ಜಂಟಿ ಆಯುಕ್ತರ ಕಛೇರಿಗಳಿಗೆ ಭೇಟಿ ನೀಡಿ ಡಿಸೆಂಬರ್ 20ರೊಳಗಾಗಿ ಸಮೀಕ್ಷೆಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಡಿಸೆಂಬರ್ 20ರ ನಂತರ ಸಮೀಕ್ಷೆಯನ್ನು ನಿಲ್ಲಿಸಲಾಗುವುದು. ಅನಂತರ ಬೀದಿ ಬದಿ ವ್ಯಾಪಾರಿಗಳು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಹಾಗು ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ.

ಇದುವರೆಗೆ ವಲಯವಾರು ಸಮೀಕ್ಷೆ ಮಾಡಿರುವ ವಿವರ(09-12-2024 ರವರೆಗೆ):

ವಲಯ – ಸರ್ವೇ ಮಾಡಿರುವ ಸಂಖ್ಯೆ:

ಪಶ್ಚಿಮ – 5727
ದಕ್ಷಿಣ – 4417
ಆರ್.ಆರ್ ನಗರ – 3448
ಪೂರ್ವ – 3067
ಬೊಮ್ಮನಹಳ್ಳಿ – 2156
ಮಹದೇವಪುರ – 1669
ಯಲಹಂಕ – 1572
ದಾಸರಹಳ್ಳಿ – 1351

ಒಟ್ಟು – 23407

Survey of street vendors in BBMP limits to end on Dec 20: These documents are mandatory for traders `BBMP' ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಡಿ.20ಕ್ಕೆ ಮುಕ್ತಾಯ : ವ್ಯಾಪಾರಿಗಳಿಗೆ ಈ ದಾಖಲೆಗಳು ಕಡ್ಡಾಯ.!
Share. Facebook Twitter LinkedIn WhatsApp Email

Related Posts

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM4 Mins Read

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM2 Mins Read

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read
Recent News

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM

US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

01/03/2026 8:36 PM
State News
KARNATAKA

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

By kannadanewsnow0901/03/2026 9:36 PM KARNATAKA 4 Mins Read

ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ…

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.