Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ: ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

05/06/2025 6:05 PM

ಮೈಸೂರು ನೈರುತ್ಯ ರೈಲ್ವೆ ವಿಭಾಗದಿಂದ ಅಂತಾರಾಷ್ಟ್ರೀಯ ಮಟ್ಟದ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಆಚರಣೆ

05/06/2025 6:01 PM

ರಾಜ್ಯದಲ್ಲಿ ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

05/06/2025 5:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನೇಕಾರಿಕೆ’ಗೆ ವೈಜ್ಞಾನಿಕ ಸ್ಪರ್ಶವಿದ್ದರೆ ಉಳಿವು ಸಾಧ್ಯ: ಸಚಿವ ಶಿವಾನಂದ ಪಾಟೀಲ್
KARNATAKA

‘ನೇಕಾರಿಕೆ’ಗೆ ವೈಜ್ಞಾನಿಕ ಸ್ಪರ್ಶವಿದ್ದರೆ ಉಳಿವು ಸಾಧ್ಯ: ಸಚಿವ ಶಿವಾನಂದ ಪಾಟೀಲ್

By kannadanewsnow0907/08/2024 3:14 PM

ಬೆಂಗಳೂರು : ಸಾಂಪ್ರದಾಯಿಕ ನೇಕಾರಿಕೆ ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದು, ನೇಕಾರಿಕೆಗೆ ವೈಜ್ಞಾನಿಕ ಸ್ಪರ್ಶ ಸಿಗದಿದ್ದರೆ ಈ ಉದ್ಯಮ ಉಳಿಯಲು ಸಾಧ್ಯವಿಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್‌ ಅವರು ಹೇಳಿದರು.

ವಿಧಾನ ಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕಾವೇರಿ ಹ್ಯಾಂಡ್‌ ಲೂಮ್ಸ್‌, ನೇಕಾರರ ಸೇವಾ ಕೇಂದ್ರ ಹಾಗೂ ಎಫ್‌ಐಸಿಸಿಐ ಎಫ್‌ ಎಲ್‌ಒ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 10 ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ಕೈಮಗ್ಗ ನೇಕಾರರಿಗೆ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಅವರು ಮಾತನಾಡಿದರು.

ನೇಕಾರಿಕೆಯಿಂದ ಇಂದು ಹಲವು ಕುಟುಂಬಗಳು ವಿಮುಖವಾಗುತ್ತಿವೆ. ಈ ಕೆಲಸ ಬಿಟ್ಟು ವಲಸೆ ಹೋಗುತ್ತಿದ್ದಾರೆ. ನೇಕಾರಿಕೆಗೆ ಇಂದು ಸವಾಲುಗಳು ಹೆಚ್ಚಿವೆ. ಆದ್ದರಿಂದ ಪಾರಂಪರಿಕ ನೇಕಾರಿಕೆ ಲಾಭವಲ್ಲ ಎಂಬ ಅಭಿಪ್ರಾಯ ಮೂಡಿದೆ. ಪಾರಂಪರಿಕ ನೇಕಾರಿಕೆಯಿಂದ ಜೀವನೋಪಾಯ ಸಾಧ್ಯವಿಲ್ಲ ಎಂಬ ಸಂದಿಗ್ದ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ವಿವರಿಸಿದರು.

ನೇಕಾರಿಕೆಗೆ ಸಾಕಷ್ಟು ಪ್ರೋತ್ಸಾಹವನ್ನು ನಮ್ಮ ಸರ್ಕಾರವು ಇಲಾಖೆಯ ಮೂಲಕ ಮಾಡುತ್ತಿದೆ. ಕೃಷಿ ನಂತರ ಹೆಚ್ಚು ಉದ್ಯೋಗ ನೀಡುತ್ತಾ ಇರುವುದು ನೇಕಾರಿಕೆ. ನೇಕಾರರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ಧನವನ್ನು ಹೆಚ್ಚಿಸಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಸಾಲ, ವಿದ್ಯುತ್‌ ಸಬ್ಸಿಡಿ, ಪರಿಶಿಷ್ಟರಿಗೆ ಜವಳಿ ಘಟಕ ಸ್ಥಾಪಿಸಲು ಹಣ ಹೀಗೆ ಹಲವು ಸೌಲಭ್ಯ ನೀಡಲಾಗಿದೆ ಎಂದರು.

ನೇಕಾರಿಕೆ ಉತ್ಪನ್ನಗಳಿಗೆ ವಿನಾಯಿತಿ ನೀಡಲಾಗಿದ್ದು, ಇದನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಪಿಎಂ ಮಿತ್ರ ಪಾರ್ಕ್‌ ಜಮೀನು ಗುರುತಿಸಲಾಗಿದೆ. ಈ ಪಾರ್ಕ್‌ ಸ್ಥಾಪನೆಯಾದರೆ ಸಾಕಷ್ಟು ಉದ್ಯೋಗ ಸಿಗಲಿದೆ. ರಾಜ್ಯದ ಬಜೆಟ್‌ನಲ್ಲಿ ಜವಳಿ ಪಾರ್ಕ್‌ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದರು.

ಸರ್ಕಾರದ ಎಲ್ಲಾ ಇಲಾಖೆಗಳು ಜವಳಿ ನಿಗಮದ ಮೂಲಕ ಬಟ್ಟೆಗಳನ್ನು ಖರೀದಿಸಿದರೆ ನಿಗಮಗಳಿ ಅನುಕೂಲವಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ಇದೇ ಸಮಾರಂಭದಲ್ಲಿ ಕೈ ಮಗ್ಗ ನೇಕಾರರಿಗೆ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಜವಳಿ ಅಭಿವೃದ್ಧಿ ಆಯುಕ್ತರಾದ ಕೆ ಜ್ಯೋತಿ, ಕರ್ನಾಟಕ ರಾಜ್ಯ ಸಹಕಾರ ಕೈ ಮಗ್ಗ ನೇಕಾರರ ಮಹಾಮಂಡಳ ಮತ್ತು ಕಾವೇರಿ ಹ್ಯಾಂಡ್‌ ಲೂಮ್ಸ್‌ ಅಧ್ಯಕ್ಷರಾದ ಬಿ ಜೆ ಗಣೇಶ್‌ ಮತ್ತಿತರರು ಉಪಸ್ಥಿತರಿದ್ದರು.

BREAKING: ರಾಜ್ಯಸಭಾ 12 ಖಾಲಿ ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಸೆ.3ರಂದು ಮತದಾನ | Rajya Sabha Election

BREAKING: ನನ್ನ ವಿರುದ್ಧದ ಆರೋಪ ಸಾಬೀತು ಪಡಿಸಿದ್ರೇ ‘ರಾಜಕೀಯ ನಿವೃತ್ತಿ’: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್

Share. Facebook Twitter LinkedIn WhatsApp Email

Related Posts

ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ: ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

05/06/2025 6:05 PM1 Min Read

ಮೈಸೂರು ನೈರುತ್ಯ ರೈಲ್ವೆ ವಿಭಾಗದಿಂದ ಅಂತಾರಾಷ್ಟ್ರೀಯ ಮಟ್ಟದ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಆಚರಣೆ

05/06/2025 6:01 PM1 Min Read

ರಾಜ್ಯದಲ್ಲಿ ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

05/06/2025 5:55 PM2 Mins Read
Recent News

ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ: ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

05/06/2025 6:05 PM

ಮೈಸೂರು ನೈರುತ್ಯ ರೈಲ್ವೆ ವಿಭಾಗದಿಂದ ಅಂತಾರಾಷ್ಟ್ರೀಯ ಮಟ್ಟದ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಆಚರಣೆ

05/06/2025 6:01 PM

ರಾಜ್ಯದಲ್ಲಿ ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

05/06/2025 5:55 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | KSRTC Recruitment 2025

05/06/2025 5:50 PM
State News
KARNATAKA

ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ: ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow0905/06/2025 6:05 PM KARNATAKA 1 Min Read

ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ…

ಮೈಸೂರು ನೈರುತ್ಯ ರೈಲ್ವೆ ವಿಭಾಗದಿಂದ ಅಂತಾರಾಷ್ಟ್ರೀಯ ಮಟ್ಟದ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಆಚರಣೆ

05/06/2025 6:01 PM

ರಾಜ್ಯದಲ್ಲಿ ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

05/06/2025 5:55 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | KSRTC Recruitment 2025

05/06/2025 5:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.