ಬೆಂಗಳೂರು: ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ತುಮಕೂರಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದು, ಬಂಧಿಸಿ ಬೆಂಗಳೂರಿಗೆ ತೆರಳಿ, ವಿಚಾರಣೆ ನಡೆಸಿದ್ದರು. ಈ ಬಳಿಕ ಇಬ್ಬರು ಶಂಕಿತ ಉಗ್ರರನ್ನು ವಿಚಾರಣೆಯ ಬಳಿಕ ಬಿಡುಗಡೆ ಮಾಡಿರೋದಾಗಿ ತಿಳಿದು ಬಂದಿದೆ.
ಭಟ್ಕಳದಲ್ಲಿ ಉಗ್ರ ಚಟುವಟಿಕೆಗೆ ತೊಡಗಿಸಿ ಕೊಳ್ಳೋದಕ್ಕೆ ಯುವಕರನ್ನು ಪ್ರೇರೇಪಿಸೋ ಕೆಲಸ ಮಾಡುತ್ತಿದ್ದಂತ ಶಂಕೆಯ ಹಿನ್ನಲೆಯಲ್ಲಿ ಅಬ್ದುಲ್ ಮುಖ್ತದೀರ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
BREAKING NEWS: ಕಾಮನ್ವೆಲ್ತ್ ಗೇಮ್ಸ್ 2022: ಟಿ20ಐ ಗ್ರೂಪ್ ಹಂತದಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಅವರನ್ನು ಬೆಂಗಳೂರಿಗೆ ಕರೆದೊಯ್ದು ಪ್ರಕರಣ ಸಂಬಂಧ ವಿಚಾರಣೆ ನಡೆಸಲಾಗಿತ್ತು. ಕೊನೆಗೆ ಅವರನ್ನು ವಿಚಾರಣೆಯ ಬಳಿಕ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಬರುವಂತೆ ನೋಟಿಸ್ ನೀಡಿದ್ದಾರೆ.
BIG NEWS: ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಕೆ ಪ್ರಮಾಣ: ಹಲವು ಜಿಲ್ಲೆಗಳಲ್ಲಿ ಕೋವಿಡ್ ದಿಢೀರ್ ಸ್ಪೋಟ
ಇನ್ನು ತುಮಕೂರಿನ ಯುನಾನಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದಂತ ಸಾಜಿದ್ ಮಕ್ರಾನಿಯನ್ನು ಉಗ್ರ ಶಂಕೆಯಿಂದ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ತುಮಕೂರಿನ ಸದಾಶಿವನಗರದಲ್ಲಿದ್ದಂತ ಅವರ ನಿವಾಸದಲ್ಲಿ ವಶಕ್ಕೆ ಪಡೆದು, ಬಂಧಿಸಿ ಬೆಂಗಳೂರಿಗೆ ವಿಚಾರಣೆಗಾಗಿ ಕರೆದೊಯ್ದಿದ್ದರು.
BREAKING NEWS: ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿ: 22 ವರ್ಷದ ಕೇರಳದ ವ್ಯಕ್ತಿ ಸಾವು
ಯುನಾನಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಸಾಜಿದ್ ಮಕ್ರಾನಿಯನ್ನು ಎನ್ಐಎ ಅಧಿಕಾರಿಗಳು ವಿಚಾರಣೆಯ ಬಳಿಕ ರಿಲೀಸ್ ಮಾಡಿದ್ದಾರೆ. ಜೊತೆಗೆ ಮತ್ತೆ ವಿಚಾರಣೆಗೆ ಕರೆದ್ರೇ ಹಾಜರಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಾಜಿದ್ ಮಕ್ರಾನಿ ಮೇಲೆ ತೀವ್ರ ನಿಗಾ ವಹಿಸುವಂತೆ ಸ್ಥಳೀಯ ಪೊಲೀಸರಿಗೂ ಸೂಚಿಸಿದ್ದಾರೆ ಎನ್ನಲಾಗಿದೆ.