ಚಂಡೀಗಢ: ಮಗಳೊಂದಿಗಿನ ವೈವಾಹಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅಳಿಯನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಚಂಡೀಗಢ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಆರೋಪಿ, ಪಂಜಾಬ್ ಪೊಲೀಸ್ನ ಅಮಾನತುಗೊಂಡ ಸಹಾಯಕ ಇನ್ಸ್ಪೆಕ್ಟರ್ ಜನರಲ್ ಮಾಲ್ವಿಂದರ್ ಸಿಂಗ್ ಸಿಧು ಅವರನ್ನು ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವರದಿಯ ಪ್ರಕಾರ, ನೀರಾವರಿ ಇಲಾಖೆಯಲ್ಲಿ ಐಆರ್ಎಸ್ ಅಧಿಕಾರಿಯಾಗಿರುವ ಹರ್ಪ್ರೀತ್ ಸಿಂಗ್ ಸಿಧು ಅವರ ಮಗಳೊಂದಿಗೆ ವೈವಾಹಿಕ ವಿವಾದದಲ್ಲಿ ಭಾಗಿಯಾಗಿದ್ದರು. ಪ್ರಕರಣದ ವಿಚಾರಣೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ತಲುಪಿದ್ದರು. ಎರಡೂ ಕುಟುಂಬಗಳು ಮಧ್ಯಸ್ಥಿಕೆಯ ಮೂಲಕ ಪ್ರಕರಣ ಬಗೆ ಹರಿಸಿಕೊಳ್ಳಲು ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿದ್ದವು.
ಕೋರ್ಟ್ ಕಲಾಪದ ಸಮಯದಲ್ಲಿ, ಸಿಧು ಶೌಚಾಲಯವನ್ನು ಬಳಸಲು ವಿನಂತಿಸಿದರು. ಹರ್ಪ್ರೀತ್ ಸಿಂಗ್ ಶೌಚಾಲಯಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ ಅವರ ಮೇಲೆ ಸಿಧು ಬಂದೂಕನ್ನು ತೆಗೆದುಕೊಂಡು ಎರಡು ಬಾರಿ ಗುಂಡು ಹಾರಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು.
ಘಟನೆಯ ನಂತರ, ಹರ್ಪ್ರೀತ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ
BREAKING: ಪ್ಯಾರಿಸ್ ಒಲಂಪಿಕ್ಸ್ 2024: ಬಿಲ್ಲುಗಾರಿಕೆ ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ದೀಪಿಕಾ ಕುಮಾರಿ ಸೋಲು