ಬಳ್ಳಾರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಯೋಜನೆಯಡಿ ಪ್ರಸ್ತಕ ಸಾಲಿಗೆ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗೆ ರೂ.1 ಲಕ್ಷ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತಿಯುಳ್ಳ ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಅನುದಾನದಲ್ಲಿ ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ರೂ.10 ಸಾವಿರ ಮತ್ತು ಉಳಿದ ರೂ.90 ಸಾವಿರ ಶಾಲೆಯ ಎಸ್ಡಿಎಂಸಿಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಲು ನೀಡಲಾಗುವುದು.
ಹಾಗಾಗಿ ಜಿಲ್ಲೆಯಲ್ಲಿ ಪ್ರೋತ್ಸಾಹಧನ ಪಡೆಯಬಯಸುವ ಸರ್ಕಾರಿ ಶಾಲೆಗಳು 2024-25 ನೇ ಸಾಲಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
School Holiday: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ