ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 7 ರನ್ಗಳ ಭರ್ಜರಿ ಜಯ ಸಾಧಿಸಿದ್ದು, ತಡರಾತ್ರಿವರೆಗೂ ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಬೆಂಗಳೂರು, ಪುಣೆ ಹೈದರಾಬಾದ್, ಛತ್ತೀಸ್ಗಢದಿಂದ ಕೇರಳ ಮತ್ತು ಅದರಾಚೆಗೂ ಅಭಿಮಾನಿಗಳು ಬೀದಿಗಿಳಿದು ಧ್ವಜಗಳನ್ನು ಬೀಸಿದರು ಮತ್ತು ಪಟಾಕಿಗಳನ್ನು ಸಿಡಿಸಿ ಐತಿಹಾಸಿಕ ವಿಜಯವನ್ನು ಸಂಭ್ರಮಿಸಿದ್ದಾರೆ.
ಬೆಂಗಳೂರಿನ ಬೀದಿ ಬೀದಿಗಳಲ್ಲಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು, ಟೀಂ ಇಂಡಿಯಾ ಪರ ಘೋಷಣೆ ಕೂಗಿದ್ದಾರೆ.

ಸಂಭ್ರಮಾಚರಣೆಯ ನಡುವೆ ಅಭಿಮಾನಿಗಳು ‘ಭಾರತ್ ಮಾತಾ ಕಿ ಜೈ’ ಮತ್ತು ‘ಹಿಂದೂಸ್ತಾನ್ ಜಿಂದಾಬಾದ್’ ನಂತಹ ದೇಶಭಕ್ತಿ ಘೋಷಣೆಗಳನ್ನು ಕೂಗುವುದರೊಂದಿಗೆ ಮುಂಬೈ ಇದೇ ರೀತಿಯ ಉತ್ಸಾಹಕ್ಕೆ ಸಾಕ್ಷಿಯಾಯಿತು. ಬೆಂಬಲಿಗರು ಒಗ್ಗಟ್ಟಿನಿಂದ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದರಿಂದ ನಗರದ ಕ್ರಿಕೆಟ್ ಮೇಲಿನ ಪ್ರೀತಿ ಸ್ಪಷ್ಟವಾಗಿ ಗೋಚರಿಸಿತು.

Share.
Exit mobile version