ಮಂಗಳೂರು: ದೇಶದಲ್ಲಿ ಪಿಎಫ್ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಬೆನ್ನಲ್ಲೇ ವಿಧಾನಸಭೆಯ ವಿಪಕ್ಷ ಉಪನಾಯಕ ಯು. ಟಿ .ಖಾದರ್ ಮಾತನಾಡಿ, ಸಂವಿಧಾನಕ್ಕೆ ವಿರುದ್ಧವಾಗಿರುವ ಎಲ್ಲಾ ಸಂಘಟನೆಗಳ ವಿರು ದ್ಧ ಶ್ರೀಘ್ರದಲ್ಲೇ ಸಮಾನ ಕ್ರಮ ಕೈಗೊಳ್ಳಲಿ ಎಂದು ಕಿಡಿಕಾರಿದ್ದಾರೆ.
BIG NEWS: ರಾಜ್ಯದಲ್ಲಿ PFI ಬೆಳೆಯಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ; ವಿ.ಸುನಿಲ್ ಕುಮಾರ್ ಆರೋಪ
ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೋಮು ದ್ವೇಷ, ದ್ವೇಷ ಸಮಾಜ, ಪರಸ್ಪರ ಅವಿಶ್ವಾಸ ಮೂಡಿಸುವುದು, ಪರಸ್ಪರ ಹಲ್ಲೆ ಕೊಲೆ ಮಾಡುವ ಯಾವುದೇ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
BIG NEWS: ರಾಜ್ಯದಲ್ಲಿ PFI ಬೆಳೆಯಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ; ವಿ.ಸುನಿಲ್ ಕುಮಾರ್ ಆರೋಪ
ತಾರತಮ್ಯ ಮಾಡದೇ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಕೋಮು ದ್ವೇಷದಿಂದ ಹತ್ಯೆಗಳಾದ ಒಂದು ಪ್ರಕರಣವನ್ನು ಮಾತ್ರ ಎನ್ಐಎಗೆ ನೀಡಲಾಗಿದೆ. ಒಂದು ಪ್ರಕರಣದಲ್ಲಿ ಮಾತ್ರ ಪರಿಹಾರ ನೀಡಲಾಗಿದೆ. ಈ ವಿಚಾರದಲ್ಲಿ ಕೂಡ ತಾರತಮ್ಯ, ದ್ವೇಷ ಇಲ್ಲದೇ, ಯಾರಿಗೂ ಅನ್ಯಾಯ ಮಾಡದೆ ಯಾರು ಇಂತಹ ಕೃತ್ಯಗಳನ್ನು ಮಾಡುತ್ತಾರೆಯೋ ಅವರ ವಿರುದ್ಧ ಯಅವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದರು.
BIG NEWS: ರಾಜ್ಯದಲ್ಲಿ PFI ಬೆಳೆಯಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ; ವಿ.ಸುನಿಲ್ ಕುಮಾರ್ ಆರೋಪ