ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಹರಿಸಲಾಗಿದೆ ಎಂದು ತಾಲಿಬಾನ್ ಹೇಳಿಕೊಂಡಿದ್ದು, ದೇಶವನ್ನು ತೊರೆದಿರುವ ಹಿಂದೂಗಳು ಮತ್ತು ಸಿಖ್ಖರು ವಾಪಸ್‌ ಮರಳುವಂತೆ ಒತ್ತಾಯಿಸಿದ್ದಾರೆ.

ತಾಲಿಬಾನ್ ರಾಜ್ಯ ಸಚಿವರ ಕಚೇರಿಯ ಮಹಾನಿರ್ದೇಶಕ ಡಾ ಮುಲ್ಲಾ ಅಬ್ದುಲ್ ವಾಸಿ ಅವರು ಜುಲೈ 24 ರಂದು ಅಫ್ಘಾನಿಸ್ತಾನದ ಹಿಂದೂ ಮತ್ತು ಸಿಖ್ ಕೌನ್ಸಿಲ್‌ನ ಹಲವಾರು ಸದಸ್ಯರನ್ನು ಭೇಟಿಯಾದ ಮಾಡಿ ಮಾತುಕತೆ ನಡೆಸಿದ್ದರು. ದೇಶದಲ್ಲಿ ಭದ್ರತೆಯನ್ನು ಸ್ಥಾಪಿಸಲಾಗಿದೆ. ಭದ್ರತಾ ಸಮಸ್ಯೆಗಳಿಂದಾಗಿ ದೇಶವನ್ನು ತೊರೆದ ಎಲ್ಲಾ ಭಾರತೀಯ ಮತ್ತು ಸಿಖ್ ದೇಶಬಾಂಧವರು ಈಗ ಅಫ್ಘಾನಿಸ್ತಾನಕ್ಕೆ ಮರಳಬಹುದು ಎಂದಿದ್ದಾರೆ.

ʻದೇಶದಲ್ಲಿ ಭದ್ರತೆಯನ್ನು ಸ್ಥಾಪಿಸಲಾಗಿದೆ. ಕಾಬೂಲ್‌ನ ಗುರುದ್ವಾರದ ಮೇಲೆ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯದ (ಐಎಸ್‌ಕೆಪಿ) ದಾಳಿಯನ್ನು ತಡೆಗಟ್ಟಿದ್ದಕ್ಕಾಗಿ ಸಿಖ್ ನಾಯಕರು ತಾಲಿಬಾನ್‌ಗೆ ಧನ್ಯವಾದ ಅರ್ಪಿಸಿದ್ದಾರೆʼ ಎಂದು ಹೇಳಿಕೊಂಡಿದ್ದಾರೆ.

ಜೂನ್ 18 ರಂದು ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ISKP) ಕಾಬೂಲ್‌ನ ಕಾರ್ಟೆ ಪರ್ವಾನ್ ಗುರುದ್ವಾರದ ಮೇಲೆ ದಾಳಿ ಮಾಡಿತು. ಮಾರಣಾಂತಿಕ ದಾಳಿಯ ಸಮಯದಲ್ಲಿ ಸಿಖ್ ಸೇರಿದಂತೆ ಇಬ್ಬರು ಪ್ರಾಣ ಕಳೆದುಕೊಂಡಿದ್ದರು.

ಅಫ್ಘಾನಿಸ್ತಾನದಲ್ಲಿ ಸಿಖ್ ಸಮುದಾಯ ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರು ಅಫ್ಘಾನಿಸ್ತಾನದಲ್ಲಿ ಹಿಂಸಾಚಾರಕ್ಕೆ ಗುರಿಯಾಗಿದ್ದಾರೆ.

Big news: ಉತ್ತರ ಪ್ರದೇಶದಲ್ಲಿ ಮಂಕಿಪಾಕ್ಸ್ ಶಂಕಿತ ಪ್ರಕರಣ ಪತ್ತೆ : ಕೋವಿಡ್ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸಿದ ಯುಪಿ ಸರ್ಕಾರ|Monkeypox

BIGG NEWS: ಸೋನಿಯಾ ಗಾಂಧಿ ಇಡಿ ಅಧಿಕಾರಿಗಳ ವಿಚಾರಣೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

BIGG BREAKING NEWS : ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ 14 ದಿನಗಳ ನಂತರ ಪ್ರತ್ಯಕ್ಷ!

Share.
Exit mobile version