ನವದೆಹಲಿ: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ವಿಜಯ್ ಅವರು, ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳು ಮತ್ತು ಯೋಜನೆಗಳ ಕುರಿತು ಪ್ರಧಾನಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಭೇಟಿಯ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ತಮಿಳು ಮೀನುಗಾರರ ಬಂಧನ ಸಮಸ್ಯೆ ಮತ್ತು ರಾಜ್ಯಕ್ಕೆ ಸಂಬಂಧಿಸಿದ ಇತರೆ ತುರ್ತು ವಿಷಯಗಳನ್ನು ಮುಖ್ಯಮಂತ್ರಿಗಳು ಪ್ರಧಾನಿ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಕಲ್ಯಾಣ ಯೋಜನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ಮತ್ತು ಅಗತ್ಯ ಅನುಮೋದನೆಗಳನ್ನು ಪಡೆಯುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ.
ಪ್ರಧಾನಿ ಮೋದಿಯವರಲ್ಲದೆ, ತಮ್ಮ ದೆಹಲಿ ಪ್ರವಾಸದ ವೇಳೆ ಸಿಎಂ ವಿಜಯ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನೂ ಭೇಟಿಯಾಗುವ ನಿರೀಕ್ಷೆಯಿದೆ.








