Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

13/04/2026 7:25 AM

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM

ನೈಜೀರಿಯಾದಲ್ಲಿ ವಾಯುಪಡೆಯಿಂದ ಭೀಕರ ಪ್ರಮಾದ: ಉಗ್ರರ ಬದಲು ಮಾರುಕಟ್ಟೆ ಮೇಲೆ ಬಾಂಬ್ ದಾಳಿ, 100ಕ್ಕೂ ಹೆಚ್ಚು ನಾಗರಿಕರ ಸಾವು!

13/04/2026 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ‘ಟಾಟಾ ಕ್ಯಾಪಿಟಲ್ ಫೈನಾನ್ಸ್’ಗೆ ದಂಡ
KARNATAKA

ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ‘ಟಾಟಾ ಕ್ಯಾಪಿಟಲ್ ಫೈನಾನ್ಸ್’ಗೆ ದಂಡ

By kannadanewsnow0910/03/2025 7:03 PM

ಧಾರವಾಡ: ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ಧಾರವಾಡದ ಟಾಟಾ ಕ್ಯಾಪಿಟಲ್ ಫೈನಾನ್ಸ್‍ಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಆಯೋಗ ಆದೇಶ ಮಾಡಿದೆ.

ಧಾರವಾಡ ದಯಲಿಗಾರ ಓಣಿ ನಿವಾಸಿ ಅಫ್ರೀನ್ ದಫೇದಾರ ರವರು ದ್ವೀಚಕ್ರ ವಾಹನ ಖರೀದಿಸಲು ಧಾರವಾಡದ ಟಾಟಾಕ್ಯಾಪಿಟಲ್ ಫೈನಾನ್ಸ್ ನಿಂದ ದಿ:21/09/2019ರಂದು ರೂ.70,635 ಸಾಲ ಪಡೆದಿದ್ದರು. ಸಾಲ ಮರುಪಾವತಿ ನಿಯಮದಂತೆ ತಿಂಗಳಿಗೆ ರೂ.2,571 ರಂತೆ ಅವರು 42 ಕಂತುಗಳಲ್ಲಿ ದಿ:03/09/2019 ರಿಂದ ದಿ:03/04/2024ರವರೆಗೆ ಸಾಲ ಮರುಪಾವತಿ ಮಾಡಿದ್ದರು. ಪೂರ್ತಿ ಸಾಲ ಮರುಪಾವತಿಯಾಗಿದೆ ಮತ್ತು ದೂರುದಾರರಿಂದ ಯಾವುದೇ ಹಣ ಬರುವುದು ಬಾಕಿ ಇಲ್ಲಅಂತಾ ದಿ:17/04/2023ರಂದು ಎದುರುದಾರ ಫೈನಾನ್ಸ್ ನವರು ಆರ್.ಟಿ.ಓ ಕಚೇರಿಗೆ ಮಾಹಿತಿ ನೀಡಿದ್ದರು. ಪೂರ್ತಿ ಸಾಲ ಮರುಪಾವತಿ ಆಗಿದ್ದರೂ ದಿ:17/04/2023ರ ನಂತರ ದಿ:08/10/2024ರವರೆಗೆ ದೂರುದಾರರ ಕೆನರಾ ಬ್ಯಾಂಕಿನ ಎಸ್.ಬಿ. ಖಾತೆಯಿಂದ ಪ್ರತಿ ತಿಂಗಳು ಈ.ಸಿ.ಎಸ್. ಮರುಪಾವತಿ ಆಗುತ್ತಿತ್ತು. ಅದನ್ನು ನಿಲ್ಲಿಸುವಂತೆ ಹಲವುಬಾರಿ ದೂರುದಾರರು ಎದುರುದಾರರಿಗೆ ವಿನಂತಿಸಿದಳು. ವಕೀಲರ ಮೂಲಕ ಕಾನೂನು ಬದ್ಧ ನೋಟಿಸನ್ನು ಕೊಡಿಸಿದಳು. ಆದರೂ ಎದುರುದಾರ ಫೈನಾನ್ಸ್ ನವರು ಈ ಸಿ.ಎಸ್. ಮರುಪಾವತಿ ನಿಲ್ಲಿಸಿರಲಿಲ್ಲ. ಅಂತಹ ಅವರ ವರ್ತನೆ/ಕ್ರಮ ಬ್ಯಾಂಕಿನ ನಿಯಮಾವಳಿಗೆ ವಿರುದ್ಧವಾದುದು ಹಾಗೂ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ದಿ:24/04/2024ರಂದು ದೂರು ದಾರಳು ಎದುರುದಾರ ಟಾಟಾ ಕ್ಯಾಪಿಟಲ್ ಫೈನಾನ್ಸ್ ನವರ ಮೇಲೆ ಕ್ರಮ ಕೈಗೊಳ್ಳುವಂತೆ ಕೋರಿ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಸದಸ್ಯರು ದೂರುದಾರರ ಬ್ಯಾಂಕಿನ ಅಕೌಂಟ ಸ್ಟೇಟ್ ಮೆಂಟಗಳನ್ನು ಪರಿಶೀಲಿಸಿ ದಿ:19/04/2023ಕ್ಕೆ ದೂರುದಾರಳು ಪೂರ್ತಿ ಸಾಲದ ಹಣ ಮರುಪಾವತಿ ಮಾಡಿದ್ದಾಳೆ. ಈ ಬಗ್ಗೆ ದಿ:19/04/2023ರಂದು ಎದುರುದಾರ ಫೈನಾನ್ಸ್ ನವರು ದೂರುದಾರರಿಗೆ ಎನ್.ಓ.ಸಿ. ಕೊಟ್ಟಿದ್ದಾರೆ. ಆದರೂ ದೂರುದಾರರ ಎಸ್.ಬಿ. ಖಾತೆಯಿಂದ ಈ.ಸಿ.ಎಸ್. ಮರುಪಾವತಿ ದಿ:08/10/2024 ರವರೆಗೆ ಮುಂದುವರಿದಿರುವುದು ಬ್ಯಾಂಕು ಹಾಗೂ ರಿಸರ್ವ ಬ್ಯಾಂಕಿನ ನಿಯಮಾವಳಿಗೆ ವಿರುದ್ಧವಾಗಿದೆ. ಅಂತಹ ಎದುರುದಾರ ಟಾಟಾ ಕ್ಯಾಪಿಟಲ್ ಫೈನಾನ್ಸ್ ನವರ ಕ್ರಮ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಅಲ್ಲದೇ ಅವರ ಅನುಚ್ಚಿತ ವ್ಯಾಪಾರ ಪದ್ಧತಿಯನ್ನು ಎತ್ತಿ ತೋರಿಸುತ್ತದೆ ಅಂತಾ ಅಭಿಪ್ರಾಯ ಪಟ್ಟು ತೀರ್ಪು ನೀಡಿದೆ.

ದೂರುದಾರರಿಂದ ಒಟ್ಟು ರೂ.24,603 ಗಳನ್ನು ಹೆಚ್ಚುವರಿಯಾಗಿ ಎದುರುದಾರರು ವಸೂಲಿ ಮಾಡಿದ್ದಾರೆ. ಸದರಿ ಹಣ ರೂ.24,603 ಮತ್ತು ಅದರ ಮೇಲೆ ಶೇ12 ದಿ:01/02/2024 ರಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ಬಡ್ಡಿ ಲೆಕ್ಕ ಹಾಕಿ ದೂರುದಾರರಿಗೆ ಹಿಂದಿರುಗಿಸುವಂತೆ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ ಎದುರುದಾರರು ರೂ.50,000 ಪರಿಹಾರ ಮತ್ತು ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಎದುರುದಾರ ಧಾರವಾಡದ ಟಾಟಾ ಕ್ಯಾಪಿಟಲ್ ಪೈನಾನ್ಸ್‍ನವರಿಗೆ ಆದೇಶಿಸಿದೆ.

Watch Video: ಸತ್ತ ಹಾವನ್ನೇ ‘ಸ್ಕಿಪ್ಪಿಂಗ್ ಹಗ್ಗ’ವಾಗಿ ಬಳಸಿದ ಮಕ್ಕಳು: ವೀಡಿಯೋ ವೈರಲ್ | Children Use Dead Snake As Skipping Rope

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

13/04/2026 7:25 AM2 Mins Read

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM1 Min Read

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM2 Mins Read
Recent News

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

13/04/2026 7:25 AM

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM

ನೈಜೀರಿಯಾದಲ್ಲಿ ವಾಯುಪಡೆಯಿಂದ ಭೀಕರ ಪ್ರಮಾದ: ಉಗ್ರರ ಬದಲು ಮಾರುಕಟ್ಟೆ ಮೇಲೆ ಬಾಂಬ್ ದಾಳಿ, 100ಕ್ಕೂ ಹೆಚ್ಚು ನಾಗರಿಕರ ಸಾವು!

13/04/2026 7:19 AM

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM
State News
KARNATAKA

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

By kannadanewsnow5713/04/2026 7:25 AM KARNATAKA 2 Mins Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಶಕಗಳಿಂದ ಒಂದೇ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್‌ಗಳ ದೀರ್ಘಕಾಲದ ಬೇಡಿಕೆಗೆ ಕೊನೆಗೂ ಸ್ಪಂದನೆ…

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

13/04/2026 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.