ತೆಲಂಗಾಣ : ಇತ್ತೀಚಿಗೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ 50 ವರ್ಷದ ವ್ಯಕ್ತಿ ಒಬ್ಬರಿಗೆ ಗಂಟಲಲ್ಲಿ ಇಡ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ದೋಸೆ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಒಬ್ಬರು ಸಾವನಪ್ಪಿರುವ ಘಟನೆ ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ.
ಹೌದು ತೆಲಂಗಾಣದಲ್ಲಿ ಈ ದುರಂತ ಸಂಭವಿಸಿದೆ. ವೆಂಕಟಯ್ಯ(43) ಮೃತ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಪಟ್ಟಣದ ಸುಭಾಷನಗರ ನಿವಾಸಿಯಾಗಿರುವ ಈತ ದೋಸೆ ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ಈ ಘಟನೆ ನಡೆದಿದೆ.
ಕುಟುಂಬದವರು ಹೇಳುವ ಪ್ರಕಾರ,ವೆಂಕಟಯ್ಯ ಮದ್ಯ ಸೇವಿಸಿ ದೋಸೆ ತಿನ್ನುತ್ತಿದ್ದನು. ಈ ಅನುಕ್ರಮದಲ್ಲಿ, ದೋಸೆ ಗಂಟಲಿಗೆ ಸಿಲುಕಿಕೊಂಡು ಉಸಿರಾಡಲು ಸಾಧ್ಯವಾಗಲಿಲ್ಲ. ನೀರು ಕುಡಿಯುವಾಗ ಪಕ್ಕಕ್ಕೆ ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಇತ್ತೀಚೆಗಷ್ಟೇ ಕೇರಳದಲ್ಲೂ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ವಾಳಯಾರ್ ನಲ್ಲಿ ಇಡ್ಲಿ ತಿನ್ನುವ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 50 ವರ್ಷದ ವ್ಯಕ್ತಿಯೊಬ್ಬರು ಕಡಿಮೆ ಸಮಯದಲ್ಲಿ ಹೆಚ್ಚು ಇಡ್ಲಿಗಳನ್ನು ತಿನ್ನಲು ಪ್ರಯತ್ನಿಸಿದರು. ಸ್ಪರ್ಧೆಯ ಅಂಗವಾಗಿ ಇಡ್ಲಿ ತಿನ್ನುತ್ತಿದ್ದಾಗ ಅದು ಗಂಟಲಿಗೆ ಸಿಲುಕಿದ್ದರಿಂದ ಉಸಿರುಗಟ್ಟಿ ಪ್ರಾಣ ಕಳೆದುಕೊಂಡಿದ್ದಾರೆ.