Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ

19/08/2025 6:54 PM

BREAKING : NEET PG 2025 ಫಲಿತಾಂಶ ಪ್ರಕಟ ; ಈ ರೀತಿ ರಿಸಲ್ಟ್ ನೋಡಿ |NEET PG 2025 Result declared

19/08/2025 6:53 PM

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

19/08/2025 6:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0919/08/2025 6:50 PM

ಬೆಂಗಳೂರು: ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆ, ಬೆಂಗಳೂರಿನ ಸರ್‌ ಸಿ.ವಿ.ರಾಮನ್‌ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್‌ ಲ್ಯಾಬ್‌ ತೆರೆಯಲಾಗುವುದು. ಗೃಹ ಆರೋಗ್ಯ ಯೋಜನೆಯಡಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆ, ಬೆಂಗಳೂರಿನ ಸರ್‌ ಸಿ.ವಿ.ರಾಮನ್‌ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್‌ ಲ್ಯಾಬ್… pic.twitter.com/x5nwbOZIKh

— DIPR Karnataka (@KarnatakaVarthe) August 19, 2025

ಟೆಲಿ ಇ.ಸಿ.ಜಿ ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಅವಕಾಶವಿದ್ದು, ಆರಂಭದಲ್ಲೇ ಪತ್ತೆ ಹಚ್ಚುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಟೆಲಿ ಇಸಿಜಿ ಸಹಕಾರಿಯಾಗಲಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದರು.

ಹಠಾತ್ ಹೃದಯಾಘಾತಗಳನ್ನು ತಡೆಯಲು ಸಹಕಾರಿಯಾಗಿರುವ ಟೆನೆಕ್ಟೆಪ್ಲೇಸ್ ಚುಚ್ಚುಮದ್ದು ಎಲ್ಲ ಆಸ್ಪತ್ರೆಗಳಲ್ಲಿ ಒದಗಿಸುವಂತೆ ಸದನದಲ್ಲಿ ಪರಿಷತ್ ಸದಸ್ಯ ಧನಂಜಯ್ ಸರ್ಜಿ ಮನವಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈಗಾಗಲೇ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ 25 ಸಾವಿರ ಬೆಲೆ ಬಾಳುವ ಟೆನೆಕ್ಟೆಪ್ಲೇಸ್ ಚುಚ್ವುಮದ್ದನ್ನು ಉಚಿತವಾಗಿ ನೀಡಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ವಿಸ್ತರಣೆಯಾಗುವುದರಿಂದ, ಯೋಜನೆಯಡಿ ಟೆನೆಕ್ಟೆಪ್ಲೇಸ್ ಚುಚ್ಚುಮದ್ದು ಕೂಡ ಉಚಿತವಾಗಿ ದೊರೆಯಲಿದೆ ಎಂದು ಉತ್ತರಿಸಿದರು.

ಮಂಗಳೂರು ವೆನ್ ಲಾಕ್ ಆಸ್ಪತ್ರೆ, ಬೆಂಗಳೂರಿನ ಸಿ.ವಿ ರಾಮನ್ ನಗರ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್ ಲ್ಯಾಬ್ ಗಳನನ್ನ ತೆರೆಯಲಾಗುವುದು. ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದು ಮುಖ್ಯ. ಈ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆಯಡಿ 30 ವರ್ಷ ಮೇಲ್ಪಟ್ಟವರನ್ನು ರಕ್ತದೊತ್ತಡ ಹಾಗೂ ಡಯಾಬಿಟಿಸ್ ತಪಾಸಣೆ ನಡೆಸಿ ಉಚಿತವಾಗಿ ಔಷಧಿಗಳನ್ನು ನೀಡುವ ಯೋಜನೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದೆ.‌ ಹೃದಯಘಾತ, ಸ್ಟ್ರೋಕ್, ಕಿಡ್ನಿ ವೈಫಲ್ಯದಂತಹ ಕಾಯಿಲೆಗಳಿಗೆ ಮೂಲ ಕಾರಣ ರಕ್ತದೊತ್ತಡ ಹಾಗೂ ಡಯಾಬಿಟಿಸ್. ಇದಕ್ಕೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಒದಗಿಸಿದಾಗ ಹೃದಯಾಘಾತದಂತಹ ಅಪಾಯಗಳಿಂದ ಜೀವಗಳನ್ನ ಪಾರುಮಾಡಬಹುದು. ಈ ನಿಟ್ಟಿನಲ್ಲಿ ರಕ್ತದೊತ್ತಡ, ಡಯಾಬಿಟಿಸ್ ಜೊತೆಗೆ 14 ಕಾಯಿಲೆಗಳ ತಪಾಸಣೆಯನ್ನು ಗೃಹ ಆರೋಗ್ಯ ಯೋಜನೆಯಡಿ ತೆಗೆದುಕೊಳ್ಳಲಾಗಿದ್ದು, ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

ಸಾಗರ ತಾಲ್ಲೂಕು ಕರವೇ ಅಧ್ಯಕ್ಷರಾಗಿ ‘ಮನೋಜ್ ಕುಗ್ವೆ’ ಪದಗ್ರಹಣ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ

19/08/2025 6:54 PM2 Mins Read

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

19/08/2025 6:46 PM1 Min Read

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

19/08/2025 6:25 PM1 Min Read
Recent News

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ

19/08/2025 6:54 PM

BREAKING : NEET PG 2025 ಫಲಿತಾಂಶ ಪ್ರಕಟ ; ಈ ರೀತಿ ರಿಸಲ್ಟ್ ನೋಡಿ |NEET PG 2025 Result declared

19/08/2025 6:53 PM

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

19/08/2025 6:50 PM

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

19/08/2025 6:46 PM
State News
KARNATAKA

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ

By kannadanewsnow0919/08/2025 6:54 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಹಾಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಬದಲಾದ ಜೀವನಶೈಲಿ ಹಾಗೂ ಆಹಾರ ಕ್ರಮ…

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

19/08/2025 6:50 PM

ಮಂಗಳೂರಿಗೆ 675 ಕೋಟಿ ರೂ.ಗಳ ಕುಡಿಯುವ ನೀರು ಯೋಜನೆ: ಸಚಿವ ಬೈರತಿ ಸುರೇಶ್

19/08/2025 6:46 PM

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

19/08/2025 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.