ಶಿವಮೊಗ್ಗ: ಬೀರೂರು- ತಾಳಗುಪ್ಪ ರೈಲ್ವೆ ಮಾರ್ಗ ಹೆಚ್ಚಿನ ರೈಲುಗಳನ್ನು ಬಿಟ್ಟಿದ್ದಾರೆ. ಇದೀಗ ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಟೆಂಡರ್ ಕರೆದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

BIGG NEWS: ಆ.28ಕ್ಕೆ ಸೂಪರ್‌ಟೆಕ್‌ನ ಅವಳಿ ಟವರ್‌ ನೆಲಸಮ; ಅವಧಿ ವಿಸ್ತರಿಸಿದ ಸುಪ್ರೀಂಕೋರ್ಟ್‌

 

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಕಾಮಗಾರಿ ವೆಚ್ಚದ ಮೊತ್ತ 532 ರೂಪಾಯಿ ಕೋಟಿ. ಮೊದಲ ಹಂತದಲ್ಲಿ ಶಿವಮೊಗ್ಗ ಜಿಲ್ಲೆಯ 30 ಹಳ್ಳಿಗಳಲ್ಲಿ, 48 ಕಿಮೀ ಮಾರ್ಗದಲ್ಲಿ ರೈಲುಹಳಿಗಳನ್ನು ಅಳವಡಿಸಲಾಗುವುದು ಎಂದರು.
ಭೂಸ್ವಾಧೀನಕ್ಕೆ 130 ರೂಪಾಯಿ ಕೋಟಿ ವೆಚ್ಚ ಮಾಡಲಾಗುವುದು. 555 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯು ಈಗಾಗಲೇ ಶೇ 90ರಷ್ಟು ಮುಗಿದಿದೆ. ನವೆಂಬರ್ ತಿಂಗಳೊಳಗೆ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಳ್ಳಲಿದ್ದು, ಒಟ್ಟಾರೆ ಕಾಮಗಾರಿಯನ್ನು ಪೂರ್ಣಗೊಳಿಸಲು 30 ತಿಂಗಳ ಕಾಲಮಿತಿ ವಿಧಿಸಲಾಗಿದೆ ಎಂದಿದ್ದಾರೆ.

Share.
Exit mobile version