ಯಾದಗಿರಿ : ಕಾಲುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣಕ್ಕೀಡಾದ ಘಟನೆ ಹುಣಸಗಿ ತಾಲೂಕಿನ ರಾಜನಕೂಳೂರ ಗ್ರಾಮದಲ್ಲಿ ನಡೆದಿದೆ. 

ಮೃತರನ್ನು ಮಲ್ಲಿಕಾರ್ಜುನ(35)   ಪರಶುರಾಮ್ (32) ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ್ ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರಲು ಹೋಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಕಾಲುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ  ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾಮನಟಗಿಯಿಂದ ನಾರಾಯಣಪುರಕ್ಕೆ ತೆರಳುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ.  ಕೊಡೆಕಲ್  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧಕ್ಕಾಗಿ ರಾಷ್ಟ್ರೀಯ ಭದ್ರತೆಯಲ್ಲಿ ಭಾರತ ರಾಜಿ ಮಾಡಿಕೊಳ್ಳಲ್ಲ : ರಾಜನಾಥ್ ಸಿಂಗ್

BREAKING NEWS : ಬೆಂಗಳೂರಿನಲ್ಲಿ ಹಿರಿಯ ‘IPS’ ಅಧಿಕಾರಿ R. ದಿಲೀಪ್ ನಿಧನ

Share.
Exit mobile version