Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM

BREAKING : ಹ್ಯಾಂಡ್ ಶೇಕ್ ವಿವಾದ : ಏಷ್ಯಾ ಕಪ್ ನಿಂದ ಮ್ಯಾಚ್ ರೆಫರಿ `ಆಂಡಿ ಪೈಕ್ರಾಫ್ಟ್’ ರನ್ನು ತೆಗೆದುಹಾಕಬೇಕೆಂಬ ಪಾಕ್ ಬೇಡಿಕೆ ತಿರಸ್ಕರಿಸಿದ ಐಸಿಸಿ

16/09/2025 12:17 PM

ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್ಶಿಪ್: ಚಿನ್ನದ ಪದಕ ಗೆದ್ದ ಆನಂದಕುಮಾರ್ ವೇಲ್ಕುಮಾರ್ : ಪ್ರಧಾನಿ ಮೋದಿ ಶ್ಲಾಘನೆ

16/09/2025 12:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
KARNATAKA

ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

By kannadanewsnow0923/05/2024 3:52 PM

ಬೆಂಗಳೂರು: ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಕೆ ಮಾಡಿ. ಯಾವುದೇ ಕಾರಣಕ್ಕೂ ಕಾಲರಾ ಹೆಚ್ಚಾಗದಂತೆ, ಅಸ್ವಸ್ಥತೆಯ ಪ್ರಕರಣಗಳು ವರದಿಯಾಗದಂತೆ ಎಚ್ಚರಿಕೆ ವಹಿಸುವಂತೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ ಎಂದರು.

ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ ಎಂದು ಹೇಳಿದರು.

ಜೂನ್‌ 6 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ ಎಂದರು.

500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಲು ಸೂಚಿಸಿದರು.

ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ. ನರಸೀಪುರ ತಾಲ್ಲೂಕು ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ. ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸಲು ವಿಫಲವಾಗಿದ್ದಾರೆ. ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸದೇ ಇರುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ.  ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವುದು.  ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡೋದಾಗಿ ಎಚ್ಚರಿಕೆ ನೀಡಿದರು.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ,  ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್‌: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!

ಶಿವಮೊಗ್ಗ: ಮೇ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM1 Min Read

ಸಣ್ಣ ಹೂಡಿಕೆ – ದೊಡ್ಡ ಲಾಭ : ಜಸ್ಟ್ 10 ರೂಪಾಯಿಯ ಈ ಸಸ್ಯ ಬೆಳೆಸಿ ಮಾರಾಟ ಮಾಡಿದ್ರೆ ಕೋಟ್ಯಾಧಿಪತಿ ಆಗಬಹುದು.!,

16/09/2025 11:53 AM2 Mins Read

ರಾಜ್ಯಾದ್ಯಂತ ‘ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ’ ಆರಂಭ : ನೋಂದಣಿಗೆ ಜಸ್ಟ್ ಹೀಗೆ ಮಾಡಿ.!

16/09/2025 11:39 AM2 Mins Read
Recent News

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

16/09/2025 12:25 PM

BREAKING : ಹ್ಯಾಂಡ್ ಶೇಕ್ ವಿವಾದ : ಏಷ್ಯಾ ಕಪ್ ನಿಂದ ಮ್ಯಾಚ್ ರೆಫರಿ `ಆಂಡಿ ಪೈಕ್ರಾಫ್ಟ್’ ರನ್ನು ತೆಗೆದುಹಾಕಬೇಕೆಂಬ ಪಾಕ್ ಬೇಡಿಕೆ ತಿರಸ್ಕರಿಸಿದ ಐಸಿಸಿ

16/09/2025 12:17 PM

ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್ಶಿಪ್: ಚಿನ್ನದ ಪದಕ ಗೆದ್ದ ಆನಂದಕುಮಾರ್ ವೇಲ್ಕುಮಾರ್ : ಪ್ರಧಾನಿ ಮೋದಿ ಶ್ಲಾಘನೆ

16/09/2025 12:15 PM

SHOCKING : ಪೈಶಾಚಿಕ ಕೃತ್ಯ : ಮದ್ಯ ಕುಡಿಸಿ 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್.!

16/09/2025 12:08 PM
State News
KARNATAKA

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ದ ಜನತೆಗೆ ಗುಡ್ ನ್ಯೂಸ್ : ನಾಳೆ ಅತ್ಯಾಧುನಿಕ ಆಂಬುಲೆನ್ಸ್ ಗಳಿಗೆ ಚಾಲನೆ

By kannadanewsnow5716/09/2025 12:25 PM KARNATAKA 1 Min Read

ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಾಳೆ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ 32 ನೂತನ ಆಂಬುಲೆನ್ಸ್ ಗಳ ಸೇವೆಗೆ…

ಸಣ್ಣ ಹೂಡಿಕೆ – ದೊಡ್ಡ ಲಾಭ : ಜಸ್ಟ್ 10 ರೂಪಾಯಿಯ ಈ ಸಸ್ಯ ಬೆಳೆಸಿ ಮಾರಾಟ ಮಾಡಿದ್ರೆ ಕೋಟ್ಯಾಧಿಪತಿ ಆಗಬಹುದು.!,

16/09/2025 11:53 AM

ರಾಜ್ಯಾದ್ಯಂತ ‘ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ’ ಆರಂಭ : ನೋಂದಣಿಗೆ ಜಸ್ಟ್ ಹೀಗೆ ಮಾಡಿ.!

16/09/2025 11:39 AM

ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ | School Holiday

16/09/2025 11:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.