Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು? 99% ಜನರಿಗೆ ತಿಳಿದಿಲ್ಲದ ‘ಬ್ರಾಹ್ಮಿ ಮುಹೂರ್ತ’ದ ಅಸಲಿ ರಹಸ್ಯ ಇಲ್ಲಿದೆ!

ಕೆಂಪುಕೋಟೆ ಸ್ಫೋಟದ ಹಿಂದೆ ಅಲ್-ಖೈದಾ ಸಂಚು: ‘ಹೆವನ್ಲಿ ಹಿಂದ್’ ಹೆಸರಲ್ಲಿ ಭಾರತದ ಮೇಲೆ ಆಪರೇಷನ್; ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ALERT : ಏಕಕಾಲಕ್ಕೆ 5ಕ್ಕೂ ಹೆಚ್ಚು ಮಾತ್ರೆ ಸೇವಿಸುವವರೇ ಎಚ್ಚರ : ಇದು ನಿಮ್ಮ ಜೀವಕ್ಕೆ ಕಂಟಕವಾಗಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂ.30ರಂದು ರಾಜ್ಯಾಧ್ಯಂತ ‘TET ಪರೀಕ್ಷೆ’: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ | KAR TET-2024 Exam
KARNATAKA

ಜೂ.30ರಂದು ರಾಜ್ಯಾಧ್ಯಂತ ‘TET ಪರೀಕ್ಷೆ’: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ | KAR TET-2024 Exam

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : 2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(KAR TET-24) ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.26 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂ.30 ರ ಬೆಳಿಗ್ಗೆ 9.30 ರಿಂದ 12 ಗಂಟೆವರೆಗೆ ಪತ್ರಿಕೆ-1, ಅಪರಾಹ್ನ 2 ರಿಂದ 4.30 ರವರೆಗೆ ಪತ್ರಿಕೆ 2 ಪರೀಕ್ಷೆಗಳು ನಡೆಯಲಿದೆ. 11 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-1 ಹಾಗೂ 17 ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕೆ-2 ರ ಪರೀಕ್ಷೆ ನಡೆಯಲಿದೆ. ಮೊದಲನೇ ಅಧಿವೇಶನದಲ್ಲಿ 2874 ಮತ್ತು ಎರಡನೇ ಅಧಿವೇಶನದಲ್ಲಿ 4676 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಈಗಾಗಲೇ ಕೇಂದ್ರ ಸ್ಥಾನಿಕ ಜಾಗೃತದಳ, ಮಾರ್ಗಾಧಿಕಾರಿಗಳು, ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಮತ್ತು ಇತರೆ ಸಿಬ್ಬಂದಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನು ಜಿಲ್ಲಾಧಿಕಾರಿಗಳು ಘೋಷಿಸಿ ಆದೇಶ ಹೊರಡಿಸಿರುತ್ತಾರೆ.

ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಮಳೆಗಾಲವಾದ್ದರಿಂದ ಪರೀಕ್ಷೆ ಮುನ್ನ ಕೊಠಡಿಗಳ ಸ್ಥಿತಿಗತಿಯನ್ನು ಪರಿಶೀಲಿಸಬೇಕು. ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳು ಇರುವಂತೆ ಖಾತ್ರಿಪಡಿಸಿಕೊಳ್ಳಬೇಕು.

ಅಭ್ಯರ್ಥಿಗಳು ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರೀಕ್ಷಾ ಕೇಂದ್ರಕ್ಕೆ ತರಬೇಕು. ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಬರಬೇಕು. ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುದಿಲ್ಲ. ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರಗಳಿಗೆ ಬಿಡಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿವುದು.

ಅಭ್ಯರ್ಥಿಗಳು ಗುಂಪುಗೂಡದಂತೆ ಪರೀಕ್ಷಾ ಕೇಂದ್ರದ ಹೊರಗಡೆ 2-3 ಕಡೆಗಳಲ್ಲಿ ನೋಟಿಸ್ ಬೊರ್ಡ್‍ನ್ನು ಹಾಕಿ ಅಭ್ಯರ್ಥಿಗಳಿಗೆ ನೋಂದಣಿ ಸಂಖ್ಯೆ, ಕೊಠಡಿ ಸಂಖ್ಯೆ ಮತ್ತು ಅಂತಸ್ತಿನ ಸಂಖ್ಯೆ ಪ್ರಕಟಿಸಬೇಕು. ದೃಷ್ಟಿದೋಷವುಳ್ಳವರು ಮತ್ತು ವಿಕಲಚೇತನರಿಗೆ ಇರುವ ಸೌಲಭ್ಯಗಳನ್ನು ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಎಲ್ಲ ಅಧಿಕಾರಿ/ಸಿಬ್ಬಂದಿಗಳು ತಮಗೆ ನೀಡಲಾದ ಮಾರ್ಗಸೂಚಿಗಳನ್ನು ಅನುಸರಿಸಿ, ಪರೀಕ್ಷೆ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರಪ್ಪ ಮಾತನಾಡಿ, ಕೇಂದ್ರ ಸ್ಥಾನಿಕ ಜಾಗೃತ ದಳ, ಮಾರ್ಗಾಧಿಕಾರಿಗಳು, ಅಧೀಕ್ಷಕರು ಮತ್ತು ಪರೀಕ್ಷಾ ನಿಯೋಜಿತ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳು ಮತ್ತು ಪರೀಕ್ಷಾ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜ್, ಶಿಕ್ಷಣಾಧಿಕಾರಿ ಲೋಕೇಶಪ್ಪ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ

Share. Facebook Twitter LinkedIn WhatsApp Email

Related Posts

ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು? 99% ಜನರಿಗೆ ತಿಳಿದಿಲ್ಲದ ‘ಬ್ರಾಹ್ಮಿ ಮುಹೂರ್ತ’ದ ಅಸಲಿ ರಹಸ್ಯ ಇಲ್ಲಿದೆ!

2 Mins Read

SHOCKING : ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಒಂದೇ ದಿನ 6 ಮಂದಿ ಬಲಿ : ವಿಜಯಪುರದಲ್ಲಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ.!

1 Min Read

BREAKING : ರಾಜ್ಯದಲ್ಲಿ ಭಾರೀ ಮಳೆಗೆ ಘೋರ ದುರಂತ : ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು.!

1 Min Read
Recent News

ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು? 99% ಜನರಿಗೆ ತಿಳಿದಿಲ್ಲದ ‘ಬ್ರಾಹ್ಮಿ ಮುಹೂರ್ತ’ದ ಅಸಲಿ ರಹಸ್ಯ ಇಲ್ಲಿದೆ!

ಕೆಂಪುಕೋಟೆ ಸ್ಫೋಟದ ಹಿಂದೆ ಅಲ್-ಖೈದಾ ಸಂಚು: ‘ಹೆವನ್ಲಿ ಹಿಂದ್’ ಹೆಸರಲ್ಲಿ ಭಾರತದ ಮೇಲೆ ಆಪರೇಷನ್; ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ALERT : ಏಕಕಾಲಕ್ಕೆ 5ಕ್ಕೂ ಹೆಚ್ಚು ಮಾತ್ರೆ ಸೇವಿಸುವವರೇ ಎಚ್ಚರ : ಇದು ನಿಮ್ಮ ಜೀವಕ್ಕೆ ಕಂಟಕವಾಗಬಹುದು.!

‘ಯುದ್ಧ ಯಾವುದಕ್ಕೂ ಪರಿಹಾರವಲ್ಲ, ಶಾಂತಿ ಮಾತುಕತೆಯೇ ಏಕೈಕ ದಾರಿ’:ರಷ್ಯಾ ವಿದೇಶಾಂಗ ಸಚಿವರ ಜೊತೆ ಪ್ರಧಾನಿ ಮೋದಿ ಮಾತುಕತೆ!

State News
KARNATAKA

ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು? 99% ಜನರಿಗೆ ತಿಳಿದಿಲ್ಲದ ‘ಬ್ರಾಹ್ಮಿ ಮುಹೂರ್ತ’ದ ಅಸಲಿ ರಹಸ್ಯ ಇಲ್ಲಿದೆ!

By kannadanewsnow57 KARNATAKA 2 Mins Read

ನಮ್ಮ ಪೂರ್ವಜರು ಪಾಲಿಸುತ್ತಿದ್ದ ಪ್ರತಿಯೊಂದು ಆಚಾರ-ವಿಚಾರಗಳ ಹಿಂದೆ ಒಂದು ವೈಜ್ಞಾನಿಕ ಕಾರಣವಿರುತ್ತದೆ. ಅಂತಹವುಗಳಲ್ಲಿ ಪ್ರಮುಖವಾದದ್ದು ‘ಬ್ರಾಹ್ಮಿ ಮುಹೂರ್ತ’. ಇಂದಿನ ಆಧುನಿಕ…

SHOCKING : ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಒಂದೇ ದಿನ 6 ಮಂದಿ ಬಲಿ : ವಿಜಯಪುರದಲ್ಲಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ.!

BREAKING : ರಾಜ್ಯದಲ್ಲಿ ಭಾರೀ ಮಳೆಗೆ ಘೋರ ದುರಂತ : ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು.!

BREAKING : ರಾಜ್ಯದಲ್ಲಿ ಘೋರ ದುರಂತ : ಭಾರಿ ಮಳೆ ಗಾಳಿಗೆ ಮನೆ ಮೇಲ್ಚಾವಣಿ ಗೋಡೆ ಕುಸಿದು ನಾಲ್ವರು ಜೀವಂತ ಸಮಾಧಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.