Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM

BREAKING: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಟ್ರಂಪ್ ಶಾಂತಿ ಮಂತ್ರ: ಇರಾನ್ ಮೇಲಿನ ದಾಳಿ 5 ದಿನ ಸ್ಥಗಿತ

23/03/2026 5:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು
KARNATAKA

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

By kannadanewsnow0923/03/2026 5:19 PM

ನವದೆಹಲಿ: ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿಯೇ ಸೋಮವಾರ ತಿರುಗೇಟು ನೀಡಿದರು.

ಈ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ದೇವೇಗೌಡರು, ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದರು.

ಕಾಂಗ್ರೆಸ್ ಪಕ್ಷವು ನಮ್ಮ ಪಕ್ಷಕ್ಕೆ ಒಂದಲ್ಲ, ಎರಡಲ್ಲ.. ಅನೇಕ ಬಾರಿ ದ್ರೋಹ ಮಾಡಿದೆ. ಅದರ ಬಗ್ಗೆ ನಾನು ಸಾಕ್ಷಿ ಸಹಿತವಾಗಿ ಮಾತನಾಡಬಲ್ಲೆ. ಅದೆಲ್ಲವನ್ನು ಮರೆಮಾಚಲು ಖರ್ಗೆ ಅವರು ನನ್ನ ವಿಷಯ ಎಳೆದು ತಂದಿದ್ದಾರೆ. ಅದಕ್ಕೆ ನಾನು ಉತ್ತರ ನೀಡಬೇಕಿದೆ ಎಂದು ದೇವೇಗೌಡರು ಹೇಳಿದರು.

ಈ ಸಂದರ್ಭದಲ್ಲಿ ತಮ್ಮ ಕಾಲದ ಕರ್ನಾಟಕ ರಾಜ್ಯದ ರಾಜಕಾರಣವನ್ನು ಮೆಲುಕು ಹಾಕಿದ ಮಾಜಿ ಪ್ರಧಾನಿಗಳು; ನಿಜಲಿಂಗಪ್ಪ, ದೇವರಾಜ ಅರಸು, ಬಂಗಾರಪ್ಪ ಅವರಿಗೆ ಏನಾಯಿತು ಎಂಬುದು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಗೊತ್ತಿದೆ. ಅವರು ಹೇಗೆ ಅಧಿಕಾರ ಕಳೆದುಕೊಂಡರು ಎಂಬುದನ್ನು ಖರ್ಗೆ ಅವರು ಹೇಳಬೇಕಾಗುತ್ತದೆ. ಅವರೆಲ್ಲರೂ ಅಧಿಕಾರ ಕಳೆದುಕೊಂಡಿದ್ದಕ್ಕೆ ನಾವು ಸಾಕ್ಷಿಗಳಾಗಿದ್ದೆವು ಎಂದು ಟೀಕಾ ಪ್ರಹಾರ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕೆಂದು ನಾವೆಲ್ಲರೂ ಆಶಿಸಿದ್ದೆವು. ಆದರೆ, ಅವರ ಸ್ವಂತ ಪಕ್ಷವೇ ಅವರನ್ನು ಸಿಎಂ ಆಗಲು ಬಿಡಲಿಲ್ಲ ಎಂಬ ಸಂಗತಿಯನ್ನು ಮಾಜಿ ಪ್ರಧಾನಿಗಳು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

ನಿಜ ಹೇಳಬೇಕು ಎಂದರೆ, ನನ್ನ ಮತ್ತು ನರೇಂದ್ರ ಮೋದಿ ಅವರ ನಡುವಿನ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ. 2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸಿದ್ದೆ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡಿದ್ದೆ. ಅವರು ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದೆ. ಬಳಿಕ ಅವರು ಗೆದ್ದ ನಂತರ ನಾನು ನಿಜವಾಗಿಯೂ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ, ಮೋದಿ ಅವರು ಹಾಗೆ ಮಾಡಬೇಡಿ ಎಂದು ತಡೆದರು. ನಾನು ಅವತ್ತಿನ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ ಎಂದು ದೇವೇಗೌಡರು ಹೇಳಿದರು.

ಆ ಘಟನೆ ನಡೆದ ನಂತರ ನಾನು ಅವರ ಮೈತ್ರಿಯಲ್ಲಿ ಇದ್ದೇನೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಸದೃಢ ನಾಯಕತ್ವ ನೀಡಿದ್ದಾರೆ. ಜನರು ಕೂಡ ಅವರ ಮೇಲೆ ಅಪರಿಮಿತ ವಿಶ್ವಾಸ ಇರಿಸಿ ಸತತವಾಗಿ ಆಯ್ಕೆ ಮಾಡುತ್ತಾ ಬರುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

2018ರಲ್ಲಿ ಕಾಂಗ್ರೆಸ್ ಪಕ್ಷದ ಜತೆ ನಮ್ಮ ಪಕ್ಷ ಮೈತ್ರಿ ಹೊಂದಿದ್ದ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಸಿಎಂ ಆಗದಂತೆ ತಡೆಯಿತು. ಆಗ ಮತ್ತೆ ಮನೆ ಬಾಗಿಲಿಗೆ ಬಂದು ಮೈತ್ರಿ ಹಸ್ತ ಚಾಚಿದ ಕಾಂಗ್ರೆಸ್ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವಂತೆ ಒತ್ತಡ ಹೇರಿತು. ಮತ್ತೆ ಒಂದೇ ವರ್ಷದಲ್ಲಿ ಕಾಂಗ್ರೆಸ್ ನಮಗೆ ದ್ರೋಹ ಬಗೆಯಿತು. ಈ ಎಲ್ಲಾ ವಿವರಗಳು ಖರ್ಗೆ ಅವರಿಗೆ ಗೊತ್ತಿವೆ ಎಂದು ದೇವೇಗೌಡರು ಹೇಳಿದರು.

ಈ ಸದನದಲ್ಲಿ ಖರ್ಗೆ ಅವರು ಮಾತನಾಡಿದ ಸಂದರ್ಭದಲ್ಲಿ ನಾನು ಹಾಜರು ಇರಲಿಲ್ಲ. ಯುಗಾದಿ ಹಬ್ಬ ದಕ್ಷಿಣ ಭಾರತದಲ್ಲಿಯೇ ದೊಡ್ಡ ಹಬ್ಬ, ಹೀಗಾಗಿ ನಾನು ಬೆಂಗಳೂರಿಗೆ ಹೋಗಬೇಕಿತ್ತು. ಆ ಸಂದರ್ಭದಲ್ಲಿ ಖರ್ಗೆ ಅವರು ನಮ್ಮ ಮತ್ತು ಮೋದಿ ಅವರ ನಡುವಿನ ಮೈತ್ರಿ ಬಗ್ಗೆ ಮಾತಾಡಿದ್ದಾರೆ. ಅದಕ್ಕೆ ನಾನು ಉತ್ತರ ಕೊಡಬೇಕಿತ್ತು ಎಂದು ಅವರು ಹೇಳಿದರು.

1962ರಲ್ಲಿ ನಾನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ಕೊಡುವುದಾಗಿ ಹೇಳಿತ್ತು. ನೀಲಂ ಸಂಜೀವರೆಡ್ಡಿ ಅವತ್ತಿನ ಎಐಸಿಸಿ ಅಧ್ಯಕ್ಷರಾಗಿದ್ದರು. ಆದರೆ, ನನಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತು. ನನ್ನ ರಾಜಕೀಯದ ಅಂತ್ಯಕಾಲದಲ್ಲಿ ನಾನಿದ್ದೇನೆ. ಈಗಲೂ ನಾನು ರಾಜ್ಯಸಭೆ ಸದಸ್ಯನಾಗಿ ಇಲ್ಲಿ ಕೂತಿದ್ದೇನೆ. ಇನ್ನೊಂದು ತಿಂಗಳಲ್ಲಿ ಈ ಸದಸ್ಯತ್ವದ ಅವಧಿ ಮುಗಿಯುತ್ತದೆ. ಹೀಗಾಗಿ ನಾನು ಖರ್ಗೆ ಅವರು ಎತ್ತಿರುವ ಪ್ರಶ್ನೆಗೆ ಉತ್ತರ ಕೊಡಬೇಕಿದೆ ಎಂದು ಅವರು ಒತ್ತಿ ಹೇಳಿದರು.

BREAKING: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಟ್ರಂಪ್ ಶಾಂತಿ ಮಂತ್ರ: ಇರಾನ್ ಮೇಲಿನ ದಾಳಿ 5 ದಿನ ಸ್ಥಗಿತ

EPFO ಮಾಸ್ಟರ್ ಪ್ಲಾನ್: 10,181 ಕೋಟಿ ರೂ. ಹಕ್ಕು ಪಡೆಯದ ಹಣ ಪಾವತಿಗೆ ‘ಆಟೋ-ಸೆಟಲ್ಮೆಂಟ್’ ಫೀಚರ್ ಜಾರಿ!

Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM3 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM1 Min Read

ಬೆಂಗಳೂರಿಗೆ ಬರಲು ಇಷ್ಟವಿಲ್ಲದೆ 34 ಲಕ್ಷ ಸಂಬಳದ ಆಫರ್ ತಿರಸ್ಕರಿಸಿದ ವ್ಯಕ್ತಿ: ನೆಟ್ಟಿಗರು ಹೇಳಿದ್ದೇನು ಓದಿ!

23/03/2026 4:45 PM2 Mins Read
Recent News

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM

BREAKING: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಟ್ರಂಪ್ ಶಾಂತಿ ಮಂತ್ರ: ಇರಾನ್ ಮೇಲಿನ ದಾಳಿ 5 ದಿನ ಸ್ಥಗಿತ

23/03/2026 5:17 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM
State News
KARNATAKA

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

By kannadanewsnow0923/03/2026 5:24 PM KARNATAKA 3 Mins Read

ಮಂಡ್ಯ : ಮದ್ದೂರು ನಗರ ವ್ಯಾಪ್ತಿಯಲ್ಲಿ ಬೆಂಗಳೂರು ಮಾದರಿಯ ಉದ್ಯಾನಗಳ ಅಭಿವೃದ್ಧಿ, ನಗರವನ್ನು ಸುಂದರ ಹಾಗೂ ಹಸಿರೀಕರಣ, ಸುಸಜ್ಜಿತ ಮಾರುಕಟ್ಟೆ,…

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM

ಬೆಂಗಳೂರಿಗೆ ಬರಲು ಇಷ್ಟವಿಲ್ಲದೆ 34 ಲಕ್ಷ ಸಂಬಳದ ಆಫರ್ ತಿರಸ್ಕರಿಸಿದ ವ್ಯಕ್ತಿ: ನೆಟ್ಟಿಗರು ಹೇಳಿದ್ದೇನು ಓದಿ!

23/03/2026 4:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.