Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲಡಾಖ್ ಪ್ರತಿಭಟನೆಗಳ ಮಧ್ಯೆ ‘ಸೋನಮ್ ವಾಂಗ್ಚುಕ್’ರ ‘NGO’ದ ವಿದೇಶಿ ಹಣಕಾಸು ಪರವಾನಗಿ ರದ್ದು

25/09/2025 7:06 PM

ರಾಜ್ಯ ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಬುರುಡೆ ಗ್ಯಾಂಗ್‌ : ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು

25/09/2025 6:16 PM
Iblur Junction traffic problem CM Siddaramaiah writes a letter to Azim Premji

BREAKING : ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್ ಜಿ ; ‘ವಿಪ್ರೋ ಕ್ಯಾಂಪಸ್’ ಒಳಗೆ ಸಂಚಾರಕ್ಕೆ ನಿರಾಕರಣೆ

25/09/2025 6:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಬುರುಡೆ ಗ್ಯಾಂಗ್‌ : ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು
KARNATAKA

ರಾಜ್ಯ ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಬುರುಡೆ ಗ್ಯಾಂಗ್‌ : ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು

By kannadanewsnow0525/09/2025 6:16 PM

ಬೆಂಗಳೂರು : ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು ವಜಾಗೊಂಡಿದ್ದರೂ ಸಹ, ಅದನ್ನು ಮುಚ್ಚಿಟ್ಟು ಎಸ್‌ಐಟಿ ರಚನೆ ಆಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾ ಬಯಲಾಗಿದೆ. 2025 ಮೇ 5 ರಂದು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ವಕೀಲರಾದ ಕೆ.ವಿ. ಧನಂಜಯ್ ಹಾಗೂ ಅವರ ವಕೀಲರ ತಂಡದ ಮೂಲಕ ಚಿನ್ನಯ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದರು.

ಆ ಪಿಐಎಲ್‌ ಅರ್ಜಿ ಮಾನ್ಯ ಸುಪ್ರೀಂ ಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಸತೀಶ್‌ ಚಂದ್ರ ಶರ್ಮ ಅವರ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ಸಂದರ್ಭದಲ್ಲಿ 1995 ರಿಂದ 2004 ರ ವರೆಗೆ ನಡೆದ ಘಟನೆಗಳ ಬಗ್ಗೆ 20 ವರ್ಷಗಳ ನಂತರ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಧೀರ್ಘಕಾಲೀನ ವಿಳಂಬಕ್ಕೆ ಯಾವುದೇ ಸಕಾರಣಗಳನ್ನು ನೀಡಲಾಗಿಲ್ಲ. ಈ ಸಾರ್ವಜನಿಕ ಹಿತಾಸಕ್ತಿಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು ವ್ಯವಸ್ಥೆಯ ವಿರುದ್ಧ ಮಾಡಲಾದ ಸುಳ್ಳು ಆಪಾದನೆ ಎಂದು ಹೇಳಿದೆ. ಮಾತ್ರವಲ್ಲದೇ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮುಖಾಂತರ ಸುಳ್ಳು ಸಾಧನೆ ಮಾಡಲು ಹೊರಟಿರುವುದು, ಆದ್ದರಿಂದ ಈ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಾನ್ಯ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಇದು “Publicity Interest,” “Paisa Interest,” “Private Interest,” “Political Interest Litigation” ಅರ್ಜಿ ಆಗಿದ್ದು, ಮಾನ್ಯ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಮುಚ್ಚಿಟ್ಟು, ಜುಲೈ ತಿಂಗಳಲ್ಲಿ ಚಿನ್ನಯ್ಯನ ಮೂಲಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಲಾಗಿದ್ದು, ನಂತರದ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟವಾಗಿ ರೂಪು ಪಡೆಯಿತು. ಸರ್ಕಾರ ವಿಶೇಷ ತನಿಖಾ ತಂಡವನ್ನು ರಚನೆ ಮಾಡುವ ಹಂತದವರೆಗೆ ತಲುಪಿದ್ದು, ಎಸ್‌ಐಟಿ ರಚನೆಯಾಯಿತು.

ಎಸ್‌ಐಟಿ ತನಿಖೆ ನಡೆಯುತ್ತಿರುವ ಹಂತದಲ್ಲಿಯೇ, ಪುರಂದರ ಗೌಡ ಹಾಗೂ ತುಕಾರಾಂ ಗೌಡ ಎಂಬ ಇಬ್ಬರು ವ್ಯಕ್ತಿಗಳು ಹೈಕೋರ್ಟ್‌ಗೆ ರಿಟ್‌ ಅರ್ಜಿಯನ್ನು ಸಲ್ಲಿಸಿ, ಚಿನ್ನಯ್ಯ ನೀಡಿದ ದಾಖಲೆ ಹಾಗೂ ಹೇಳಿಕೆ ಆಧರಿಸಿ ಇನ್ನಷ್ಟು ವಿಚಾರಗಳು ನಮಗೆ ತಿಳಿದಿವೆ. ಈ ವಿಚಾರಗಳನ್ನು ಎಸ್‌ಐಟಿ ತನಿಖೆ ನಡೆಸಬೇಕು ಎಂದು ಅರ್ಜಿ ಹಾಕಿರುವುದು ಗಮನಾರ್ಹವಾಗಿದೆ. ತುಕಾರಾಂ ಗೌಡ ಮತ್ತು ಪುರಂದರ ಗೌಡ ಸಲ್ಲಿಸಿದ ರಿಟ್‌ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಮಾನ್ಯ ಕರ್ನಾಟಕ ಹೈಕೋರ್ಟ್‌ ಪ್ರಕರಣದ ತನಿಖೆ ಬಗ್ಗೆ ವರದಿ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ ಸೂಚನೆ ನೀಡಿತ್ತು.

ಈ ಹಿನ್ನಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು ಚಿನ್ನಯ್ಯ ನೀಡಿರುವ ದೂರು ಸುಳ್ಳಿನಿಂದ ಕೂಡಿದೆ, ಆತ ತೋರಿಸಿದ್ದ 13 ಸ್ಥಳಗಳಲ್ಲಿ ಉತ್ಖನನ ಮಾಡಲಾಗಿದ್ದು, ಒಂದು ಸ್ಥಳದಲ್ಲಿ ಸಿಕ್ಕ ಅಸ್ತಿಪಂಜರ ಗಂಡಸಿನದ್ದಾಗಿದೆ ಎಂದು ಮಾನ್ಯ ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಇನ್ನು ಸುಜಾತಾ ಭಟ್ ಎಂಬ ಮಹಿಳೆ ನೀಡಿದ ದೂರಿನ ಬಗ್ಗೆಯೂ ಉಲ್ಲೇಖ ಮಾಡಿದ ವಿಶೇಷ ಸರ್ಕಾರಿ ಅಭಿಯೋಜಕರು, ಅನನ್ಯ ಭಟ್ ಎಂಬ ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಳ್ಳಾಗಿದ್ದು, ಆ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ, ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣವಲ್ಲ ಎಂದು ತಿಳಿಸಿದರು.

ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಭಾಗವಾಗಿ ಮಾನ್ಯ ಸುಪ್ರೀಂ ಕೋರ್ಟ್‌ನಲ್ಲಿ ಚಿನ್ನಯ್ಯ ಸಲ್ಲಿಸಿದ ಅರ್ಜಿ ವಜಾಗೊಂಡಿದ್ದರೂ ಸಹ, ಅದನ್ನು ಮರೆಮಾಚಿ ಷಡ್ಯಂತ್ರ ಮುಂದುವರೆಸಿ, ನ್ಯಾಯಾಲಯದ ದಿಕ್ಕು ತಪ್ಪಿಸಿ, ಸರ್ಕಾರಕ್ಕೆ ಒತ್ತಡ ಹೇರಿ, ಬುರುಡೆ ಗ್ಯಾಂಗ್ ಎಸ್‌ಐಟಿ ರಚನೆ ಮಾಡಿಸಿಕೊಳ್ಳಲು ಯಶಸ್ವಿಯಾಯಿತು. ಆದರೆ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ, ಈ ಬುರುಡೆ ಗ್ಯಾಂಗಿನ ಷಡ್ಯಂತ್ರವನ್ನು ಬಯಲಿಗೆಳೆದಿದೆ. ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗ, ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಸದಸ್ಯರು, ಸಂಸ್ಥೆಗಳಿಗೆ ಹಾಗೂ ಜನರ ಭಾವನೆಗಳಿಗೆ ಕಳಂಕ ತರುವ ಪ್ರಯತ್ನ ಬುರುಡೆ ಗ್ಯಾಂಗ್‌ನದ್ದಾಗಿದೆ.

Share. Facebook Twitter LinkedIn WhatsApp Email

Related Posts

Iblur Junction traffic problem CM Siddaramaiah writes a letter to Azim Premji

BREAKING : ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್ ಜಿ ; ‘ವಿಪ್ರೋ ಕ್ಯಾಂಪಸ್’ ಒಳಗೆ ಸಂಚಾರಕ್ಕೆ ನಿರಾಕರಣೆ

25/09/2025 6:07 PM1 Min Read

ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 5:45 PM1 Min Read

ಬೆಂಗಳೂರಲ್ಲಿ ಹಿಂದಿ ಹೇರಿಕೆ ಕಾರ್ಯಕ್ರಮಕ್ಕೆ ವಿರೋಧ : ಕರವೇ ಕಾರ್ಯಕರ್ತರಿಂದ ಹೋಟೆಲ್ ಗೆ ನುಗ್ಗಿ ದಾಂಧಲೇ!

25/09/2025 5:34 PM1 Min Read
Recent News

BREAKING : ಲಡಾಖ್ ಪ್ರತಿಭಟನೆಗಳ ಮಧ್ಯೆ ‘ಸೋನಮ್ ವಾಂಗ್ಚುಕ್’ರ ‘NGO’ದ ವಿದೇಶಿ ಹಣಕಾಸು ಪರವಾನಗಿ ರದ್ದು

25/09/2025 7:06 PM

ರಾಜ್ಯ ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಬುರುಡೆ ಗ್ಯಾಂಗ್‌ : ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು

25/09/2025 6:16 PM
Iblur Junction traffic problem CM Siddaramaiah writes a letter to Azim Premji

BREAKING : ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್ ಜಿ ; ‘ವಿಪ್ರೋ ಕ್ಯಾಂಪಸ್’ ಒಳಗೆ ಸಂಚಾರಕ್ಕೆ ನಿರಾಕರಣೆ

25/09/2025 6:07 PM

“ನಮಗೆ ಭಾರತದೊಂದಿಗೆ ಸಮಸ್ಯೆ ಇದೆ, ಏಕೆಂದರೆ..?” ಮತ್ತೆ ವಿಷ ಕಾರಿದ ಬಾಂಗ್ಲಾ ಮುಖ್ಯ ಸಲಹೆಗಾರ ‘ಯೂನಸ್’

25/09/2025 6:01 PM
State News
KARNATAKA

ರಾಜ್ಯ ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಬುರುಡೆ ಗ್ಯಾಂಗ್‌ : ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು

By kannadanewsnow0525/09/2025 6:16 PM KARNATAKA 2 Mins Read

ಬೆಂಗಳೂರು : ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು…

Iblur Junction traffic problem CM Siddaramaiah writes a letter to Azim Premji

BREAKING : ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್ ಜಿ ; ‘ವಿಪ್ರೋ ಕ್ಯಾಂಪಸ್’ ಒಳಗೆ ಸಂಚಾರಕ್ಕೆ ನಿರಾಕರಣೆ

25/09/2025 6:07 PM

ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

25/09/2025 5:45 PM

ಬೆಂಗಳೂರಲ್ಲಿ ಹಿಂದಿ ಹೇರಿಕೆ ಕಾರ್ಯಕ್ರಮಕ್ಕೆ ವಿರೋಧ : ಕರವೇ ಕಾರ್ಯಕರ್ತರಿಂದ ಹೋಟೆಲ್ ಗೆ ನುಗ್ಗಿ ದಾಂಧಲೇ!

25/09/2025 5:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.