Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆಗಿನ ಮಹತ್ವದ ಒಪ್ಪಂದಕ್ಕೆ ಕ್ಷಣಗಣನೆ: ಪಾಕಿಸ್ತಾನದ ಸಂಧಾನಕ್ಕೆ ಟ್ರಂಪ್ ಮೆಚ್ಚುಗೆ, ಇಸ್ಲಾಮಾಬಾದ್‌ಗೆ ಭೇಟಿ ನೀಡುವ ಸುಳಿವು!

17/04/2026 6:20 AM

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

17/04/2026 6:19 AM

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!
KARNATAKA

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

By kannadanewsnow5717/04/2026 6:19 AM

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಮತ್ತು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ‘ಕರ್ನಾಟಕ ರೋಹಿತ್ ವೇಮುಲ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟುವಿಕೆ) ಕಾಯ್ದೆ’ಯನ್ನು ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ಕಾಯ್ದೆ ಅನ್ವಯವಾಗಲಿದೆ.ಜಾತಿ ತಾರತಮ್ಯ ಎಸಗುವುದು ಜಾಮೀನು ರಹಿತ ಅಪರಾಧವಾಗಿದ್ದು, ತಪ್ಪಿತಸ್ಥರಿಗೆ 7 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗೆ 10 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ.

ತಾರತಮ್ಯದ ವ್ಯಾಖ್ಯಾನ: ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಎಂಬ ಕಾರಣಕ್ಕೆ ಲಿಖಿತ ಅಥವಾ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಉದ್ದೇಶಪೂರ್ವಕವಾಗಿ ಕಡಿಮೆ ಅಂಕ ನೀಡುವುದನ್ನು ಜಾತಿ ತಾರತಮ್ಯ ಎಂದು ಪರಿಗಣಿಸಲಾಗುತ್ತದೆ.

ಕಾಯ್ದೆಯಡಿ ನಿಷೇಧಿಸಲಾದ ತಾರತಮ್ಯದ ಕ್ರಮಗಳು:

ದಾಖಲಾತಿ ಅಥವಾ ಸಂದರ್ಶನದ ವೇಳೆ ವಿದ್ಯಾರ್ಥಿಯ ಸಾಮಾಜಿಕ ಹಿನ್ನೆಲೆ ಅಥವಾ ಕುಟುಂಬದ ವೃತ್ತಿ ಬಗ್ಗೆ ಪ್ರಶ್ನಿಸುವುದು.

ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕುಳ್ಳಿರಿಸುವುದು ಅಥವಾ ಜಾತಿ ಬಗ್ಗೆ ಕೀಳಾಗಿ ಮಾತನಾಡುವುದು.

ಪ್ರಯೋಗಾಲಯಗಳಲ್ಲಿ ಪ್ರಯೋಗಗಳನ್ನು ಮಾಡಲು ಅನುಮತಿ ನಿರಾಕರಿಸುವುದು.

ಉತ್ತಮ ಸಾಧನೆ ಮಾಡಿದರೂ ವೈವಾ ಅಥವಾ ಪ್ರಾಕ್ಟಿಕಲ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ ನೀಡುವುದು.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ದೇಣಿಗೆ ನೀಡುವಂತೆ ಒತ್ತಾಯಿಸಿ ಅವಮಾನಿಸುವುದು.

ಹಿನ್ನೆಲೆ:

ಈ ಹಿಂದೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂತಹದೊಂದು ಕಾಯ್ದೆಯ ಅಗತ್ಯದ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಕಾಯ್ದೆಯ ಅನುಷ್ಠಾನದ ಬಗ್ಗೆ ಕಾನೂನು ಮತ್ತು ಗೃಹ ಇಲಾಖೆಗಳು ಸಕಾರಾತ್ಮಕ ಅಭಿಪ್ರಾಯ ನೀಡಿದ ಹಿನ್ನೆಲೆಯಲ್ಲಿ ಈಗ ಸಚಿವ ಸಂಪುಟವು ಇದಕ್ಕೆ ಹಸಿರು ನಿಶಾನೆ ತೋರಿಸಿದೆ.

ಯಾವುದೇ ದೂರು ದಾಖಲಾದಲ್ಲಿ ಸಮಾನತೆ ಸಮಿತಿ (ಈಕ್ವಿಟಿ ಕಮಿಟಿ) ರಚಿಸಿ ಪರಿಶೀಲನೆ ನಡೆಸಬೇಕು ಮತ್ತು 30 ದಿನಗಳ ಒಳಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

The Cabinet has approved the implementation of the 'Rohith Vemula Act' to prevent caste discrimination in all universities in the state.!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM1 Min Read

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

17/04/2026 6:14 AM1 Min Read

BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!

17/04/2026 6:09 AM2 Mins Read
Recent News

ಇರಾನ್ ಜೊತೆಗಿನ ಮಹತ್ವದ ಒಪ್ಪಂದಕ್ಕೆ ಕ್ಷಣಗಣನೆ: ಪಾಕಿಸ್ತಾನದ ಸಂಧಾನಕ್ಕೆ ಟ್ರಂಪ್ ಮೆಚ್ಚುಗೆ, ಇಸ್ಲಾಮಾಬಾದ್‌ಗೆ ಭೇಟಿ ನೀಡುವ ಸುಳಿವು!

17/04/2026 6:20 AM

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

17/04/2026 6:19 AM

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM

ಇರಾನ್ ಬೆಂಬಲಿತ ಹಡಗುಗಳ ಮೇಲೆ ಅಮೆರಿಕ ಹದ್ದಿನ ಕಣ್ಣು: ವಿಶ್ವದಾದ್ಯಂತ ಕಾರ್ಯಾಚರಣೆ ವಿಸ್ತರಿಸಿದ ಯುಎಸ್ ಮಿಲಿಟರಿ!

17/04/2026 6:17 AM
State News
KARNATAKA

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

By kannadanewsnow5717/04/2026 6:19 AM KARNATAKA 1 Min Read

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಮತ್ತು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ‘ಕರ್ನಾಟಕ ರೋಹಿತ್…

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

17/04/2026 6:14 AM

BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!

17/04/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.