Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೇಡ್ ಇನ್ ಇಂಡಿಯಾ’ ವಸ್ತುಗಳನ್ನ ಮಾರಾಟ ಮಾಡಿ ; ವ್ಯಾಪಾರಸ್ಥರಿಗೆ ‘ಪ್ರಧಾನಿ ಮೋದಿ’ ಮನವಿ

22/09/2025 5:56 PM

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್

22/09/2025 5:53 PM

BREAKING : ಆಗಸ್ಟ್ ತಿಂಗಳ ಪ್ರಮುಖ ವಲಯದ ಬೆಳವಣಿಗೆ ಶೇ. 6.3ರಷ್ಟು ಏರಿಕೆ, 15 ತಿಂಗಳಲ್ಲೇ ಗರಿಷ್ಠ

22/09/2025 5:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್
KARNATAKA

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್

By kannadanewsnow0922/09/2025 5:53 PM

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ. ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಕಡಿಮೆ ಅಥವಾ ಹೆಚ್ಚು ಎಂದು ತೋರಿಸಬಹುದು. ಮುಸ್ಲಿಮರು ಹಾಗೂ ಕ್ರೈಸ್ತರಲ್ಲಿ ಅನೇಕ ಜಾತಿಗಳಿದ್ದು, ಅದನ್ನು ಬಹಿರಂಗ ಮಾಡುತ್ತಿಲ್ಲ. ಆದರೆ ಹಿಂದೂಗಳಲ್ಲಿ ತಾರತಮ್ಯ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ, ಮಹಿಳೆಯರಿಗೆ ಬುರ್ಕಾ ಧರಿಸಬೇಕು. ಹೀಗೆ ಎಲ್ಲ ಧರ್ಮಗಳಲ್ಲಿ ತಾರತಮ್ಯ ಇದೆ ಎಂದರು.

ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಅತ್ಯಧಿಕ, ನಂತರ ಒಕ್ಕಲಿಗರ ಸಂಖ್ಯೆ ಇದೆ. ಸಿಎಂ ಸಿದ್ದರಾಮಯ್ಯ ಈ ಪ್ರಮಾಣವನ್ನೇ ಬದಲಿಸಲು ಮುಂದಾಗಿದ್ದಾರೆ. ಒಕ್ಕಲಿಗ ಸಮುದಾಯವನ್ನೇ ಒಡೆಯುತ್ತಿದ್ದಾರೆ. ಹೊಸ ಜಾತಿಗಳನ್ನು ಹುಟ್ಟುಹಾಕಿದ್ದಾರೆ ಎಂದರು.

ಹದಿನೈದು ದಿನಗಳಲ್ಲಿ ಸಮೀಕ್ಷೆ ಮಾಡಲು ಆಗಲ್ಲ. ದಸರಾ ಇರುವುದರಿಂದ ಜನರು ಪ್ರವಾಸ ಮಾಡುತ್ತಾರೆ. ಆದ್ದರಿಂದ ಇದನ್ನು ಮುಂದೂಡಬೇಕು. ಅಲ್ಲದೆ ಕೇಂದ್ರ ಸರ್ಕಾರ ಈಗಾಗಲೇ ಗಣತಿಗೆ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರಕ್ಕೆ ಗಣತಿ ನಡೆಸುವ ಅಧಿಕಾರವಿಲ್ಲ ಎಂದರು‌.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಿಎಸ್ ಟಿ ಇಳಿಕೆ ಮಾಡಿ ಜನರಿಗೆ ಅನುಕೂಲ ಕಲ್ಪಿಸಿದೆ. ಬೆಣ್ಣೆ, ತುಪ್ಪ ಸೇರಿದಂತೆ ದಿನಬಳಕೆ ಸಾಮಗ್ರಿಗಳ ತೆರಿಗೆ 5% ಗೆ ಇಳಿದಿದೆ. ಯುಪಿಎ ಸರ್ಕಾರದಲ್ಲಿ ಸಿಮೆಂಟ್, ಟಿವಿ, ವಾಷಿಂಗ್ ಮಶಿನ್, ಪ್ರಿಡ್ಜ್ ಗೆ 30% ತೆರಿಗೆ ಇದ್ದು, ಈಗ 18% ಕ್ಕೆ ಬಂದಿದೆ. ರೆಸ್ಟೋರೆಂಟ್ ಗಳಿಗೆ 21% ಇದ್ದ ತೆರಿಗೆ 5% ಕ್ಕೆ ಬಂದಿದೆ. ರಸಗೊಬ್ಬರ ಯೂರಿಯಾಗೆ 18% ಇದ್ದು, ಅದೀಗ 5% ಕ್ಕೆ ಇಳಿದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ತೆರಿಗೆ ಭಾರ ಹೆಚ್ಚಿದ್ದು, ಅದನ್ನು ಮೋದಿ ಸರ್ಕಾರ ಕಡಿಮೆ ಮಾಡಿದೆ. ಇದು ಬಡವರಿಗೆ ಒಳ್ಳೆಯ ಸುದ್ದಿ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಇದರಲ್ಲೂ ತಪ್ಪು ಹುಡುಕುತ್ತಿದ್ದಾರೆ. ಜನರಿಗೆ ತೆರಿಗೆ ಇಳಿಸಿದರೆ ನಷ್ಟ ಹೇಗಾಗುತ್ತದೆ ಎಂದು ಅವರೇ ತಿಳಿಸಬೇಕು. ಈ ಸರ್ಕಾರ 25 ಸರಕು, ಸೇವೆಗಳ ದರ ಏರಿಕೆ ಮಾಡಿದೆ. ಹಾಲು, ನೀರು, ವಾಹನ ನೋಂದಣಿ, ಸ್ಟಾಂಪ್ ಡ್ಯೂಟಿ, ಹೀಗೆ ಗಬ್ಬರ್ ಸಿಂಗ್ ಟ್ಯಾಕ್ಸ್ ಹಾಕಲಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು 65,000 ಕೋಟಿ ರೂ. ಹೆಚ್ಚುವರಿ ತೆರಿಗೆ ಸುಲಿಗೆ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಹಣವೇ ಇಲ್ಲದೆ ಸಣ್ಣ ವರ್ತಕರ ಮೇಲೆ ಜಿಎಸ್ ಟಿ ಹೇರಲಾಗಿತ್ತು. ಆಗ ಇದನ್ನು ಕೇಂದ್ರ ಸರ್ಕಾರ ಮಾಡಿದ್ದು ಎಂದು ಸುಳ್ಳು ಆರೋಪ ಮಾಡಲಾಗಿತ್ತು. ಈ ಸರ್ಕಾರಕ್ಕೆ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿ ‌ತೆರಿಗೆಗಳನ್ನು ಇಳಿಸಬೇಕಿತ್ತು. ತೆರಿಗೆ ಇಳಿಕೆಯಲ್ಲಿ ಸ್ಪರ್ಧೆ ಬರಲಿ ಎಂದರು.

ಮಂಗಳೂರು ಜೀವನ ಗುಣಮಟ್ಟದಲ್ಲಿ, ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ. ಅದೇ ರೀತಿ ಮಂಡ್ಯ ಕೂಡ ಬೆಳೆಯಬೇಕು. ಮಂಡ್ಯದಲ್ಲಿ ಧರ್ಮ ಗಲಭೆಯನ್ನು ನಾವು ಮಾಡುತ್ತಿಲ್ಲ, ಕಾಂಗ್ರೆಸ್ ನಾಯಕರು ಹಾಗೂ ಮತಾಂಧರು ಮಾಡುತ್ತಿದ್ದಾರೆ. ಕೇರಳದ ಮತಾಂಧರು ಇಲ್ಲೂ ಪ್ರಭಾವ ಬೀರುತ್ತಿದ್ದಾರೆ. ಈದ್ ಮಿಲಾದ್ ಮೆರವಣಿಗೆಗೆ ಯಾರೂ ಕಲ್ಲು ತೂರಿಲ್ಲ ಆದರೆ ಗಣೇಶ ಮೆರವಣಿಗೆಗೆ ಮಾತ್ರ ಕಲ್ಲು ತೂರಾಟವಾಗುತ್ತಿದೆ. ಹಿಂದೂಗಳು ಎಲ್ಲೂ ಗಲಭೆ ಮಾಡಿಲ್ಲ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಹೆಚ್ಚಿದ್ದರಿಂದ ಕಂಪನಿಗಳು ಬಿಟ್ಟು ಹೋಗುತ್ತಿವೆ. ಅದಕ್ಕೂ ಅನುದಾನ ಇಲ್ಲ. ಮುಖ್ಯಮಂತ್ರಿ ಸಲಹೆಗಾರರು ಹಾಗೂ ಶಾಸಕರು ಅಭಿವೃದ್ಧಿಗೆ ಹಣ ಇಲ್ಲ ಎಂದಿದ್ದಾರೆ. ಗುಂಡಿ ಮುಚ್ಚಲು ಇನ್ನು ಟೆಂಡರ್ ಕರೆದರೆ ಕಾಮಗಾರಿ ಆರಂಭವಾಗುವುದು ತಡವಾಗಲಿದೆ ಎಂದರು‌.

ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ

Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ

Share. Facebook Twitter LinkedIn WhatsApp Email

Related Posts

ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ

22/09/2025 5:44 PM1 Min Read

ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್: ಸಂಸದ ಬಿವೈ ರಾಘವೇಂದ್ರ

22/09/2025 5:41 PM2 Mins Read

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

22/09/2025 5:36 PM1 Min Read
Recent News

‘ಮೇಡ್ ಇನ್ ಇಂಡಿಯಾ’ ವಸ್ತುಗಳನ್ನ ಮಾರಾಟ ಮಾಡಿ ; ವ್ಯಾಪಾರಸ್ಥರಿಗೆ ‘ಪ್ರಧಾನಿ ಮೋದಿ’ ಮನವಿ

22/09/2025 5:56 PM

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್

22/09/2025 5:53 PM

BREAKING : ಆಗಸ್ಟ್ ತಿಂಗಳ ಪ್ರಮುಖ ವಲಯದ ಬೆಳವಣಿಗೆ ಶೇ. 6.3ರಷ್ಟು ಏರಿಕೆ, 15 ತಿಂಗಳಲ್ಲೇ ಗರಿಷ್ಠ

22/09/2025 5:50 PM

ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ

22/09/2025 5:44 PM
State News
KARNATAKA

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ವಿಪಕ್ಷ ನಾಯಕ ಆರ್.ಅಶೋಕ್

By kannadanewsnow0922/09/2025 5:53 PM KARNATAKA 2 Mins Read

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ…

ದಸರಾ ಹಬ್ಬ, ಶಬರಿಮಲೆ ಯಾತ್ರೆ ಪ್ರಯುಕ್ತ ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆ

22/09/2025 5:44 PM

ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್: ಸಂಸದ ಬಿವೈ ರಾಘವೇಂದ್ರ

22/09/2025 5:41 PM

ಮೋದಿ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್ ನೀಡಿದ್ದಾರೆ: ಸೊರಬ ಬಿಜೆಪಿ ಮುಖಂಡ ಡಾ.ಜ್ಞಾನೇಶ್

22/09/2025 5:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.