ಬೆಂಗಳೂರು : ಆಹಾರ ಪದಾರ್ಥಗಳ ಮೇಲೆ ಜಿಎಸ್ಟಿ ಹೆಚ್ಚಳ ವಿಚಾರವಾಗಿ ಮಾತನಾಡಿ, ʻ ಶ್ರೀಲಂಕಾಗಿಂತ ಭಾರತದ ನಮ್ಮ ಸ್ಥಿತಿ ಸರಿಯಿಲ್ಲʼ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಇದಾಗಿದೆ. ಶ್ರೀಲಂಕಾಗಿಂತ ನಮ್ಮ ಭಾರತದ ಸ್ಥಿತಿ ಸರಿಯಿಲ್ಲ. ದೇಶದಲ್ಲಿ ಎರಡು 2 ಹೊತ್ತು ಊಟಕ್ಕೂ ಇಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹಾಲು , ಮೊಸರು, ಉಪ್ಪಿನಕಾಯಿ ಮೇಲೆ ಟ್ಯಾಕ್ಸ್ ಹಾಕಲಾಗಿದೆ.
ಕೇಂದ್ರ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಆಹಾರ ಪದಾರ್ಥಮೇಲೆ ಜಿಎಸ್ಟಿ ಹಾಕಿದ್ದು ಜನವಿರೋಧಿ ನೀತಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.