ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹತ್ತಿರ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನರ ಭದ್ರತೆಗೆ ಪ್ರಥಮ ಆದ್ಯತೆ ನೀಡಬೇಕಾದ ರಾಜ್ಯ ಸರ್ಕಾರ, ತನ್ನ ಜನವಿರೋಧಿ ನಿರ್ಲಕ್ಷ್ಯ ನೀತಿಯನ್ನೇ ಕಾಯಕವಾಗಿ ಮಾಡಿಕೊಂಡ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಅಧಿಕಾರದ ಕುರ್ಚಿಗೆ ಅಂಟಿಕೊಂಡಿರುವ ಈ ಸರ್ಕಾರ, ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಇತರರ ಮೇಲೆ ತನ್ನ ತಪ್ಪನ್ನು ಹೊರಿಸಲು ಪ್ರಯತ್ನಿಸಿದೆ. ಆದರೆ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದಿದ್ದಾರೆ.
ಈ ಭೀಕರ ಘಟನೆಯ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಹಾಗೂ ಮಾನ್ಯ ಗೃಹಸಚಿವರಾದ ಡಾ. ಜಿ. ಪರಮೇಶ್ವರ ಅವರು ಘಟನೆಯ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಹತ್ತಿರ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ!
ಜನರ ಭದ್ರತೆಗೆ ಪ್ರಥಮ ಆದ್ಯತೆ ನೀಡಬೇಕಾದ ರಾಜ್ಯ ಸರ್ಕಾರ, ತನ್ನ ಜನವಿರೋಧಿ ನಿರ್ಲಕ್ಷ್ಯ ನೀತಿಯನ್ನೇ ಕಾಯಕವಾಗಿ ಮಾಡಿಕೊಂಡ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಅಧಿಕಾರದ ಕುರ್ಚಿಗೆ ಅಂಟಿಕೊಂಡಿರುವ ಈ ಸರ್ಕಾರ, ಜವಾಬ್ದಾರಿಯಿಂದ… pic.twitter.com/WDppVMF9fJ
— Chalavadi Narayanaswamy (@NswamyChalavadi) June 16, 2025