Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ ‘ಉಚಿತ ಪಹಣಿ’ ಪತ್ರ : ಈ ದಾಖಲೆಗಳು ಕಡ್ಡಾಯ.!

04/08/2025 6:37 AM

BREAKING : ರಾಜ್ಯಾದ್ಯಂತ ಆ.5ರಿಂದ ಸಾರಿಗೆ ನೌಕರರ ಮುಷ್ಕರ : ಶಾಲಾ ವಾಹನ ಸೇರಿ ಖಾಸಗಿ ಬಸ್ ಬಳಕೆಗೆ ಚಿಂತನೆ

04/08/2025 6:36 AM

BREAKING : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 : ಇಂದು ಮೈಸೂರಿಗೆ ಅರಮನೆಗೆ ಆಗಮಿಸಲಿವೆ ಆನೆಗಳು.!

04/08/2025 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ
KARNATAKA

ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್; ಹೆಚ್.ಡಿ.ಕುಮಾರಸ್ವಾಮಿ ಕಿಡಿ

By kannadanewsnow0921/01/2025 9:51 PM

ನವದೆಹಲಿ: ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯದಲ್ಲಿ ಅತ್ಯಾಚಾರ, ದರೋಡೆಗಳು ನಡೆಯುತ್ತಿವೆ. ಅಪರಾಧಿ ಚಟುವಟಿಕೆಗಳು ಮಿತಿ ಮೀರಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಜನರಿಗೆ ಭದ್ರತೆ ಇಲ್ಲದಾಗಿದೆ ಎಂದು ಆರೋಪಿಸಿದರು.

ಸರಕಾರದಲ್ಲಿ ಒಬ್ಬ ತಹಶಿಲ್ದಾರ್, ಉಪ ವಿಭಾಗಾಧಿಕಾರಿಯನ್ನು ನಿಯಂತ್ರಣ ಮಾಡುವುದು ಇವರಿಗೆ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಮೇಲೆ ನಿಯಂತ್ರಣ ಇಲ್ಲ. ಕಾಂಗ್ರೆಸ್ಸಿನವರು ಕರ್ನಾಟಕವನ್ನು ಸಂಪೂರ್ಣ ಮುಗಿಸಲಿಕ್ಕೇ ಬಂದಿದ್ದಾರೆ. ಇದೇನಾ ಗಾಂಧಿ ತತ್ವದ ಆಡಳಿತ ಸಿದ್ದರಾಮಯ್ಯನವರೇ..? ಎಂದು ಕೇಂದ್ರ ಸಚಿವರು ಗುಡುಗಿದರು.

ರಾಜ್ಯದಲ್ಲಿ ಗರ್ಭಿಣಿಯರ ಸಾರಾಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ, ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ 40% ಕಮೀಶನ್ ಎನ್ನುವ ಮಾತು ಕೇಳಿ ಬರುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ? ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇ- ಖಾತಾ ಹೆಸರಲ್ಲೂ ಸರಕಾರ ಲೂಟಿ ಹೊಡೆಯುತ್ತಿದೆ. ರೇರಾ ಬಗ್ಗೆಯೂ ಜನ ಅನುಮಾನದಿಂದ ಮಾತಾಡುತ್ತಿದ್ದಾರೆ. ಈಗಿನ ಕಾಂಗ್ರೆಸ್ ಪಕ್ಷಕ್ಕೆ ಮಹಾತ್ಮ ಗಾಂಧೀಜಿ ಅವರ ಹೆಸರು ಹೆಜುವ ಯೋಗ್ಯತೆ ಇಲ್ಲ. ಈಗಿನ ಕಾಂಗ್ರೆಸ್ಸಿಗೂ ಸ್ವಾತಂತ್ರ್ಯಪೂರ್ವ ಕಾಂಗ್ರೆಸ್ಸಿಗರು ಪೂರ್ವ ಕಾಂಗ್ರೆಸ್ ಬೇರೆ ಇದೆ. ಇವರು ಮೊನ್ನೆ ಬೆಳಗಾವಿಯಲ್ಲಿ ನಡೆದು ಅರ್ಧಕ್ಕೆ ಅಂತ್ಯವಾಗಿದ್ದ ಅಧಿವೇಶನದ ಜಾಹೀರಾತಿನಲ್ಲಿ ಭಾರತದ ಕಳಸವಾದ ಜಮ್ಮು- ಕಾಶ್ಮೀರದ ಭೂಪಟವೇ ಇರಲಿಲ್ಲ. ಇಂಥ ಇವರು ದೇಶ ಜೋಡಿಸುವವರಾ? ಕಾಂಗ್ರೆಸ್ ಪಕ್ಷಕ್ಕೆ ಅಂತಿಮವಾದ ಚರಮಗೀತೆ ಕರ್ನಾಟಕದಲ್ಲಿ ಆಗುತ್ತದೆ, ನೋಡುತ್ತೀರಿ ಎಂದು ಸಚಿವರು ಕಿಡಿಕಾರಿದರು.

ಹಿಂದಿನ ಸರಕಾರದ ಅವಧಿಯಲ್ಲಿ ಅತ್ಯಾಚಾರ ಪ್ರಕರಣಗಳು ಆಗಿಯೇ ಇರಲಿಲ್ಲವಾ? ಎಂದು ಸಿಎಂ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಹೊಣೆಗೆಡಿತನದಿಂದ ಕೂಡಿದೆ. ಹಿಂದೆ ಅತ್ಯಾಚಾರ ಪ್ರಕರಣಗಳು ನಡೆದಿವೆ, ಈಗಲೂ ನಡೆಯಲಿ ಎನ್ನುವುದೇ ಅವರ ಭಾವನೆಯೇ? ಹಿಂದೆ ಆಗಿರುವ ಕೆಟ್ಟದ್ದನ್ನು ಸರಿಪಡಿಸುವುದು ಮುಖ್ಯವೇ ಹೊರತು ತಮ್ಮ ವೈಫಲ್ಯ ಮುಚ್ಚಿಕೊಳ್ಳುವುದಲ್ಲ. ಸಿಎಂ ಅಪರಾಧ ನಿಯಂತ್ರಣ ಮಾಡುವುದು ಬಿಟ್ಟು ಸಬೂಬು ಹೇಳುತ್ತಿದ್ದಾರೆ. ಇವರು ಎರಡನೇ ಬಾರಿ ಸಿಎಂ ಆಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣಗಳ ಜತೆಗೆ ಕಾನೂನು ಸುವ್ಯವಸ್ಥೆ ಏನಾಗಿದೆ? ಆಡಳಿತ ಎಷ್ಟರ ಮಟ್ಟಿಗೆ ಕುಸಿದಿದೆ ಎಂದು ಹೇಳಲು ಸಾಧ್ಯವೇ ಇಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಗಾಂಧಿ ಹೆಸರು ಹೈಜಾಕ್ ಮಾಡಿದ್ದಾರೆ

ಬೆಳಗಾವಿ ಕಾಂಗ್ರೆಸ್ ಸಮಾವೇಶ ವಿಚಾರಕ್ಕೆ ಮಾತನಾಡಿದ ಕೇಂದ್ರ ಸಚಿವರು; ಬಾಪು, ಸಂವಿಧಾನ, ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ಈಗ ನೆನಪು ಮಾಡಿಕೊಳ್ಳುತ್ತಿರುವುದು ಹಾಸ್ಯಾಸ್ಪದ. ಇವರು ಏನು ಸಾಧನೆ ಮಾಡಿದ್ದಾರೆ? ಗಾಂಧಿ ಅವರ ಹೆಸರು ಹೈಜಾಕ್ ಮಾಡಿದ್ದಾರೆ. ಗಾಂಧಿ ಕುಟುಂಬ ಎಂದರೆ ಮಹಾತ್ಮಾ ಗಾಂಧಿ ಕುಟುಂಬ ಅಲ್ಲ, ಇಂದಿರಾ ಗಾಂಧಿ ಅವರು ಬಂದ ಮೇಲೆ ಗಾಂಧಿ ಹೆಸರನ್ನು ಹೈಜಾಕ್ ಮಾಡಿದ್ದಾರೆ. ಈಗ ಇರುವವರು ಯಾರೂ ಗಾಂಧಿಗಳು ಅಲ್ಲ ಎಂದು ಸಚಿವರು ಕಿಡಿಕಾರಿದರು.

ದೇಶಕ್ಕೆ ಪ್ರಧಾನಿ ಮೋದಿ ಅವರ ಕೊಡುಗೆ ದೊಡ್ಡದು

ನಮ್ಮ ಸಂವಿಧಾನಕ್ಕೆ ಯಾರಿಂದ ಅಪಚಾರ ಆಗಿದೆ? ಎನ್ನುವುದು ದೇಶಕ್ಕೆ ಗೊತ್ತಿದೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಎಷ್ಟು ಹಿಂದೆ ಕೊಟ್ಟಿದೆ ಎನ್ನುವುದಕ್ಕೆ ಸುದೀರ್ಘ ಇತಿಹಾಸವಿದೆ. ಇವತ್ತು ನರೇಂದ್ರ ಮೋದಿ ಅವರ ಸರಕಾರ ಅಂಬೇಡ್ಕರ್ ಅವರ ಹೆಸರು ಚಿರಸ್ಥಾಯಿ ಆಗುವ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಗಾಂಧೀಜಿಗೆ ಜಾಹೀರಾತು ಮೂಲಕ ಅಪಚಾರ:

ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಮತ್ತು ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಉಪ್ಪಿನ ಸತ್ಯಾಗ್ರಹಕ್ಕೆ ಅಪಚಾರ ಎಸಗಿದೆ. ಸತ್ಯಾಗ್ರಹದಲ್ಲಿ ಮಹಾತ್ಮರನ್ನು ಹಿಂಬಾಲಿಸಿದ್ದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಚಿತ್ರಗಳನ್ನು ತೆಗೆದು, ಆ ಚಿತ್ರವನ್ನು ತಿರುಚಿದೆ. ಮಹಾತ್ಮರ ಹಿಂದೆ ಸಿಎಂ, ಡಿಸಿಎಂ ಅವರು ಸತ್ಯಾಗ್ರಹದಲ್ಲಿ ಭಾಗಿ ಆಗಿದ್ದರು ಎನ್ನುವಂತೆ ತಿರುಚಿ ಪತ್ರಿಕೆಗಳಿಗೆ ಜಾಹೀರಾತು ನೀಡಲಾಗಿದೆ. ಇತಿಹಾಸವನ್ನು ಕಾಂಗ್ರೆಸ್ ಹೇಗೆ ತಿರುಚಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇವರು ಕೊಟ್ಟಿರುವ ಜಾಹೀರಾತಿನಂತೆ ಕಾಂಗ್ರೆಸ್ ನವರು ಯಾವ ಗಾಂಧಿ ತತ್ವ ಅನುಸರಿಸುತ್ತಿದ್ದಾರೆ? ಯಾವ, ಯಾರ ಆದರ್ಶ ಪಾಲನೆ ಮಾಡಲಾಗುತ್ತಿದ್ದಾರೆ? ಯಾವ ಗಾಂಧಿ ತತ್ವದ ಮೇಲೆ ಕರ್ನಾಟಕದಲ್ಲಿ ಆಡಳಿತ ನಡೆಯುತ್ತಿದೆ? ರಾಜ್ಯದಲ್ಲಿ ಆಡಳಿತವೇ ಕುಸಿದಿದೆ. ವಾಲ್ಮೀಕಿ ನಿಗಮ ಹಗರಣ, ಮೂಡಾ ಹಗರಣ.. ಎಷ್ಟು ಹಗರಣಗಳ ಪಟ್ಟಿ ಬೇಕು? ಇದಾ ಆಡಳಿತ? ಎಂದು ಅವರು ಆರೋಪಿಸಿದರು.

‘KSET-2024 ಪರೀಕ್ಷೆ’ಗೆ ಅರ್ಹತೆ ಪಡೆದವರಿಗೆ ಮಹತ್ವದ ಮಾಹಿತಿ

BREAKING : ಬೆಂಗಳೂರಲ್ಲಿ ವಕೀಲೆಯ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆಸಿ ಹಲ್ಲೆ : IT ಅಧಿಕಾರಿಯ ವಿರುದ್ಧ ‘FIR’ ದಾಖಲು!

Share. Facebook Twitter LinkedIn WhatsApp Email

Related Posts

‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ ‘ಉಚಿತ ಪಹಣಿ’ ಪತ್ರ : ಈ ದಾಖಲೆಗಳು ಕಡ್ಡಾಯ.!

04/08/2025 6:37 AM1 Min Read

BREAKING : ರಾಜ್ಯಾದ್ಯಂತ ಆ.5ರಿಂದ ಸಾರಿಗೆ ನೌಕರರ ಮುಷ್ಕರ : ಶಾಲಾ ವಾಹನ ಸೇರಿ ಖಾಸಗಿ ಬಸ್ ಬಳಕೆಗೆ ಚಿಂತನೆ

04/08/2025 6:36 AM1 Min Read

BREAKING : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 : ಇಂದು ಮೈಸೂರಿಗೆ ಅರಮನೆಗೆ ಆಗಮಿಸಲಿವೆ ಆನೆಗಳು.!

04/08/2025 6:33 AM1 Min Read
Recent News

‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ ‘ಉಚಿತ ಪಹಣಿ’ ಪತ್ರ : ಈ ದಾಖಲೆಗಳು ಕಡ್ಡಾಯ.!

04/08/2025 6:37 AM

BREAKING : ರಾಜ್ಯಾದ್ಯಂತ ಆ.5ರಿಂದ ಸಾರಿಗೆ ನೌಕರರ ಮುಷ್ಕರ : ಶಾಲಾ ವಾಹನ ಸೇರಿ ಖಾಸಗಿ ಬಸ್ ಬಳಕೆಗೆ ಚಿಂತನೆ

04/08/2025 6:36 AM

BREAKING : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 : ಇಂದು ಮೈಸೂರಿಗೆ ಅರಮನೆಗೆ ಆಗಮಿಸಲಿವೆ ಆನೆಗಳು.!

04/08/2025 6:33 AM

SHOCKING : ರಾಜ್ಯದಲ್ಲೊಂದು ಹೈಟೆಕ್ ಮಾಟ : ಲಿಂಬೆಹಣ್ಣು, ಮೊಸರನ್ನದ ಜೊತೆ `ಸ್ಮಾರ್ಟ್ ಫೋನ್’ ಇಟ್ಟು ವಾಮಾಚಾರ.!

04/08/2025 6:26 AM
State News
KARNATAKA

‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ ‘ಉಚಿತ ಪಹಣಿ’ ಪತ್ರ : ಈ ದಾಖಲೆಗಳು ಕಡ್ಡಾಯ.!

By kannadanewsnow5704/08/2025 6:37 AM KARNATAKA 1 Min Read

ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ…

BREAKING : ರಾಜ್ಯಾದ್ಯಂತ ಆ.5ರಿಂದ ಸಾರಿಗೆ ನೌಕರರ ಮುಷ್ಕರ : ಶಾಲಾ ವಾಹನ ಸೇರಿ ಖಾಸಗಿ ಬಸ್ ಬಳಕೆಗೆ ಚಿಂತನೆ

04/08/2025 6:36 AM

BREAKING : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025 : ಇಂದು ಮೈಸೂರಿಗೆ ಅರಮನೆಗೆ ಆಗಮಿಸಲಿವೆ ಆನೆಗಳು.!

04/08/2025 6:33 AM

SHOCKING : ರಾಜ್ಯದಲ್ಲೊಂದು ಹೈಟೆಕ್ ಮಾಟ : ಲಿಂಬೆಹಣ್ಣು, ಮೊಸರನ್ನದ ಜೊತೆ `ಸ್ಮಾರ್ಟ್ ಫೋನ್’ ಇಟ್ಟು ವಾಮಾಚಾರ.!

04/08/2025 6:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.