Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

16/12/2025 10:09 PM

IPL 2026 Auction : ಯಾರು, ಯಾವ ತಂಡದ ಪಾಲು.? ಮಾರಾಟವಾಗದೆ ಉಳಿದ ಆಟಗಾರರ ಫುಲ್ ಲಿಸ್ಟ್ ಇಲ್ಲಿದೆ!

16/12/2025 9:18 PM

ಗ್ರಾಹಕರಿಗೆ ಹೊಸ ವರ್ಷದ ಧಮಾಕಾ: ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು ಇಲ್ಲಿವೆ

16/12/2025 9:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್
KARNATAKA

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

By kannadanewsnow0930/08/2025 2:20 PM

ಚಿತ್ರದುರ್ಗ : ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ವಿವರಿಸಿದರು.‌

ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಆಗಿದೆ ಎಂದು ಅಭಿಪ್ರಾಯಪಟ್ಟರು.

ಇವತ್ತಿನ‌ ಸುದ್ದಿ ಮಾಧ್ಯಮಗಳ ರಚನೆ ಮತ್ತು ಆಚರಣೆಯಲ್ಲಿ ಜಾತ್ಯತೀತತೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಎರಡು ತದ್ವಿರುದ್ದವಾದ ಬೆಳವಣಿಗೆಗಳು ಅತೀ ವೇಗವಾಗಿ ನಡೆಯುತ್ತಿವೆ. ಒಂದು ಅಂಬೇಡ್ಕರ್ ಅವರ ವಿಗ್ರಹಗಳನ್ನು ಅತೀ ಹೆಚ್ಚು ನಿರ್ಮಿಸುತ್ತಲೇ ಅಂಬೇಡ್ಕರ್ ಅವರ ವಿಚಾರಗಳನ್ನು ಕೊಲ್ಲುವ ಪ್ರಕ್ರಿಯೆ ಕೂಡ ಹೆಚ್ಚು ವೇಗ ಪಡೆದುಕೊಂಡಿದೆ. ವಿಗ್ರಹಗಳನ್ನು ಸ್ಥಾಪಿಸಿ, ವಿಚಾರಗಳನ್ನು ಕೊಲ್ಲುವ ಈ ವಿದ್ಯಮಾನಕ್ಕೆ ಸುದ್ದಿ ಮಾಧ್ಯಮ ” ಮೂಕಸಾಕ್ಷಿ”ಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಡೀ ದೇಶದಲ್ಲಿ ಅತೀ ಹೆಚ್ಚು ಅಂಬೇಡ್ಕರ್ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಆದರೆ, ವಿಶ್ವದಲ್ಲೇ ಅತೀ ಹೆಚ್ಚು ಮಾನ್ಯತೆ ಪಡೆದ ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೂಪಗೊಳಿಸುತ್ತಾ, ಸಂವಿಧಾನದ ತಲೆ ಕತ್ತರಿಸುವುದು, ಕೈ ಮುರಿಯುವುದು, ಮಸಿ ಬಳಿಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಸಂವಿಧಾನದಿಂದ “ಜಾತ್ಯತೀತ ಮತ್ತು ಸಮಾಜವಾದ” ಎನ್ನುವ ಮೌಲ್ಯವನ್ನು ಕೀಳಬೇಕು ಎನ್ನುವ ಕೂಗಿನ‌ ಹಿಂದೆ ಇರುವುದೂ ಕೂಡ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸುವ ವಿಕೃತ ಮನಸ್ಥಿತಿಯೇ ಆಗಿದೆ ಎಂದು ವಿಶ್ಲೇಷಿಸಿದರು.

ತಮ್ಮ 65 ವರ್ಷಗಳ ಜೀವಿತಾವಧಿಯಲ್ಲಿ ಅರ್ಧಕ್ಕೂ ಹೆಚ್ಚು ಆಯಸ್ಸನ್ನು ಅಂಬೇಡ್ಕರ್ ಅವರು ಪತ್ರಕರ್ತರಾಗಿ, ಸಂಪಾದಕರಾಗಿ, ಲೇಖಕರಾಗಿ, ಬರಹಗಾರರಾಗಿ ಕಳೆದಿದ್ದಾರೆ.

*1920 ರಲ್ಲಿ “ಮೂಕನಾಯಕ”
*1927 ರಲ್ಲಿ “ಬಹಿಷ್ಕೃತ ಭಾರತ”
*1928 ರಲ್ಲಿ “ಸಮತಾ”
*1930 ರಲ್ಲಿ “ಜನತಾ”
*1943 ರಲ್ಲಿ ಪ್ರಬುದ್ಧ ಭಾರತ ಪತ್ರಿಕೆಗಳನ್ನು ಆರಂಭಿಸಿ ಮುನ್ನಡೆಸಿದರು.

ಸದ್ಯ ಸುಮಾರು 25000 ಪುಟದಷ್ಟು ಅಂಬೇಡ್ಕರ್ ಅವರ ಬರಹಗಳು ಲಭ್ಯವಿದೆ. ಸುಮಾರು ಐದು ವರ್ಷಗಳ ಕಾಲ ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನೂ ಅಭ್ಯಾಸ ಮಾಡಿ, ಅಧ್ಯಯನ‌ ನಡೆಸಿ “ಬುದ್ಧ ಮತ್ತು ಅವನ ಧರ್ಮ” ಕೃತಿಯನ್ನು ಬರೆಯುವಾಗಲೇ ತಾವು ಮಾಡಿಟ್ಟಿದ್ದ ನೋಟ್ಸ್ ಗಳ ರಾಶಿಯ ಮೇಲೇ ಕೊನೆಯುಸಿರೆಳೆದರು.

ತಮ್ಮ ಇಡೀ ಜೀವಮಾನವನ್ನು ಪ್ರಬುಧ್ಧ ಭಾರತದ ನಿರ್ಮಾಣಕ್ಕಾಗಿ ನಿರಂತರವಾಗಿ ನಿಷ್ಠುರ ಸಂಪಾದಕೀಯಗಳನ್ನು, ಲೇಖನಗಳನ್ನು ಬರೆದರು. ಆ ನಿಷ್ಠುರತೆ ಇವತ್ತಿನ ಸುದ್ದಿ ಮಾಧ್ಯಮಗಳಲ್ಲಿ ಅಳಿಸುತ್ತಿದೆ.

ಒಂದು ಕಡೆ ಮಾಧ್ಯಮಗಳಲ್ಲಿ ದಲಿತ ಸಮುದಾಯದ ಪ್ರತಿನಿಧ್ಯವೇ ಇಲ್ಲ ಎನ್ನುವ ಅಧ್ಯಯನ‌ ವರದಿಗಳು ಬಂದಿವೆ. ನಿರ್ಣಾಯಕ ಸ್ಥಾನಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಸುದ್ದಿ ಸಂಸ್ಥೆಗಳು ನಿಷೇದ ಹೇರಿವೆ ಎನ್ನುವ ವರದಿಗಳೂ ಇವೆ. ಈ ತಾರತಮ್ಯ ಸುದ್ದಿಗಳ, ಸಂಗತಿಗಳ ಆಯ್ಕೆಯ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ ಪತ್ರಿಕೆಗಳನ್ನು ರೂಪಿಸುವ ಮತ್ತು ಸುದ್ದಿಗಳನ್ನು ಗ್ರಹಿಸುವುದರಲ್ಲಿ ಮತ್ತು ಮಂಡಿಸುವುದರಲ್ಲೂ ಅಂಬೇಡ್ಕರ್ ದೃಷ್ಟಿಕೋನ ಕಾಣೆಯಾಗಿದೆ ಎಂದರು.

ಆದ್ದರಿಂದ ಅಂಬೇಡ್ಕರ್ ಅವರ ದೃಷ್ಟಿಕೋನದ ಮರುಸ್ಥಾಪನೆ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕಾಳಜಿಗಳ ಮರು ಶೋಧನೆ ಆಗುವ ಅಗತ್ಯವಿದೆ.

2012 ರ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ನೆಪವಾಗಿ ಇಟ್ಟುಕೊಂಡು ಪ್ರಜಾವಾಣಿ ಪತ್ರಿಕೆ ದೇವನೂರು ಮಹದೇವ ಅವರ ಅತಿಥಿ ಸಂಪಾದಕತ್ವದಲ್ಲಿ ಸಂಚಿಕೆ ಹೊರತಂದಿತ್ತು. ಈ ಸಂಚಿಕೆಯನ್ನು ನಾನು ಇವತ್ತಿಗೂ ಜೋಪಾನವಾಗಿ ಇಟ್ಟಿದ್ದೀನಿ. ಈ ಸಂಚಿಕೆ ಪತ್ರಿಕೋದ್ಯಮದಲ್ಲಿ ಮರ್ಯಾದೆಗೇಡು ಹತ್ಯೆಗೆ ಒಳಗಾಗಿರುವ ಅಂಬೇಡ್ಕರ್ ದೃಷ್ಟಿಕೋನಕ್ಕೆ ಮರು ಜೀವ ಕೊಡುವ ಅದ್ಭುತ ಪ್ರಯತ್ನವಾಗಿತ್ತು.

ಆ ಸಂಚಿಕೆಯ ಮುಖಪುಟದಲ್ಲಿ, ದೇವನೂರು ಮಹದೇವ ಅವರು ಬರೆದಿರುವ “ಸಮಾನತೆ ಕನಸನ್ನು ಮತ್ತೆ ಕಾಣುತ್ತಾ” ಎನ್ನುವ ಅತಿಥಿ ಸಂಪಾದಕೀಯ ಮತ್ತು ಇದರ ಪಕ್ಕದಲ್ಲೇ ಸಂಪಾದಕ ಶಾಂತಕುಮಾರ್ ಅವರು ಬರೆದಿರುವ “ಕಾಳಜಿಗಳ ಮರು ಶೋಧ..” ಎನ್ನುವ ಸಂಪಾದಕೀಯ ಎರಡೂ ಕನ್ನಡಿಗಳು.

ಈ ಸಂಪಾದಕೀಯದ ಕನ್ನಡಿಗಳಲ್ಲಿ ನಾವು ಪತ್ರಕರ್ತರು ನಮ್ಮನ್ನು ನಾವು ಮರು ಶೋಧಿಸಿಕೊಳ್ಳುವ ಅಗತ್ಯವಿದೆ. ಈ ಕನ್ನಡಿಗಳಲ್ಲಿ ಈ ಹೊತ್ತಿನ ಸುದ್ದಿ ಮಾಧ್ಯಮಗಳು ದರ್ಶನ ಪಡೆಯಲಿ ಎಂದು ಆಶಿಸಿದರು.

ವಿಧಾನ ಪರಿಷತ್ ಸದಸ್ಯರಾದ ನವೀನ್ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ‌ ಅವರು ಆಶಯ ಮಾತುಗಳನ್ನಾಡಿದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೆಷಾ ಖಾನುಂ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ಕಾರ್ಯದರ್ಶಿ ಸಹನಾ ಭಟ್, ಅಕಾಡೆಮಿ ಸದಸ್ಯರಾದ ಅಹೋಬಳಪತಿ ಸೇರಿ SC/ST ಸಂಪಾದಕರ ಸಂಘದ ಪದಾಧಿಕಾರಿಗಳು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ದುರ್ಮರಣ

Share. Facebook Twitter LinkedIn WhatsApp Email

Related Posts

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

16/12/2025 10:09 PM1 Min Read

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ

16/12/2025 9:04 PM1 Min Read

ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

16/12/2025 9:01 PM1 Min Read
Recent News

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

16/12/2025 10:09 PM

IPL 2026 Auction : ಯಾರು, ಯಾವ ತಂಡದ ಪಾಲು.? ಮಾರಾಟವಾಗದೆ ಉಳಿದ ಆಟಗಾರರ ಫುಲ್ ಲಿಸ್ಟ್ ಇಲ್ಲಿದೆ!

16/12/2025 9:18 PM

ಗ್ರಾಹಕರಿಗೆ ಹೊಸ ವರ್ಷದ ಧಮಾಕಾ: ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು ಇಲ್ಲಿವೆ

16/12/2025 9:06 PM

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ

16/12/2025 9:04 PM
State News
KARNATAKA

ನಾಳೆಯ ‘ಸಾಗರ ಬಂದ್’ಗೆ ನನ್ನ ಸಂಪೂರ್ಣ ಬೆಂಬಲವಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0916/12/2025 10:09 PM KARNATAKA 1 Min Read

ಬೆಳಗಾವಿ ಸುವರ್ಣಸೌಧ: ನಾಳೆ ಸಾಗರ ಜಿಲ್ಲೆಗೆ ಒತ್ತಾಯಿಸಿ ಹೋರಾಟಗಾರರು ಸಾಗರ ಬಂದ್ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ…

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ

16/12/2025 9:04 PM

ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

16/12/2025 9:01 PM

ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ಕೇಂದ್ರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

16/12/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.