ಬೆಂಗಳೂರು: ನಟ ಕಮಲ್ ಹಾಸನ್ ತಮ್ಮ ನಟನೆಯ ಥಗ್ ಲೈಫ್ ಚಿತ್ರ ಬಿಡುಗಡೆಗೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರಿಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದರ ನಡುವೆಯೂ ನಟ ಕಮಲ್ ಹಾಸನ್ ಮೊಂಡಾಟ ಮುಂದುವರೆಸಿದ್ದಾರೆ. ಕ್ಷಮೆಯಾಚನೆ ಮಾಡಲು ಪರೋಕ್ಷವಾಗಿ ನಿರಾಕರಿಸಿದ್ದಾರೆ.
ಕೋರ್ಟ್ ವಿಚಾರಣೆ ವೇಳೆಯಲ್ಲಿ ನಿರ್ಮಾಪಕರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸುತ್ತಾ, ಕಮಲ್ ಹಾಸನ್ ಕ್ಷಮೆಯಾಚಿಸಿದರೇ ಎಲ್ಲವೂ ಸರಿಹೋಗಲಿದೆ ನಿಜ. ಆದರೇ ಕಮಲ್ ಹಾಸನ್ ಗೆ ಯಾವುದೇ ದುರುದ್ದೇಶವಿರಲಿಲ್ಲ. ಯಾವುದೇ ದುರುದ್ದೇಶವಿಲ್ಲದಿರುವುದರಿಂದ ಕ್ಷಮೆ ಕೇಳುತ್ತಿಲ್ಲ ಎಂದು ಹೇಳಿದರು.
ಕನ್ನಡದ ಬಗ್ಗೆ ಅವರ ನಿಲುವನ್ನು ಪತ್ರದಲ್ಲಿ ತಿಳಿಸಿದ್ದಾರೆ. ತಮ್ಮ ಪತ್ರದ ಮೂಲಕ ಕನ್ನಡದ ಪ್ರೀತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಒಂದ ಸೇರಿಸುವ ಒತ್ತಾಯ ಇರಬಾರದು ಎಂಬುದಾಗಿ ಧ್ಯಾನ್ ಚಿನ್ನಪ್ಪ ವಾದಿಸಿದರು. ಈ ಮೂಲಕ ನಟ ಕಮಲ್ ಹಾಸನ್ ಪರೋಕ್ಷವಾಗಿ ಕ್ಷಮೆ ಕೇಳಲು ನಿರಾಕರಿಸಿರುವಂತ ವಿಚಾರವನ್ನು ಕೋರ್ಟ್ ಗಮನಕ್ಕೆ ತಂದರು.
ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿಎಂ ಸಿದ್ದರಾಮಯ್ಯ
BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್