Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

18/10/2025 8:09 PM

BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ

18/10/2025 7:51 PM

75 ಗಂಟೆಯಲ್ಲಿ 303 ಶರಣಾಗತಿ, 2026ರ ವೇಳೆಗೆ ಭಾರತ ನಕ್ಸಲರಿಂದ ಮುಕ್ತ, ಈಗ ಕೇವಲ 11 ಜಿಲ್ಲೆಗಳು ಮಾತ್ರ ಬಾಧಿತ

18/10/2025 7:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ
KARNATAKA

BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ

By kannadanewsnow0918/10/2025 7:51 PM

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ದಿನಾಂಕ:16-10-2025ರ ಸಚಿವ ಸಂಪುಟದಲ್ಲಿ ಕೆಳಕಂಡಂತೆ ನಿರ್ಣಯ ಕೈಗೊಳ್ಳಲಾಗಿದೆ.

1) ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ಧಿಷ್ಟಪಡಿಸಲಾಗಿರುತ್ತದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿರುತ್ತದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿರುತ್ತದೆ.

2) ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪುಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್‌ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ | ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ.

3) ಯಾವುದೇ ಚಟುವಟಿಕೆಗಳು ಸಾರ್ವಜನಿಕರಿಗೆ ಅನಾನುಕೂಲವಾಗುವುದಾದಲ್ಲಿ ಹಾಗೂ ಸಂಬಂಧಿಸಿದ ಸಂಸ್ಥೆಗಳ ಆವರಣ/ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆಗಳ ಮೂಲ ಧೈಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿಯನ್ನು ನಿರಾಕರಿಸತಕ್ಕದ್ದು.

4) ಈ ಕೆಳಕಂಡ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲಾಗುವ ಖಾಸಗಿ ಸಂಘ, ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅವುಗಳ ಎದುರಿಗೆ ನಮೂದಿಸಲಾದ ಮಾಲಿಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡುವುದನ್ನು ಪರಿಶೀಲಸತಕ್ಕದ್ದು:-

> ಸರ್ಕಾರದ/ಸರ್ಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ

> ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.
> ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ ಸ್ಥಳಗಳು ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ ಪೊಲೀಸ್ ಅಧೀಕ್ಷಕರು.

5) ಮೇಲೆ ನಮೂದಿಸಿದ ಇಲಾಖೆ, ಸಕ್ಷಮ ಪ್ರಾಧಿಕಾರಗಳು ಇಂತಹ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನ ಬದ್ಧವಾದ ನಾಗರಿಕರ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಎಚ್ಚರಿಕೆ ವಹಿಸಲು ಅನುವಾಗುವಂತೆ ಸೂಕ್ತ, ವಿವರವಾದ ಮಾರ್ಗಸೂಚಿಯನ್ನು ಆಯಾ ಇಲಾಖೆಗಳು ಹೊರಡಿಸತಕ್ಕದ್ದು.

ಸಚಿವ ಸಂಪುಟವು ಕೈಗೊಂಡಿರುವ ಮೇಲಿನ ನಿರ್ಣಯದಂತೆ ಒಳಾಡಳಿತ ಇಲಾಖೆಯಿಂದ ಹೊರಡಿಸಲಾಗಿರುವ ಉಲ್ಲೇಖಿತ ಆದೇಶವನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಆದೇಶದಲ್ಲಿ ತಿಳಿಸಿರುವಂತೆ, ಆಯಾ ಇಲಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ, ಸೂಕ್ತ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಮುಂದುವರೆದು, ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸುವವರೆಗೆ, ಉಲ್ಲೇಖಿತ ಆದೇಶದಲ್ಲಿ ನಮೂದಿಸಿರುವ ಸಕ್ಷಮ ಪ್ರಾಧಿಕಾರವು ಚಾಲ್ತಿಯಲ್ಲಿರುವ ತಮ್ಮ ಇಲಾಖೆಯ ಮಾರ್ಗಸೂಚಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸದರಿ ಆದೇಶದಲ್ಲಿ ಉಲ್ಲೇಖಿಸಿರುವ ಸಿದ್ಧಾಂತಗಳನ್ನು ಪಾಲಿಸಿ ನ್ಯಾಯಿಕ ಆದೇಶವನ್ನು ಹೊರಡಿಸಲು ಕ್ರಮಕೈಗೊಳ್ಳುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಹೊರಡಿಸಲಾದ ಮಾರ್ಗಸೂಚಿಯ ಪ್ರತಿಯನ್ನು ಒಳಾಡಳಿತ ಇಲಾಖೆಗೆ ಕಳುಹಿಸುವಂತೆ ತಿಳಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಬಿಜೆಪಿಯ ‘ವೋಟ್ ಚೋರಿ’ ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು ಜನತೆಗೆ ಗಮನಕ್ಕೆ: ‘ಬನಶಂಕರಿ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ

Share. Facebook Twitter LinkedIn WhatsApp Email

Related Posts

BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

18/10/2025 8:09 PM2 Mins Read

ಬಿಜೆಪಿಯ ‘ವೋಟ್ ಚೋರಿ’ ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್

18/10/2025 7:19 PM2 Mins Read

12,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಅರೆಸ್ಟ್

18/10/2025 7:13 PM1 Min Read
Recent News

BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

18/10/2025 8:09 PM

BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ

18/10/2025 7:51 PM

75 ಗಂಟೆಯಲ್ಲಿ 303 ಶರಣಾಗತಿ, 2026ರ ವೇಳೆಗೆ ಭಾರತ ನಕ್ಸಲರಿಂದ ಮುಕ್ತ, ಈಗ ಕೇವಲ 11 ಜಿಲ್ಲೆಗಳು ಮಾತ್ರ ಬಾಧಿತ

18/10/2025 7:50 PM

ಬಿಜೆಪಿಯ ‘ವೋಟ್ ಚೋರಿ’ ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್

18/10/2025 7:19 PM
State News
KARNATAKA

BREAKING: ಇನ್ಮುಂದೆ ‘ಸರ್ಕಾರಿ ಜಾಗ’ಗಳಲ್ಲಿ ‘ಸಂಘಗಳ ಚಟುವಟಿಕೆ’ಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow0918/10/2025 8:09 PM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಯಂತ್ರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ…

BIG BREAKING: ರಾಜ್ಯದ ‘ಸರ್ಕಾರಿ ಸ್ಥಳ’ಗಳಲ್ಲಿ ‘ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ’ ಸರ್ಕಾರ ಅಧಿಕೃತ ಆದೇಶ

18/10/2025 7:51 PM

ಬಿಜೆಪಿಯ ‘ವೋಟ್ ಚೋರಿ’ ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್

18/10/2025 7:19 PM

12,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಅರೆಸ್ಟ್

18/10/2025 7:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.