ಕಲಬುರ್ಗಿ: ಜಿಲ್ಲೆಯಲ್ಲಿ ಕೋರ್ಟ್ ನ ಚೇಂಬರ್ ನಲ್ಲಿದ್ದಂತ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ಕೋರ್ಚ್ ಚೇಂಬರ್ ನಲ್ಲಿದ್ದಾಗಲೇ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದಂತ ವಿಶ್ವನಾಥ ಮುಗುಟಿ(44) ಎಂಬುವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೇ ಅವರು ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.
ಅಂದಹಾಗೇ ಇಂದು ಎಂದಿನಂತೆ ಕೋರ್ಟ್ ಗೆ ನಗು ನಗುತ್ತಲೇ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರು ಆಗಮಿಸಿದ್ದರು. ತಮ್ಮ ಚೇಂಬರ್ ನಲ್ಲಿ ಕುಳಿತು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕ, ಕಚೇರಿ ಸಿಬ್ಬಂದಿ ಸಹಾಯದಿಂದ ಕಲಬುರ್ಗಿಯ ಜಯದೇವ ಹದ್ರೋಗ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೇ ಆ ವೇಳೆಗಾಗಲೇ ನ್ಯಾಯಾಧೀಶರು ಮೃತಪಟ್ಟಿದ್ದರು.
ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರ ನಿಧನಕ್ಕೆ ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಮೂರ್ತಿಗಳು ಸಂತಾಪ ಸೂಚಿಸಿದ್ದಾರೆ.
BREAKING: ಮೈಸೂರು ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್
BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ