ಮೈಸೂರು : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟ ವನ್ಯ ಧಾಮದಲ್ಲಿ ಹೆಣ್ಣು ಹುಲಿಯೊಂದನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಅವರು ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗೆ ಮಹದೇಶ್ವರಬೆಟ್ಟ ವನ್ಯಧಾಮದ ಹೂಗ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳನ್ನು ವಿಷ ಪ್ರಾಶನ ಮಾಡುವ ಮೂಲಕ ಕೊಲ್ಲಲಾಗಿತ್ತು, ಅದರ ಬೆನ್ನಲ್ಲೇ ಮತ್ತೊಂದು ಹುಲಿಯನ್ನು ಕೊಲೆ ಮಾಡಿರುವುದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದ್ದಾರೆ.
ಅರಣ್ಯ ಸಂರಕ್ಷಣೆ ಹಾಗೂ ವನ್ಯ ಜೀವಿಗಳ ಆರೈಕೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಹಾಗೂ ತನ್ನ ಬೇಜವಾಬ್ದಾರಿತನದ ಆಡಳಿತದಿಂದ ನಾವು ಈಗಾಗಲೇ ಸಾಕಷ್ಟು ಪ್ರಾಣಿಗಳನ್ನು ಕಳೆದುಕೊಂಡಿದ್ದೇವೆ. ಈ ವರ್ಷದಲ್ಲಿ 6 ಹುಲಿಗಳ ಹತ್ಯೆಯಾಗಿದ್ದರೂ, ಆದರೂ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಹಿಂದೆ ನಡೆದ ಘಟನೆಗಳಿಂದಾದರೂ ಪಾಠ ಕಲಿತು, ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಅಧಿಕಾರಿಗಳು ತೀವ್ರ ನಿಗಾ ವಹಿಸುತ್ತಾರೆ ಎಂದು ಭಾವಿಸಿದ್ದೇವು, ಅದು ಕೂಡ ಹುಸಿಯಾಗಿದೆ.
ವನ್ಯ ಜೀವಿಗಳ ಸಂರಕ್ಷಣೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲದೆ ಸರ್ಕಾರ ತನ್ನ ಕರ್ತವ್ಯವನ್ನು ನಿರ್ವಹಿಸಲು ನಾವು ಎಷ್ಟೇ ಮನವಿ ಮಾಡಿದರೂ ಮತ್ತೆ ಈ ರೀತಿಯ ಆವಾಂತರಗಳು ನಡೆಯುತ್ತಿರುವುದು ಬೇಸರ ತಂದಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ವಿನಂತಿಸುತ್ತೇನೆ.ವನ್ಯಜೀವಿಗಳ ಸಂರಕ್ಷಣೆಯ ವಿಷಯದಲ್ಲಿ ಎಂದಿಗೂ ನಿರ್ಲಕ್ಷ್ಯ ಬೇಡ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟ ವನ್ಯ ಧಾಮದಲ್ಲಿ ಹೆಣ್ಣು ಹುಲಿಯೊಂದನ್ನು ದುಷ್ಕರ್ಮಿ ಗಳು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾರೆ. ಇತ್ತೀಚೆಗೆ ಮಹದೇಶ್ವರಬೆಟ್ಟ ವನ್ಯಧಾಮದ ಹೂಗ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳನ್ನು ವಿಷ ಪ್ರಾಶನ ಮಾಡುವ ಮೂಲಕ ಕೊಲ್ಲಲಾಗಿತ್ತು, ಅದರ ಬೆನ್ನಲ್ಲೇ ಮತ್ತೊಂದು… pic.twitter.com/1fH9TbIzhE
— Yaduveer Wadiyar (@yaduveerwadiyar) October 4, 2025