ರಾಯಚೂರು: ಜಿಲ್ಲೆಯ ಕಳೆದ ಮೂರು ತಿಂಗಳಿನಿಂದ ಚಿರತೆಯೊಂದು ಕಾಣಿಸಿಕೊಂಡು ನಾಯಿ, ಪ್ರಾಣಿಗಳನ್ನು ತಿಂದು ಆತಂಕ ಮೂಡಿಸಿತ್ತು. ಹೀಗೆ ಮೂರು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದಂತ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಯಚೂರು ತಾಲ್ಲೂಕಿನ ಡಿ.ರಾಂಪುರ ಬಳಿಯ ಬೆಟ್ಟದಲ್ಲಿ ಚಿರತೆ ಸೆರೆ ಹಿಡಿಯಲಾಗಿದೆ. ಈ ಚಿರತೆ 20ಕ್ಕೂ ಹೆಚ್ಚು ನಾಯಿಗಳು, ಮೇಕೆಗಳನ್ನು ತಿಂದು ಹಾಕಿತ್ತು. ಈ ಚಿರತೆ ಓಡಾಡುವಂತ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಈ ಹಿನ್ನಲೆಯಲ್ಲಿ ಆತಂಕ ಸೃಷ್ಠಿಸಿದ್ದಂತ ಚಿರತೆಯ ಸೆರೆಗಾಗಿ ಬೆಟ್ಟದಲ್ಲಿ ಎರಡು ಬೋನುಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಇರಿಸಿದ್ದರು. ಹೀಗೆ ಡಿ.ರಾಂಪುರ ಬಳಿ ಬೆಟ್ಟದ ತಪ್ಪಲಿನಲ್ಲಿ ಇರಿಸಿದ್ದಂತ ಬೋನಿಗೆ ಚಿರತೆ ಬಿದ್ದಿದೆ.
CRIME NEWS: ರಾಯಚೂರಲ್ಲಿ ಕಸ ವಿಲೇವಾರಿ ವಾಹನವನ್ನೇ ಕದ್ದೊಯ್ದ ಕಳ್ಳರು!
CRIME NEWS: ರಾಯಚೂರಲ್ಲಿ ಕಸ ವಿಲೇವಾರಿ ವಾಹನವನ್ನೇ ಕದ್ದೊಯ್ದ ಕಳ್ಳರು!