Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

BREAKING: ಪಂಚರಾಜ್ಯಗಳ ವಿಧಾನಸಭಾ ಸಮರ: ಇಂದು ಸಂಜೆ ಚುನಾವಣಾ ವೇಳಾಪಟ್ಟಿ ಪ್ರಕಟ !

15/03/2026 11:01 AM

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆ ಪತ್ರದಲ್ಲಿ ದಿನಾಂಕವೂ ಇಲ್ಲ, ಅದು ಖಾತ್ರಿಯೇನಲ್ಲ: ಸಿಎಂ ಜಗ್ಗಿದ್ದು, ಬಗ್ಗಿದ್ಯಾಕೆ?: ಛಲವಾದಿ ನಾರಾಯಣಸ್ವಾಮಿ
KARNATAKA

ಆ ಪತ್ರದಲ್ಲಿ ದಿನಾಂಕವೂ ಇಲ್ಲ, ಅದು ಖಾತ್ರಿಯೇನಲ್ಲ: ಸಿಎಂ ಜಗ್ಗಿದ್ದು, ಬಗ್ಗಿದ್ಯಾಕೆ?: ಛಲವಾದಿ ನಾರಾಯಣಸ್ವಾಮಿ

By kannadanewsnow0901/10/2024 8:40 PM

ಬೆಂಗಳೂರು: ಸಿದ್ದರಾಮಯ್ಯನವರು ಈಗ ಸಿಕ್ಕಿಬಿದ್ದಿದ್ದಾರೆ. ಜಗ್ಗೋಲ್ಲ; ಬಗ್ಗೋಲ್ಲ; ಏನೇ ಬಂದ್ರೂ ಎದುರಿಸ್ತೀನಿ ಎಂದವರು ನಿನ್ನೆ ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ? ರಾತ್ರೋರಾತ್ರಿ ಜಗ್ಗಿದ್ದು, ಬಗ್ಗಿದ್ದು ಯಾಕೆ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದರಿಂದ ಅವರ ಕಪಟತನ ಎಂಥದ್ದೆಂದು ಅರ್ಥವಾಗುತ್ತದೆ. ನಿನ್ನೆ 14 ಸೈಟ್ ಸರೆಂಡರ್ ಮಾಡಿದ್ದಾಗಿ ಲೆಟರ್ ಕೊಟ್ಟಿದ್ದಾರೆ. ಆ ಪತ್ರದಲ್ಲಿ ದಿನಾಂಕವೂ ಇಲ್ಲ; ಆದ್ದರಿಂದ ಅದು ಖಾತ್ರಿಯೇನಲ್ಲ ಎಂದು ತಿಳಿಸಿದರು.

ಹಳ್ಳಿಕಡೆ ‘ನೂರು ಬಾರಿ ಕದ್ದೋನು ಒಂದು ಸಾರಿಯಾದ್ರೂ ಸಿಗಲೇಬೇಕು’ ಎಂಬ ಗಾದೆ ಇದೆ. ಹಾಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಚಾ ಅಲ್ಲ. ನೂರಾರು ಬಾರಿ ಕದ್ದವರು ಒಂದು ಸಾರಿ ಸಿಕ್ಕಿ ಹಾಕಿಕೊಳ್ತಾರಲ್ವ? ಒಂದು ಸಾರಿ ಸಿಕ್ಕಿದರೂ ನೂರು ಬಾರಿ ಮಾಡಿದ ಹಾಗೇ ಎಂದು ವಿಶ್ಲೇಷಿಸಿದರು.

ಇವರು ಜಗ್ಗಿದ ಮೇಲೆ ಬಾಬಾಸಾಹೇಬ ಅಂಬೇಡ್ಕರ್ ಅವರು ಬರೆದ ಸಂವಿಧಾನಕ್ಕೆ ನಿಜವಾಗಿಯೂ ಗೌರವ ಸಿಕ್ಕಿದೆ. ಯಾರೂ ಕೂಡ ಈ ರೀತಿ ಉದ್ಧಟತನ ಪ್ರದರ್ಶನ ಮಾಡಬಾರದು ಎಂದು ನುಡಿದರು. ಕಳೆದ ಬಾರಿ ಅವರ ಅಧಿಕಾರಾವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಕಳವಾಗಿದ್ದ ಹುಬ್ಲೋಟ್ ವಾಚ್ ವಿಚಾರ ಬಂದಿತ್ತು. ಅದೊಂದು ಹಗರಣವಾಗಿತ್ತು. ಅದು ದುಡ್ಡು ಕೊಟ್ಟು ಕೊಂಡದ್ದೆಂದು ಮೊದಲು ಹೇಳಿದ್ದರು. ಸ್ವಲ್ಪ ದಿನದ ಬಳಿಕ ಸ್ನೇಹಿತರಿಂದ ಉಡುಗೊರೆ ಎಂದಿದ್ದರು. ನಂತರ ಕಳವು ಮಾಲೆಂದು ಗೊತ್ತಾಗಿತ್ತು. ಇದರಿಂದ ಕಷ್ಟ ಅನುಭವಿಸಬೇಕಾಗಬಹುದೆಂದು ಅದನ್ನು ಸರೆಂಡರ್ ಮಾಡಿದ್ದರು ಎಂದು ವಿವರಿಸಿದರು.

ಕದ್ದ ಮಾಲನ್ನು ವಿಧಾನಸೌಧದಲ್ಲಿ ಸರೆಂಡರ್ ಮಾಡಿದ್ದು ಸರಿಯೇ? ಪೊಲೀಸರಿಗೆ ಕೊಡಬೇಕಿತ್ತಲ್ಲವೇ? ಎಂದು ಕೇಳಿದರು. ಎಸ್‍ಇಪಿ, ಎಸ್‍ಟಿಪಿ ಹಣ ದುರುಪಯೋಗ ಮಾಡಿದರು. ಪ್ರತಿಭಟನೆ ನಡೆದು ಮುಜುಗರ ಅನುಭವಿಸಬೇಕಾದ ಸಂದರ್ಭದಲ್ಲಿ, ಪ್ರಜಾಪ್ರಭುತ್ವ ದಿನದಂದು ನಾನೊಂದು ತಪ್ಪು ಮಾಡಿದೆ. ಅನ್ಯ ಉದ್ದೇಶಕ್ಕೆ ಪರಿಶಿಷ್ಟ ಸಮುದಾಯದ ಹಣ ಬಳಸಬಾರದಿತ್ತು ಎಂದಿದ್ದರು ಎಂದು ಗಮನ ಸೆಳೆದರು. ಅಲ್ಲಿಗೆ ಅವೆರಡರಿಂದ ತಪ್ಪಿಸಿಕೊಂಡರು ಎಂದರು.

ವಾಲ್ಮೀಕಿ ನಿಗಮದ್ದು 187 ಕೋಟಿಯ ಹಗರಣವಲ್ಲ; 87 ಕೋಟಿಯ ಹಗರಣ ಎಂದು ಸದನದಲ್ಲೇ ಒಪ್ಪಿಕೊಂಡರು. ಈಗ ಮುಡಾದ್ದು ತಮ್ಮ ನಿವೇಶನಗಳಿಗೆ 62 ಕೋಟಿ ಬರಬೇಕು; ಕೊಡ್ತೀರಾ ಎಂದು ಪತ್ರಕರ್ತರನ್ನು ಪ್ರಶ್ನಿಸಿದರು. ಪತ್ರಕರ್ತರು ಕೊಡ್ತಾರಾ? ಎಂದು ಕೇಳಿದರು. ಇವತ್ತಿನ ಅವರ ಪರಿಸ್ಥಿತಿ ನೋಡಿ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ವಕ್ತಾರ ಮಹೇಶ್ ಎಂ.ಜಿ ಹಾಜರಿದ್ದರು.

BIG NEWS: ಈ ಬಾರಿ ‘ಹಜ್ ಯಾತ್ರೆ’ಗೆ ಬರೋಬ್ಬರಿ ‘11,000 ಆಕಾಂಕ್ಷಿ’ಗಳಿಂದ ಅರ್ಜಿ ಸಲ್ಲಿಕೆ | Haj Yatra

ಲಂಚ ಪಡೆಯುತ್ತಿದ್ದ ವೀಡಿಯೋ ವೈರಲ್ ಹಿನ್ನಲೆ: ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ‘VA ದಾಸೇಗೌಡ’ ಸಸ್ಪೆಂಡ್

BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು

Share. Facebook Twitter LinkedIn WhatsApp Email

Related Posts

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM1 Min Read

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM1 Min Read

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM2 Mins Read
Recent News

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

BREAKING: ಪಂಚರಾಜ್ಯಗಳ ವಿಧಾನಸಭಾ ಸಮರ: ಇಂದು ಸಂಜೆ ಚುನಾವಣಾ ವೇಳಾಪಟ್ಟಿ ಪ್ರಕಟ !

15/03/2026 11:01 AM

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM

ಇರಾನ್‌ನ ‘ಖಾರ್ಗ್ ದ್ವೀಪ’ದ ಮೇಲೆ ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಮಿತ್ರರಾಷ್ಟ್ರಗಳಿಗೆ ಒತ್ತಡ

15/03/2026 10:40 AM
State News
KARNATAKA

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

By kannadanewsnow0515/03/2026 11:02 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಭಾನುವಾರ ಬೆಳಿಗ್ಗೆ ಕಾರು ಮತ್ತು…

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

15/03/2026 10:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.