Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ತಡರಾತ್ರಿ ನಂದಿನಿ ಪಾರ್ಲರ್ ಬೀಗ ಮುರಿದು 3 ಲಕ್ಷ ಕಳ್ಳತನ : ಪ್ರಕರಣ ದಾಖಲು

03/08/2025 6:13 AM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘SIT’ ಮುಂದೆ ಹೊಸ ಸಾಕ್ಷಿದಾರ ಪ್ರತ್ಯಕ್ಷ, ಬಾಲಕಿ ಶವ ಹೂತಿದ್ದು, ನೋಡಿದ್ದಾಗಿ ಹೇಳಿಕೆ!

03/08/2025 6:07 AM

ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸ್ಫೋಟಕ ಹೇಳಿಕೆ!

03/08/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿನ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಬೆಲೆ ಏರಿಕೆ: ಬಿವೈ ವಿಜಯೇಂದ್ರ
KARNATAKA

ರಾಜ್ಯದಲ್ಲಿನ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಬೆಲೆ ಏರಿಕೆ: ಬಿವೈ ವಿಜಯೇಂದ್ರ

By kannadanewsnow0920/03/2025 3:28 PM

ಬೆಂಗಳೂರು: ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ತಿಳಿಸಿದರು.

ಇವರ ಹುಳುಕನ್ನು ಮುಚ್ಚಿ ಹಾಕಲು ಪದೇಪದೇ ಕೇಂದ್ರ ಸರಕಾರ ಅನ್ಯಾಯ ಮಾಡುತ್ತಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ಕಡೆ ಪುಕ್ಕಟೆ ವಿದ್ಯುತ್ ಎನ್ನುತ್ತಾರೆ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. 3 ಫೇಸ್ ವಿದ್ಯುತ್ತನ್ನು 7 ತಾಸು ಕೊಡಲು ಸರಕಾರಕ್ಕೆ ಆಗುತ್ತಿಲ್ಲ. ಮತ್ತೊಂದು ಕಡೆ ಪಿಡಬ್ಲ್ಯುಡಿ ಮತ್ತಿತರ ಇಲಾಖೆಗಳು 6500 ಕೋಟಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಜನರಿಗೆ ಬರೆ ಎಳೆಯುವ ಸರಕಾರದ ಕ್ರಮ ಅಕ್ಷಮ್ಯ ಅಪರಾಧ. ಇದನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.

ಪ್ರಶ್ನೆಗೆ ಉತ್ತರ ನೀಡಿದ ಅವರು, ಸ್ಮಾರ್ಟ್ ಮೀಟರ್, ವಿದ್ಯುತ್ ದರ ಏರಿಕೆ, ಮೆಟ್ರೋ ದರ ಮತ್ತಿತರ ಬೆಲೆ ಏರಿಕೆ ಮತ್ತಿತರ ವಿಚಾರವನ್ನು ಚರ್ಚಿಸಲು ಸರಕಾರಕ್ಕೆ ಪುರುಸೊತ್ತಿಲ್ಲ; ಅಲ್ಪಸಂಖ್ಯಾತರ ಓಲೈಕೆ ಮಾಡಲು ಹೊರಟಿದೆ ಎಂದು ಆಕ್ಷೇಪಿಸಿದರು. ಮೇಕೆ ದಾಟು ಎಂದು ತಿಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಏನ್ಮಾಡಿದ್ದಾರೆಂದು ಡಿ.ಕೆ.ಶಿವಕುಮಾರರನ್ನು ಪ್ರಶ್ನಿಸಬೇಕಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅಧಿಕಾರದ ಮದ, ಭ್ರಮೆ ಇವರ ನೆತ್ತಿಗೇರಿದೆ. ಹೇಳಿ ಕೇಳಿ ಡಿ.ಕೆ.ಶಿವಕುಮಾರ್ ಅವರು ದೇಶದ ಎರಡನೇ ಅತಿ ಶ್ರೀಮಂತ ಶಾಸಕ ಎಂದು ವ್ಯಂಗ್ಯವಾಡಿದರು.

ಇದು ಪಿಕ್ ಪಾಕೆಟ್ ಸರಕಾರ..

ಸಾರ್ವತ್ರಿಕ ಚುನಾವಣೆಯಲ್ಲಿ ಜನರ ಕಿವಿಗೆ ಹೂವು ಮುಡಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು ಜನರಿಗೆ ಮೋಸ, ವಂಚನೆ ಮಾಡುತ್ತಿದ್ದಾರೆ. ನಾಡಿನ ಜನರು ಎಚ್ಚತ್ತುಕೊಳ್ಳಬೇಕಿದೆ. ಇದು ಪಿಕ್ ಪಾಕೆಟ್ ಸರಕಾರ. ಒಂದೆಡೆ ಗ್ಯಾರಂಟಿ ಕೊಡುವುದಾಗಿ ಹೇಳಿಕೊಂಡು ಜನಸಾಮಾನ್ಯರಿಗೆ ಹೊರೆ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ಮುಸಲ್ಮಾನರಿಗೆ ಸರಕಾರಿ ಗುತ್ತಿಗೆಗಳು, ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಮಸೂದೆ ಸದನದಲ್ಲಿ ತರುತ್ತಿದ್ದಾರೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು. ಇದು ಕಾಂಗ್ರೆಸ್ ಸರಕಾರವೇ? ಸಿದ್ದರಾಮಯ್ಯರ ಸರಕಾರವೇ ಅಥವಾ ನಿಜಾಮರ ಆಡಳಿತವೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ ಎಂದು ತಿಳಿಸಿದರು. ಮುಸಲ್ಮಾನರ ಓಲೈಕೆ ಮತ್ತು ರಾಜ್ಯದ ಹಿಂದೂಗಳಿಗೆ ಅವಮಾನ ಮಾಡುವ ಕೆಲಸವನ್ನು ಸಿದ್ದರಾಮಯ್ಯರ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.

ಹಿಂದಿನ ಅವರ ಅವಧಿಯಲ್ಲಿ ಶಾದಿ ಭಾಗ್ಯ ತಂದಿದ್ದಲ್ಲದೆ, ಟಿಪ್ಪು ಜಯಂತಿ ತಂದಿದ್ದರು. ಈಗ ವಕ್ಫ್ ಬಿಲ್ ದುರುಪಯೋಗ ಪಡಿಸಿಕೊಂಡು ಲಕ್ಷ- ಕೋಟಿ ಮೌಲ್ಯದ ಜಮೀನನ್ನು ಕಬಳಿಸುವ ಕೆಲಸಕ್ಕೆ ಕಾಂಗ್ರೆಸ್ ಪುಡಾರಿಗಳು ಹೊರಟಿದ್ದಾರೆ. ಅವರ ರಕ್ಷಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂದು ಆರೋಪಿಸಿದರು. ಹಿಂದೂಗಳಿಗೆ ಮಾಡುವ ಅವಮಾನಕ್ಕೆ ಇವರು ಬೆಲೆ ತೆರಲೇಬೇಕಾಗುತ್ತದೆ ಎಂದು ಎಚ್ಚರಿಸಿದರು.

ದ್ವೇಷದ ರಾಜಕಾರಣ ಕುಮಾರಸ್ವಾಮಿ ಡಿಎನ್ಎಯಲ್ಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

‘ಕಾವೇರಿ ಆರತಿ’ ಸರ್ಕಾರಿ ಕಾರ್ಯಕ್ರಮ, ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ತಡರಾತ್ರಿ ನಂದಿನಿ ಪಾರ್ಲರ್ ಬೀಗ ಮುರಿದು 3 ಲಕ್ಷ ಕಳ್ಳತನ : ಪ್ರಕರಣ ದಾಖಲು

03/08/2025 6:13 AM1 Min Read

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘SIT’ ಮುಂದೆ ಹೊಸ ಸಾಕ್ಷಿದಾರ ಪ್ರತ್ಯಕ್ಷ, ಬಾಲಕಿ ಶವ ಹೂತಿದ್ದು, ನೋಡಿದ್ದಾಗಿ ಹೇಳಿಕೆ!

03/08/2025 6:07 AM1 Min Read

ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸ್ಫೋಟಕ ಹೇಳಿಕೆ!

03/08/2025 5:57 AM2 Mins Read
Recent News

ಬೆಂಗಳೂರಲ್ಲಿ ತಡರಾತ್ರಿ ನಂದಿನಿ ಪಾರ್ಲರ್ ಬೀಗ ಮುರಿದು 3 ಲಕ್ಷ ಕಳ್ಳತನ : ಪ್ರಕರಣ ದಾಖಲು

03/08/2025 6:13 AM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘SIT’ ಮುಂದೆ ಹೊಸ ಸಾಕ್ಷಿದಾರ ಪ್ರತ್ಯಕ್ಷ, ಬಾಲಕಿ ಶವ ಹೂತಿದ್ದು, ನೋಡಿದ್ದಾಗಿ ಹೇಳಿಕೆ!

03/08/2025 6:07 AM

ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸ್ಫೋಟಕ ಹೇಳಿಕೆ!

03/08/2025 5:57 AM

BIG NEWS : ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಕಠಿಣ ಕ್ರಮ : ರಾಜ್ಯ ಸರ್ಕಾರ ಎಚ್ಚರಿಕೆ

03/08/2025 5:47 AM
State News
KARNATAKA

ಬೆಂಗಳೂರಲ್ಲಿ ತಡರಾತ್ರಿ ನಂದಿನಿ ಪಾರ್ಲರ್ ಬೀಗ ಮುರಿದು 3 ಲಕ್ಷ ಕಳ್ಳತನ : ಪ್ರಕರಣ ದಾಖಲು

By kannadanewsnow0503/08/2025 6:13 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ನಂದಿನಿ ಪಾರ್ಲರ್ ಬೀಗ ಮುರಿದು 3 ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ. ಮಳಿಗೆಯ ಬೀಗ ಕುರಿತು…

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ‘SIT’ ಮುಂದೆ ಹೊಸ ಸಾಕ್ಷಿದಾರ ಪ್ರತ್ಯಕ್ಷ, ಬಾಲಕಿ ಶವ ಹೂತಿದ್ದು, ನೋಡಿದ್ದಾಗಿ ಹೇಳಿಕೆ!

03/08/2025 6:07 AM

ಪ್ರಜ್ವಲ್ ರೇವಣ್ಣ ಕೇಸಲ್ಲಿ ತೀರ್ಪು ವಿಳಂಬಕ್ಕೆ ಶತಪ್ರಯತ್ನ ನಡೆದಿತ್ತು: ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸ್ಫೋಟಕ ಹೇಳಿಕೆ!

03/08/2025 5:57 AM

BIG NEWS : ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಕಠಿಣ ಕ್ರಮ : ರಾಜ್ಯ ಸರ್ಕಾರ ಎಚ್ಚರಿಕೆ

03/08/2025 5:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.