Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 323 ಅಂಕ ಏರಿಕೆ; 24,850 ರ ಗಡಿ ದಾಟಿದ ‘ನಿಫ್ಟಿ’ |Share Market

09/09/2025 9:24 AM

SHOCKING : ಕುತ್ತಿಗೆ ಬಾಗಿಸಿ ಗಂಟೆಗಟ್ಟಲೆ `ಮೊಬೈಲ್’ ಬಳಸಿದ ವಿದ್ಯಾರ್ಥಿಗೆ ಪಾರ್ಶ್ವವಾಯು.!

09/09/2025 9:17 AM

ಭೀಕರ ಅಪಘಾತದಲ್ಲಿ ಸಾವು: ವದಂತಿಗಳನ್ನು ತಳ್ಳಿಹಾಕಿದ ನಟಿ ಕಾಜಲ್ ಅಗರ್ವಾಲ್

09/09/2025 9:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭ ಹಿನ್ನಲೆ; ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ
KARNATAKA

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭ ಹಿನ್ನಲೆ; ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ

By kannadanewsnow5722/05/2024 5:04 AM

ಬಳ್ಳಾರಿ : ಪೂರ್ವ ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನಲೆಯಲ್ಲಿ ಮಳೆ ಹಾನಿಯಿಂದಾಗಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ತಹಶೀಲ್ದಾರರೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು, ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಇದಕ್ಕೆ ಸ್ಥಳೀಯ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಸೂಚಿಸಿದರು.

ಮಳೆಯಿಂದಾಗುವ ಮನೆಹಾನಿ ಮತ್ತು ಗುಡುಗು-ಸಿಡಿಲಿನಿಂದ ಜನ-ಜಾನುವಾರು ಪ್ರಾಣಹಾನಿ ತಡೆಗಟ್ಟಲು ಜಾಗೃತಿ ಮೂಡಿಸಬೇಕು, ಅಲ್ಲದೆ ಮಳೆ, ಸಿಡಿಲಿನಿಂದ ಉಂಟಾಗುವ ಯಾವುದೇ ಹಾನಿ ವರದಿಯನ್ನು ತ್ವರಿತವಾಗಿ ಸಲ್ಲಿಸಲು ಅಧಿಕಾರಿಗಳನ್ನು ನಿಯೋಜಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ವರದಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು. ಈ ಬಾರಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವುದು ವರದಿಯಾಗುತ್ತಿದ್ದು, ವಿದ್ಯುತ್ ಅವಘಡ ಉಂಟಾಗದಂತೆ ನಿಗಾವಹಿಸಬೇಕು. ಸಾರ್ವಜನಿಕರು ವಿದ್ಯುತ್‍ಗೆ ಸಂಬಂಧಿಸಿದಂತೆ ದೂರುಗಳಿಗೆ ಕರೆ ಮಾಡಿದಲ್ಲಿ ತಕ್ಷಣವೇ ಸ್ಪಂದಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಬಳ್ಳಾರಿ ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೆ ಕ್ರಮವಹಿಸಬೇಕು ಎಂದು ತಿಳಿಸಿದರು.

The onset of pre-monsoon rains in the state; Instructions to make necessary preparations ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭ ಹಿನ್ನಲೆ; ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ
Share. Facebook Twitter LinkedIn WhatsApp Email

Related Posts

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

09/09/2025 9:00 AM1 Min Read

ಮನೆಯಲ್ಲಿರುವ ಇಲಿಗಳನ್ನು ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 8:54 AM2 Mins Read

ನಿನಗಾಗಿ ಪಡುವಣದಲ್ಲಿ ರವಿ ಮೂಡುವನೇ : ಧರ್ಮಾಧಿಕಾರಿ ಬಗ್ಗೆ ಕೋಡಿ ಶ್ರೀ ಭವಿಷ್ಯ

09/09/2025 8:43 AM1 Min Read
Recent News

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 323 ಅಂಕ ಏರಿಕೆ; 24,850 ರ ಗಡಿ ದಾಟಿದ ‘ನಿಫ್ಟಿ’ |Share Market

09/09/2025 9:24 AM

SHOCKING : ಕುತ್ತಿಗೆ ಬಾಗಿಸಿ ಗಂಟೆಗಟ್ಟಲೆ `ಮೊಬೈಲ್’ ಬಳಸಿದ ವಿದ್ಯಾರ್ಥಿಗೆ ಪಾರ್ಶ್ವವಾಯು.!

09/09/2025 9:17 AM

ಭೀಕರ ಅಪಘಾತದಲ್ಲಿ ಸಾವು: ವದಂತಿಗಳನ್ನು ತಳ್ಳಿಹಾಕಿದ ನಟಿ ಕಾಜಲ್ ಅಗರ್ವಾಲ್

09/09/2025 9:11 AM

ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಬ್ರ್ಯಾಂಡ್ ಗಳ ಹಾಲಿನ ಬೆಲೆಯಲ್ಲಿ ಇಳಿಕೆ | Milk Price

09/09/2025 9:02 AM
State News
KARNATAKA

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

By kannadanewsnow5709/09/2025 9:00 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ ಎಲ್ಲರ ಕೈಯಲ್ಲೂ ಸ್ಮಾರ್ಟ್‌ಫೋನ್ ಇರುತ್ತದೆ. ಸ್ಮಾರ್ಟ್‌ಫೋನ್ ಇಲ್ಲದವರನ್ನು ನೋಡುವುದು ಬಹಳ ಅಪರೂಪವಾಗಿದೆ. ಸ್ಮಾರ್ಟ್‌ಫೋನ್‌ಗಳು ಜನರ ಜೀವನದ ಪ್ರಮುಖ…

ಮನೆಯಲ್ಲಿರುವ ಇಲಿಗಳನ್ನು ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 8:54 AM

ನಿನಗಾಗಿ ಪಡುವಣದಲ್ಲಿ ರವಿ ಮೂಡುವನೇ : ಧರ್ಮಾಧಿಕಾರಿ ಬಗ್ಗೆ ಕೋಡಿ ಶ್ರೀ ಭವಿಷ್ಯ

09/09/2025 8:43 AM

ಮಕ್ಕಳಿಗೆ `ಚಹಾ’ ಕುಡಿಸುವ ಪೋಷಕರೇ ಇದನ್ನೊಮ್ಮೆ ಓದಿ.!

09/09/2025 8:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.