Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಟಿ ರಶ್ಮಿಕಾ-ವಿಜಯ್

27/02/2026 2:52 PM

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆಣಬಿನ ಚೀಲದಲ್ಲಿ ಸಕ್ಕರೆಯ ಶೇ. 20 ರಷ್ಟು ಉತ್ಪಾದನೆ ಪ್ಯಾಕ್ ಕಡ್ಡಾಯ : ಕೇಂದ್ರದ ಅಧಿಸೂಚನೆಗೆ ಹೈಕೋರ್ಟ್ ತಡೆ
KARNATAKA

ಸೆಣಬಿನ ಚೀಲದಲ್ಲಿ ಸಕ್ಕರೆಯ ಶೇ. 20 ರಷ್ಟು ಉತ್ಪಾದನೆ ಪ್ಯಾಕ್ ಕಡ್ಡಾಯ : ಕೇಂದ್ರದ ಅಧಿಸೂಚನೆಗೆ ಹೈಕೋರ್ಟ್ ತಡೆ

By kannadanewsnow0507/09/2024 6:14 PM

ಬೆಂಗಳೂರು : ಸಕ್ಕರೆಯಲ್ಲಿ ಶೇ.20ರಷ್ಟನ್ನು ಭಾರತದ ಸೆಣಬಿನ ಕಚ್ಚಾ ಪದಾರ್ಥಗಳಿಂದ ತಯಾರಿಸಿದ ಸೆಣಬಿನ ಚೀಲಗಳಲ್ಲಿಯೇ ಕಡ್ಡಾಯವಾಗಿ ಪ್ಯಾಕಿಂಗ್ ಮಾಡಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್​ನಿಂದ ತಡೆ ಬಿದ್ದಿದೆ. ಕೇಂದ್ರದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಕೋರ್ಟ್​ ತಡೆ ಹಿಡಿದಿದೆ.

ಸೌತ್ ಇಂಡಿಯನ್ ಶುಗರ್ ಮಿಲ್ಸ್​ ಅಸೋಸಿಯೇಷನ್ – ಕರ್ನಾಟಕ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸೆಣಬಿನ ಚೀಲಗಳಲ್ಲಿ ಸಕ್ಕರೆಯನ್ನು ಪ್ಯಾಕೇಜಿಂಗ್‌ಗೆ 2022ರ ಜುಲೈ 21ರಂದು ನಡೆದ ಸ್ಥಾಯಿ ಸಲಹಾ ಸಮಿತಿಯ ಸಭೆಯಲ್ಲಿ ವಿನಾಯಿತಿ ನೀಡಲಾಗಿದೆ.

ಸೆಣಬಿನ ಚೀಲ ತಯಾರಿಕೆಯಲ್ಲಿ ಬಳಸಲಾಗುವ ಎಣ್ಣೆಯು ಟ್ರೋಮೋಜನಿಕ್ (ಗಡ್ಡೆಜನಕ) ಎಂದು ಕೈಗಾರಿಕಾ ವಿಷಶಾಸ್ತ್ರ ಸಂಶೋಧನಾ ಕೇಂದ್ರ ಅಭಿಪ್ರಾಯಪಟ್ಟಿದೆ. ಸೆಣಬಿನ ಚೀಲಗಳಲ್ಲಿ ಪ್ಯಾಕಿಂಗ್ ಮಾಡುವುದರಿಂದ ಸಕ್ಕರೆಯ ಗುಣಮಟ್ಟ ಹಾಳಾಗುವುದಲ್ಲದೆ, ಅದು ಕಲುಷಿತಗೊಳ್ಳುತ್ತದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಹಾಯಕ ಸಾಲಿಸಿಟರ್ ಜನರಲ್ ಅರವಿಂದ ಕಾಮತ್, ಸೆಣಬಿನ ಚೀಲಗಳಲ್ಲಿ ಸಕ್ಕರೆ ಪ್ಯಾಕಿಂಗ್ ಮಾಡುವ ಸಂಬಂಧ ಸಣಬಿನ ಪ್ಯಾಕೇಜಿಂಗ್ ವಸ್ತುಗಳ (ಸರಕುಗಳಲ್ಲಿ ಕಡ್ಡಾಯ ಬಳಕೆ) ಕಾಯ್ದೆ-1987ರ ಸೆಕ್ಷನ್ 3ರ ಪ್ರಕಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸೆಣಬಿನ ಕಚ್ಚಾ ಪದಾರ್ಥಗಳ ಉತ್ಪನ್ನ ಹಾಗೂ ಸೆಣಬಿನ ಪ್ಯಾಕೇಜಿಂಗ್‌ಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. 1 ಕ್ವಿಂಟಾಲ್ ಮೇಲ್ಪಟ್ಟ ಸಗಟು ಪ್ಯಾಕೇಜಿಂಗ್ ಹಾಗೂ ರಫ್ತಿಗೆ ಈ ಮಿತಿ ಅನ್ವಯ ಆಗಲ್ಲ. ಕೇವಲ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮತ್ತು ವಿತರಣೆಗಷ್ಟೇ ಇದು ಅನ್ವಯವಾಗಲಿದೆ ಎಂದು ತಿಳಿಸಿದರು.

ಅಲ್ಲದೆ, ಸಕ್ಕರೆಯ ಒಟ್ಟು ಉತ್ಪಾದನೆಯಲ್ಲಿ ಶೇ.20ರಷ್ಟನ್ನು ಕಡ್ಡಾಯವಾಗಿ ಭಾರತದ ಸೆಣಬಿನ ಕಚ್ಚಾ ಪದಾರ್ಥಗಳಿಂದ ತಯಾರಿಸಿದ ಸೆಣಬಿನ ಚೀಲಗಳಲ್ಲಿ ಪ್ಯಾಕಿಂಗ್ ಮಾಡಬೇಕು ಎಂದು ಕೇಂದ್ರ ಜವಳಿ ಸಚಿವಾಲಯ 2023ರ ಡಿ.26 ಹಾಗೂ 2024ರ ಜೂ.28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ತಡೆ ಹಿಡಿದ ನ್ಯಾಯಾಲಯ, ವಿಚಾರಣೆಯನ್ನು ಸೆ.24ಕ್ಕೆ ಮುಂದೂಡಿತು.

Share. Facebook Twitter LinkedIn WhatsApp Email

Related Posts

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM2 Mins Read

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM2 Mins Read

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM2 Mins Read
Recent News

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಟಿ ರಶ್ಮಿಕಾ-ವಿಜಯ್

27/02/2026 2:52 PM

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM

‘ಬ್ಯಾಂಕ್ ಖಾತೆ’ಯಲ್ಲಿ ಗರಿಷ್ಠ ಎಷ್ಟು ‘ಹಣ’ ಇಡ್ಬೋದು.? ನಿಯಮಗಳೇನು ಹೇಳೋದೇನು ಗೊತ್ತಾ?

27/02/2026 2:42 PM
State News
KARNATAKA

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

By kannadanewsnow0927/02/2026 2:57 PM KARNATAKA 2 Mins Read

ತುಮಕೂರು: ಕಾಲೇಜಿಗೆ ಹೋಗಿ ಸಂಜೆ ಮನೆಗೆ ವಾಪಾಸ್‌ ಬರುವ ವೇಳೆ ವಿದ್ಯಾರ್ಥಿನಿಯನ್ನು ಎಳೆದಾಡಿ ಬಲವಂತಾಗಿ ಮುತ್ತಿಟ್ಟು ಅಸಭ್ಯವಾಗಿ ವರ್ತಿಸಿದ ಯುವಕನ…

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM

SHOCKING: ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕುವಿನಿಂದ ಇರಿದ ಪ್ರೇಯಸಿ

27/02/2026 2:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.