Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಯ್ದಿರಿಸಿದ ಪ್ರಯಾಣಿಕರು ಗೊತ್ತುಪಡಿಸಿದ ನಿಲ್ದಾಣದಲ್ಲೇ ಹತ್ತಿ, ಇಲ್ಲವಾದಲ್ಲಿ ಸೀಟು ಕಳೆದುಕೊಳ್ಳುತ್ತೀರಿ: ರೈಲ್ವೆ ಇಲಾಖೆ

15/02/2026 2:42 PM

ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ

15/02/2026 2:33 PM

ರೈಲ್ವೆ ಪ್ರಯಾಣಿಕರೇ ಎಚ್ಚರ! ನಿಗದಿತ ನಿಲ್ದಾಣದಲ್ಲೇ ರೈಲು ಹತ್ತದಿದ್ದರೆ ನಿಮ್ಮ ಸೀಟು ಬೇರೆಯವರ ಪಾಲು!

15/02/2026 2:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಬ್ದುಲ್ ರಹಿಮಾನ್ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ: ಸಚಿವ ದಿನೇಶ್ ಗುಂಡೂರಾವ್
KARNATAKA

ಅಬ್ದುಲ್ ರಹಿಮಾನ್ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ: ಸಚಿವ ದಿನೇಶ್ ಗುಂಡೂರಾವ್

By kannadanewsnow0928/05/2025 3:00 PM

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳತ್ತಮಜಲು ನಲ್ಲಿ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಅಬ್ದುಲ್ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಮಾಡಲಾಗಿದೆ ಎಂದರು.‌

ಬಿಜೆಪಿ ಶವಗಳ ಮೇಲೆ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಸಚಿವರು, ಪ್ರಚೋದನಾಕಾರಿ ಭಾಷಣಗಳನ್ನ ಮಾಡಿ ಸಮಾಜದಲ್ಲಿ ಕೋಮು ದ್ವೇಷವನ್ನ ಮೂಡಿಸಲಾಗುತ್ತಿದೆ. ಹತ್ಯೆ ಮಾಡುವ ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ. ಮಂಗಳೂರಿನಲ್ಲಿ ನಡೆದ ಹತ್ಯೆಗಳ ವಿಚಾರದಲ್ಲಿ ನಮ್ಮ ಸರ್ಕಾರ ನಿಸ್ಪಕ್ಷಪಾತವಾದ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಂಡಿದೆ. ಯಾವುದೇ ಭೇದ ಭಾವ ಮಾಡಿಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿದ್ದರೂ, ಅವರ ಹೆಡಿಮುರಿ ಕಟ್ಟಿ, ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಅಮಾಯಕ ಅಶ್ರಫ್ ಹತ್ಯೆಮಾಡಿದವರನ್ನು ಹಿಡಿದು ಬಂಧಿಸಲಾಗಿದೆ. ರೌಡಿಶಿಟರ್ ಸುಹಾಸ್ ಶೆಟ್ಟಿ ಹತ್ಯೆ ಮಾಡಿದವರನ್ನೂ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇದೀಗ ಅಬ್ದುಲ್ ಅವರ ಪ್ರಕರಣದಲ್ಲೂ ಆರೋಪಿಗಳನ್ನ ಹಿಡಿದು ತರುವಲ್ಲಿ ಪೊಲೀಸರು ಸಕ್ಷಮರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಶ್ವಾಸ ವ್ಯಕ್ತಪಡಿಸಿದರು..

ಕರಾವಳಿ ಭಾಗದಲ್ಲಿ ಈ ರೀತಿಯ ಪ್ರತಿಕಾರದ ಹತ್ಯೆಗಳನ್ನ ತಡೆಗಟ್ಟಲು ಕೋಮು ನಿಗ್ರಹ ದಳ ರಚಿಸಲಾಗುತ್ತಿದೆ. ಶೀಘ್ರದಲ್ಲಿಯೇ ಆ್ಯಂಟಿ ಕಮ್ಯುನಲ್ ಫೋರ್ಸ್ ತನ್ನ ಕಾರ್ಯ ಪ್ರಾರಂಭಿಸಲಿದೆ. ಕೋಮುವಾದದಿಂದ ಸಮಾಜಗಳಲ್ಲಿ ಮೂಡುತ್ತಿರುವ ಒಡುಕನ್ನು ಹೋಗಲಾಡಿಸಿ ಸೌಹಾರ್ದಯುತವಾದ ಸಹಬಾಳ್ವೆಯ ಶಾಂತಿಯುತ ಸಮಾಜವನ್ನ ನಿರ್ಮಾಣಕ್ಕೆ ಎಲ್ಲರು ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Share. Facebook Twitter LinkedIn WhatsApp Email

Related Posts

ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ

15/02/2026 2:33 PM1 Min Read

BIG NEWS : ಕಾಗಿಣಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದಾಗ ಲಾರಿ ಚಾಲಕ ನೀರುಪಾಲು!

15/02/2026 1:37 PM1 Min Read

ALERT : ಅಪ್ಪಿತಪ್ಪಿಯೂ ಚಹಾ/ಕಾಫಿ ಜೊತೆಗೆ `ಸಿಗರೇಟ್’ ಸೇದಬೇಡಿ

15/02/2026 1:31 PM1 Min Read
Recent News

ಕಾಯ್ದಿರಿಸಿದ ಪ್ರಯಾಣಿಕರು ಗೊತ್ತುಪಡಿಸಿದ ನಿಲ್ದಾಣದಲ್ಲೇ ಹತ್ತಿ, ಇಲ್ಲವಾದಲ್ಲಿ ಸೀಟು ಕಳೆದುಕೊಳ್ಳುತ್ತೀರಿ: ರೈಲ್ವೆ ಇಲಾಖೆ

15/02/2026 2:42 PM

ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ

15/02/2026 2:33 PM

ರೈಲ್ವೆ ಪ್ರಯಾಣಿಕರೇ ಎಚ್ಚರ! ನಿಗದಿತ ನಿಲ್ದಾಣದಲ್ಲೇ ರೈಲು ಹತ್ತದಿದ್ದರೆ ನಿಮ್ಮ ಸೀಟು ಬೇರೆಯವರ ಪಾಲು!

15/02/2026 2:09 PM

BIG NEWS : ಕಾಗಿಣಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದಾಗ ಲಾರಿ ಚಾಲಕ ನೀರುಪಾಲು!

15/02/2026 1:37 PM
State News
KARNATAKA

ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ

By kannadanewsnow0915/02/2026 2:33 PM KARNATAKA 1 Min Read

ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಂಧನಕ್ಕೆ ಒಳಗಾಗಿ ಸಿಐಟಿ ವಶದಲ್ಲಿರುವಂತ ಬಿಜೆಪಿ ಶಾಸಕ ಭೈರತಿ ಬಸವರಾಜ್ ಮನೆಗೆ ಬಿಜೆಪಿ…

BIG NEWS : ಕಾಗಿಣಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದಾಗ ಲಾರಿ ಚಾಲಕ ನೀರುಪಾಲು!

15/02/2026 1:37 PM

ALERT : ಅಪ್ಪಿತಪ್ಪಿಯೂ ಚಹಾ/ಕಾಫಿ ಜೊತೆಗೆ `ಸಿಗರೇಟ್’ ಸೇದಬೇಡಿ

15/02/2026 1:31 PM

BIG NEWS : ಬಹುಮನಿ ಕೋಟೆಯಲ್ಲಿರುವ ಶಿವಲಿಂಗ ಪೂಜೆಗೆ ಯತ್ನ : ಹಿಂದೂ ಮುಖಂಡರು ಪೊಲೀಸ್ ವಶಕ್ಕೆ

15/02/2026 1:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.