Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇರಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ ಆದರೂ, ಇವರು ಮಾತ್ರ ತಿನ್ನಲೇಬಾರದು! ಇಲ್ಲಿದೆ ಆಘಾತಕಾರಿ ಮಾಹಿತಿ

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟ್ರೈಲರ್ ಮೂಲಕ ಬೆರಗು ಮೂಡಿಸಿತು ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು!
FILM

ಟ್ರೈಲರ್ ಮೂಲಕ ಬೆರಗು ಮೂಡಿಸಿತು ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು!

By ಅವಿನಾಶ್‌ ಆರ್‌ ಭೀಮಸಂದ್ರ
The psychedelic thriller Anshu was awestruck by the trailer!

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸಾಮಾಜಿಕ ಪಲ್ಲಟಗಳಿಗೆ ಕಣ್ಣಾದ ಕಥೆ ಹೊಂದಿರುವ ಚಿತ್ರಗಳೆಂದರೆ ಕನ್ನಡದ ಪ್ರೇಕ್ಷಕರಲ್ಲಿ ಒಂದು ರೀತಿಯಲ್ಲಿ ಗಮನವನ್ನು ಕೇಂದ್ರಿಕರಿ ಇರುತ್ತಾರೆ. ಈಗ ಅಂಥಾದ್ದೊಂದು ಕಥೆ ಭಿನ್ನ ಜಾನರಿನಲ್ಲಿ, ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ರೂಪುಗೊಂಡಿದೆಯೆಂದರೆ ಅಂಥಾ ಸೆಳೆತ ಮತ್ತಷ್ಟು ತೀವ್ರವಾಗಿರುತ್ತದೆ.

ಅಂದ ಹಾಗೇ ಸದ್ಯ ಬಿಡುಗಡೆಗೊಂಡಿರುವ `ಅಂಶು’ ಚಿತ್ರದ ಟ್ರೈಲರ್ ನಲ್ಲಿಯೂ ಕೂಡ ಜನತೆಯ ಗಮನವನ್ನು ಸೆಳೇಯುವಲ್ಲಿ ಗಮನವನ್ನು ಹರಿಸಿದ್ದು. ಇದೀಗ ಬಿಡುಗಡೆಗೆ ಸಜ್ಜುಗೊಂಡಿರುವ `ಅಂಶು’ ಮಹಿಳಾ ಪ್ರಧಾನ ಕಥಾನಕವನ್ನು ಒಳಗೊಂಡಿರುವ ಚಿತ್ರವಾಗಿದೆ.ಅದರ ಒಟ್ಟಾರೆ ಸಾರದತ್ತ ಕುತೂಹಲ ಕೇಂದ್ರೀಕರಿಸುವಂತೆ ಮಾಡುವಲ್ಲಿ ಈ ಟ್ರೈಲರ್ ಎಲ್ಲರ ಗಮನ ಸೆಳೆಯುತ್ತಿದೆ.

ಈ ನಡುವೆಈ ಚಿತ್ರದಲ್ಲಿ ನಿಶಾ ರವಿಕೃಷ್ಣನ್ ನಾಯಕಿಯಾಗಿ ನಟಿಸಿದ್ದಾರೆ. ಗಟ್ಟಿಮೇಳ ಸೀರಿಯಲ್ಲಿನ ಅಮೂಲ್ಯಾ ಪಾತ್ರದ ಮೂಲಕ ಮಿಂಚಿದ್ದ ನಿಶಾ ಈ ಟ್ರೈಲರ್‌ನಲ್ಲಿ ಸೀರಿಯಲ್ ಇಮೇಜನ್ನು ಮೀರಿದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಎಂ.ಸಿ ಚನ್ನಕೇಶವ ನಿರ್ದೇಶನದ ಚೊಚ್ಚಲ ಚಿತ್ರ ಅಂಶು. `ನಾವು ನಂಬೋದೆಲ್ಲ ನಿಜ ಅಲ್ಲ, ಸಹಿಸೋಕ್ ಆಗ್ದೆ ಇರೋದೆಲ್ಲ ಸುಳ್ಳಲ್ಲ’ ಅಂತ ಶುರುವಾಗುವ ಈ ಟ್ರೈಲರ್ ನೋಡಿದ ಮಂದಿಯಲ್ಲಿ ಒಂದಷ್ಟು ಪ್ರಶ್ನೆಗಳು ಮೂಡಿಕೊಂಡಿವೆ. ಇದಲ್ಲದೇ ಹಲವು ಬೆರಗಿನ ಸಂಗತಿಗಳನ್ನು ಚಿತ್ರತಂಡ ತೆರೆದಿಟ್ಟಿದೆ. ಅದರ ಪ್ರಕಾರ ಹೇಳೋದಾದರೆ, ಇದೊಂದು ಸೈಕ್ಯಾಡೆಲಿಕ್ ಥ್ರಿಲ್ಲರ್ ಜಾನರಿನ ಚಿತ್ರ. ಈ ಸಮಾಜದಲ್ಲಿ ಇಂದಿನ ದಿನಮಾನದಲ್ಲಿ ಘಟಿಸುತ್ತಿರುವ ವಿಚಾರಗಳನ್ನಿಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ದೃಷ್ಯೀಕರಿಸಲಾಗಿದೆಯಂತೆ. ಅದರ ಆವೇಗ ಎಂಥಾದ್ದಿದೆ ಎಂಬುದಕ್ಕೆ ಸಾಕ್ಷಿ ಎಂಬಂತೆ ಈ ಟ್ರೈಲರ್ ಮೂಡಿ ಬಂದಿದೆ.

ಗ್ರಹಣ ಎಲ್ ಎಲ್ ಪಿ ಬ್ಯಾನರಿನಡಿಯಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ರತನ್ ಗಂಗಾಧರ್,ಸಂಪತ್ ಶಿವಶಂಕರ್, ಕೃತಿ ನಾಣಯ್ಯ ನಿರ್ಮಾಣ ಕಾರ್ಯದ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಭಜರಂಗಿ೨, ವೇದ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ , ಈಗ ಬಾಲಿವುಡ್ಡಿನಲ್ಲೂ ಸಕ್ರಿಯರಾಗಿರುವ ಚಲುವರಾಜ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಜೈಚಂದ್ರ, ಪ್ರಮೋದ್ ಡಾ.ಮಧುರಾಜ್, ಮತ್ತು ವೀರನ್ ಗೌಡ ಕೂಡಾ ಅಂಶು ನಿರ್ಮಾಣದಲ್ಲಿ ಸಹಭಾಗಿಗಳಾಗಿದ್ದಾರೆ. ಈ ಹಿಂದೆ ಅಂಶು ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿತ್ತು. ಲಂಡನ್ನಿನಲ್ಲಿ ಡಾಕ್ಟರ್ ಆಗಿರುವ ಮಧುರಾಜ್ ಅದನ್ನು ನೋಡಿ ಥ್ರಿಲ್ ಆಗಿ ನಿರ್ಮಾಣವನ್ನು ಸೇರಿಕೊಂಡಿದ್ದಾರೆ.

ಇನ್ನುಳಿದಂತೆ ನಿರ್ದೇಶಕ ಚನ್ನಕೇಶವ ಸೇಂಟ್ ಜೋಸೆಫ್ಸ್ ಯೂನಿವರ್ಸಿಟಿಯಲ್ಲಿ ಫಿಲಂ ಮೇಕಿಂಗ್ ಕೋರ್ಸ್ ಮುಗಿಸಿಕೊಂಡಿರುವವರು. ಅವರಿಲ್ಲಿ ಸಮಾಜಮುಖಿ ಕಥನವೊಂದಕ್ಕೆ ಕಮರ್ಶಿಯಲ್ ಧಾಟಿಯಲ್ಲಿ ದೃಷ್ಯ ರೂಪ ನೀಡಿದ್ದಾರೆ. ಇನ್ನುಳಿದಂತೆ ದೂಡಿ ಎಂಬ ತಮಿಳು ಚಿತ್ರ, ಕನ್ನಡದ ಗರುಡ ಪುರಾಣ ಮುಂತಾದ ಸಿನಿಮಾಗಳಿಗೆ ಕೆಲಸ ಮಾಡಿದ್ದ ಸುನೀಲ್ ನರಸಿಂಹಮೂರ್ತಿ ಛಾಯಾಗ್ರಾಹಕರಾಗಿ ಈ ಚಿತ್ರ ಭಾಗವಾಗಿದ್ದಾರೆ. ಜಿ.ವಿ ಪ್ರಕಾಶ್, ವಿದ್ಯಾಸಾಗರ್ ಜೊತೆ ಪ್ರೋಗ್ರಾಮರ್ ಆಗಿದ್ದ ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ನವ ಪ್ರತಿಭೆ ವಿಘ್ನೇಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಮಹೇಂದ್ರ ಗೌಡ ಸಂಭಾಷಣೆ ಮತ್ತು, ಸಾಹಿತ್ಯದ ಜವಾಬ್ದಾರಿ ನಿಭಾಯಿಸಿದ್ದಾರೆ. ಇವರು ಬರೆದಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಗೊಂಡು ಕೇಳುಗರ ಮೆಚ್ಚುಗೆ ಪಡೆದುಕೊಂಡಿವೆ. ಇನ್ನುಳಿದ ಮತ್ತೊಂದು ಹಾಡು ಇಷ್ಟರಲ್ಲಿಯೇ ಬಿಡುಗಡೆಗೊಳ್ಳಲಿದೆ. ಅದರ ಬೆನ್ನಲ್ಲಿಯೇ ಅಂಶು ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ

The psychedelic thriller Anshu was awestruck by the trailer! ಟ್ರೈಲರ್ ಮೂಲಕ ಬೆರಗು ಮೂಡಿಸಿತು ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು!
Share. Facebook Twitter LinkedIn WhatsApp Email

Related Posts

ಖಾಲಿವುಡ್ ನಟ ಅಜಿತ್ ಕುಮಾರ್ ತಾಯಿ ಮೋಹಿನಿ ಮಣಿ ವಿಧಿವಶ | Ajith Kumar Mother No More

1 Min Read

BIG UPDATE: ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯಾನ್ ಆಗಿಲ್ಲ, ಅದು ‘ನಾನ್-ಕೋಆಪರೇಷನ್’ ಮಾತ್ರ: FWICE ಸ್ಪಷ್ಟನೆ

1 Min Read

ಲವ್ ಸೀಸನ್ಸ್ ಚಿತ್ರದ ‘ಹೊಸದೊಂದು ಪ್ರೀತಿಯಾನ’ ಲಿರಿಕಲ್ ಸಾಂಗ್ ಬಿಡುಗಡೆ!

2 Mins Read
Recent News

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

ನೇರಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ ಆದರೂ, ಇವರು ಮಾತ್ರ ತಿನ್ನಲೇಬಾರದು! ಇಲ್ಲಿದೆ ಆಘಾತಕಾರಿ ಮಾಹಿತಿ

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

State News
KARNATAKA

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆ ಮತ್ತು ವಿಸ್ತರಣೆಯ ಪ್ರಕ್ರಿಯೆಯು ಯಾವಾಗಲೂ ತೀವ್ರ ಕುತೂಹಲವನ್ನು ಮೂಡಿಸುವ ಪ್ರಮುಖ…

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.