Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಸುಡುವ ಬಿಸಿಲು: ಉತ್ತರ ಕರ್ನಾಟಕದಲ್ಲಿ 41°C ದಾಟಲಿರುವ ತಾಪಮಾನ, ದಕ್ಷಿಣದಲ್ಲಿ ಮಳೆ ಮುನ್ಸೂಚನೆ!

15/04/2026 6:42 AM

ಅಂಡಮಾನ್ ಸಮುದ್ರದಲ್ಲಿ ಘೋರ ದುರಂತ: ಬೋಟ್ ಮುಳುಗಿ 250ಕ್ಕೂ ಹೆಚ್ಚು ಮಂದಿ ನಾಪತ್ತೆ: ಮಕ್ಕಳೂ ಸೇರಿ ಅನೇಕರ ಸಾವು ಶಂಕೆ

15/04/2026 6:42 AM

ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29ರಿಂದ ಶಾಲೆ ಆರಂಭ, ಒಟ್ಟು 245 ಕರ್ತವ್ಯದ ದಿನ, 119 ದಿನ ರಜೆ.!

15/04/2026 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ
KARNATAKA

ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ: ಸಿಎಂ ಸಿದ್ಧರಾಮಯ್ಯ

By kannadanewsnow0907/03/2026 3:55 PM

ಮೈಸೂರು: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಧಾನಿ ಮೋದಿಯವರ ಅವಧಿಯಲ್ಲಿ ದೇಶದ ಸಾಲ 218 ಲಕ್ಷ ಕೋಟಿ

ಬಿಜೆಪಿಯವರು ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯ ಪ್ರಧಾನಿ ಮೋದಿಯವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನದಂಡಗಳ ಮಿತಿಯಲ್ಲಿ ಸಾಲದ ಪ್ರಮಾಣ ಇದೆ. ಈ ಕಾಯ್ದೆಯಂತೆ ಸಾಲವು ಶೇ. 25 ರಷ್ಟಿರಬೇಕಿದ್ದು, ನಮ್ಮ ಸಾಲದ ಪ್ರಮಾಣ 24.94 ಇದ್ದು, ಮಿತಿಯೊಳಗೇ ಇದೆ. ಕೇಂದ್ರದ ಸಾಲದ ಪ್ರಮಾಣ 218 ಲಕ್ಷ ಕೋಟಿ ವಿದೆ. ಮೋದಿಯವರು ಅಧಿಕಾರಕ್ಕೆ ಬಂದ ನಂತರ 165 ಲಕ್ಷ ಕೋಟಿ ಸಾಲವನ್ನು ಮಾಡಿದ್ದಾರೆ. ಇದು ಸದರಿ ಕಾಯ್ದೆಯ ಪ್ರಕಾರ 55.6 % ರಷ್ಟು ಇದೆ. ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು , ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಸೂಚಿಸಿರುವ ಮಾನದಂಡದ ಮಿತಿಯೊಳಗೆ ಸಾಲ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿದೆ

ಬಿಜೆಪಿಯ ಅಶೋಕ್ ರವರು ಈ ಬಾರಿಯ ಬಜೆಟ್ ಒಂದು ವರ್ಗಕ್ಕೆ ಸೀಮಿತಗೊಳಿಸಿರುವ ಬಜೆಟ್ ಆಗಿದೆ ಎಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಈ ಬಾರಿಯ ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿ ಮಾಡಲಾಗಿದ್ದು ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಲಾಗುತ್ತದೆ, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವ ಉದ್ದೇಶವನ್ನು ಹೊಂದಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟ

ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾಗಿದ್ದ ಅನುದಾನವನ್ನು ನೀಡದಿರುವುದರಿಂದ ರಾಜ್ಯದ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರದ ಜಿಎಸ್ ಟಿ ದರಪರಿಷ್ಕರಣೆಯಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟವಾಗಿದೆ ಎಂದರು.

ಅವಕಾಶ ದೊರೆತರೆ ಮುಂದೆಯೂ ಬಜೆಟ್ ಮಂಡಿಸುತ್ತೇನೆ

ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ದಾಖಲೆ ಮುರಿಯುವುದು ಸಾಧನೆಯಲ್ಲ. ಆದರೆ ಜನರು ಆಶೀರ್ವದಿಸಿ, ಅವಕಾಶ ನೀಡಿದರೆ, ಖಂಡಿತ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದರು.

ಮಧ್ಯಪ್ರಾಚ್ಯದ ದೇಶಗಳಲ್ಲಿ ಸಿಲುಕಿದ್ದ 52,000 ಭಾರತೀಯರು ಸ್ವದೇಶಕ್ಕೆ ವಾಪಾಸ್

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಸುಡುವ ಬಿಸಿಲು: ಉತ್ತರ ಕರ್ನಾಟಕದಲ್ಲಿ 41°C ದಾಟಲಿರುವ ತಾಪಮಾನ, ದಕ್ಷಿಣದಲ್ಲಿ ಮಳೆ ಮುನ್ಸೂಚನೆ!

15/04/2026 6:42 AM2 Mins Read

ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29ರಿಂದ ಶಾಲೆ ಆರಂಭ, ಒಟ್ಟು 245 ಕರ್ತವ್ಯದ ದಿನ, 119 ದಿನ ರಜೆ.!

15/04/2026 6:40 AM2 Mins Read

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

15/04/2026 6:35 AM1 Min Read
Recent News

ರಾಜ್ಯಾದ್ಯಂತ ಸುಡುವ ಬಿಸಿಲು: ಉತ್ತರ ಕರ್ನಾಟಕದಲ್ಲಿ 41°C ದಾಟಲಿರುವ ತಾಪಮಾನ, ದಕ್ಷಿಣದಲ್ಲಿ ಮಳೆ ಮುನ್ಸೂಚನೆ!

15/04/2026 6:42 AM

ಅಂಡಮಾನ್ ಸಮುದ್ರದಲ್ಲಿ ಘೋರ ದುರಂತ: ಬೋಟ್ ಮುಳುಗಿ 250ಕ್ಕೂ ಹೆಚ್ಚು ಮಂದಿ ನಾಪತ್ತೆ: ಮಕ್ಕಳೂ ಸೇರಿ ಅನೇಕರ ಸಾವು ಶಂಕೆ

15/04/2026 6:42 AM

ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29ರಿಂದ ಶಾಲೆ ಆರಂಭ, ಒಟ್ಟು 245 ಕರ್ತವ್ಯದ ದಿನ, 119 ದಿನ ರಜೆ.!

15/04/2026 6:40 AM

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

15/04/2026 6:35 AM
State News
KARNATAKA

ರಾಜ್ಯಾದ್ಯಂತ ಸುಡುವ ಬಿಸಿಲು: ಉತ್ತರ ಕರ್ನಾಟಕದಲ್ಲಿ 41°C ದಾಟಲಿರುವ ತಾಪಮಾನ, ದಕ್ಷಿಣದಲ್ಲಿ ಮಳೆ ಮುನ್ಸೂಚನೆ!

By kannadanewsnow5715/04/2026 6:42 AM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಸಹ ಬಹುತೇಕ ಜಿಲ್ಲೆಗಳಲ್ಲಿ ಸೂರ್ಯನ ಶಾಖ ಜನರನ್ನು ಹೈರಾಣಾಗಿಸಲಿದೆ…

ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29ರಿಂದ ಶಾಲೆ ಆರಂಭ, ಒಟ್ಟು 245 ಕರ್ತವ್ಯದ ದಿನ, 119 ದಿನ ರಜೆ.!

15/04/2026 6:40 AM

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

15/04/2026 6:35 AM

BIG NEWS : ರಾಜ್ಯದ ಜೈಲುಗಳ ಭದ್ರತೆಗೆ 550 ಮಾಜಿ ಸೈನಿಕರ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

15/04/2026 6:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.