Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಖಾಸಗಿ ಅಂಗದಲ್ಲಿ `ನೀರಿನ ಬಾಟಲ್’ ಸೇರಿಸಿಕೊಂಡ ವ್ಯಕ್ತಿ : `ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !

16/03/2026 8:31 AM

ದಿನಕ್ಕೆ ಎಷ್ಟು ಬಾರಿ ಮಲವಿಸರ್ಜನೆ ಮಾಡುವುದು ಆರೋಗ್ಯಕರ? ಇಲ್ಲಿದೆ ತಜ್ಞರ ಮಾಹಿತಿ!

16/03/2026 8:30 AM

ಭಯೋತ್ಪಾದನಾ ದಾಳಿಯಿಂದ ಪಾರಾದ ಭಾರತದ ‘ಜಗ್ ಲಾಡ್ಕಿ’ ತೈಲ ನೌಕೆ ಈಗ ಸುರಕ್ಷಿತ; ತಾಯ್ನಾಡಿನತ್ತ ಪಯಣ!

16/03/2026 8:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RSS ಸಂಘದ ನಿಷೇದ ಕನಸಿನ ಮಾತು, ಹೀಗೆ ಕರೆ ಕೊಟ್ಟಿರೋದು ಬೌದ್ಧಿಕ ದಾರಿದ್ರ್ಯತನ: ಶಾಸಕ ಯತ್ನಾಳ್
KARNATAKA

RSS ಸಂಘದ ನಿಷೇದ ಕನಸಿನ ಮಾತು, ಹೀಗೆ ಕರೆ ಕೊಟ್ಟಿರೋದು ಬೌದ್ಧಿಕ ದಾರಿದ್ರ್ಯತನ: ಶಾಸಕ ಯತ್ನಾಳ್

By kannadanewsnow0912/10/2025 3:52 PM
Basangouda Patil Yatnal

ಬೆಂಗಳೂರು: ಕರ್ನಾಟಕದಲ್ಲಿ ಆರ್ ಎಸ್ ಎಸ್ ಸಂಘದ ನಿಷೇಧ ಕನಸಿನ ಮಾತು. ಹೀಗೆ ಕರೆ ಕೊಟ್ಟಿರೋದು ಬೌದ್ಧಿಕ ದಾರಿದ್ರ್ಯ ತನವನ್ನು ತೋರಿಸುತ್ತದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸರ್ಕಾರಿ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು, ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್. ನ ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ ಎಂದಿದ್ದಾರೆ.

ಪ್ರಕೃತಿ ವಿಕೋಪ, ರೈಲು ದುರಂತ, ಕೋವಿಡ್, ಅಪಘಾತಗಳು, ಭೂಕಂಪ, ನೆರೆಯಾದಾಗ ನೊಂದವರಿಗೆ ಮೊದಲು ಆಸರೆಯಾಗುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು. ಸೇವಾತತ್ಪರತೆ, ಸಮಾಜ ಸೇವೆ, ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಿ, ಶಿಸ್ತಿಗೆ ಮತ್ತೊಂದು ಹೆಸರೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲು ರಾತ್ರಿ ಎನ್ನದೇ ನಿಸ್ವಾರ್ಥ ಸೇವೆ ನೀಡುವ ಪ್ರಪಂಚದ ಏಕೈಕ ಸಂಘಟನೆಯಾಗಿದೆ. ಮನ ಮನೆಗಳನ್ನು ಬೆಸೆದುಕೊಳ್ಳುತ್ತಿರುವ ಸಂಘ ಚಿಂತನೆ ವ್ಯಾಪಿಸಿದ ಮತ್ತು ವ್ಯಾಪಿಸುತ್ತಿರುವ ರೀತಿ ಅನನ್ಯ ಎಂದು ಹೇಳಿದ್ದಾರೆ.

ಸಂಘವನ್ನು ನಿಷೇದ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ. ವಿರೋಧಿಗಳು ಪ್ರೀತಿಸುವ, ಗೌರವಿಸುವ ಜಗತ್ತಿನ ಏಕೈಕ ಸಂಘಟನೆಯೇ ಆರ್.ಎಸ್.ಎಸ್. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟು ಸ್ವಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಶ್ರೀ ಪ್ರಿಯಾಂಕ್ ಖರ್ಗೆ ಅವರು ಶ್ರಮಿಸಲಿ. ಅಷ್ಟಕ್ಕೂ, ನಿಷೇಧಗೊಳಿಸಬೇಕಾಗಿದ್ದರೆ ಕೂಡಲೇ ಎಸ್.ಡಿ.ಪಿ.ಐ ನಂತ ದೇಶ ವಿರೋಧಿ ಸಂಘಟನೆಗಳನ್ನು ನಿಷೇದ ಮಾಡಲಿ. ಅನ್ಯ ಕೋಮಿನ ಹಬ್ಬಗಳಂದು ತಲ್ವಾರ್ ತೋರಿಸಿ ಬೀದಿಗಳಲ್ಲಿ ಹೆಲ್ಮೆಟ್ ಧರಿಸದೇ ಓಡಾಡುವ ಪುಂಡರ ಹೆಡೆಮುರಿಕಟ್ಟಲಿ ಎಂದು ಆಗ್ರಹಿಸಿದ್ದಾರೆ.

ಬಕ್ರೀದ್ ಸೇರಿದಂತೆ ಇತರ ಹಬ್ಬಗಳಲ್ಲಿ ಆಗುವ ಪ್ರಾಣಿಬಲಿಯನ್ನು ನಿಷೇಧಿಸಲಿ. ಆಂಗ್ಲ, ವಿಜ್ಞಾನ, ಗಣಿತ, ಸಮಾಜ ಹೇಳಿಕೊಡದೆ ದ್ವೇಷ, ಬೇರೆ ಧರ್ಮಗಳ ಬಗ್ಗೆ ತಪ್ಪು ವಿಚಾರಗಳನ್ನು ಕಲಿಸುವ ಮದರಸಗಳನ್ನು ನಿಷೇದ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ಬಂದು ಏಳು ದಶಕಗಳಾದರೂ ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಕರೆಸಿಕೊಳ್ಳುವ ಹಾಗೂ ಅವರೇ ಪ್ರತಿನಿಧಿಸುವ ಕಲ್ಬುರ್ಗಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲಿ. ಸಂಘದ ನಿಷೇದ ಕನಸಿನ ಮಾತು ಎಂಬುದಾಗಿ ತಿಳಿಸಿದ್ದಾರೆ.

BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion

Watch Video: ನೀವು ‘ಹೊರ ರಾಜ್ಯ’ಗಳಿಗೆ ‘ಪ್ರವಾಸ’ಕ್ಕೆ ಹೋಗ್ತಾ ಇದ್ದೀರಾ? ಹಾಗಿದ್ರೇ ಈ ಸುದ್ದಿ ತಪ್ಪದೇ ಓದಿ

Share. Facebook Twitter LinkedIn WhatsApp Email

Related Posts

ದಿನಕ್ಕೆ ಎಷ್ಟು ಬಾರಿ ಮಲವಿಸರ್ಜನೆ ಮಾಡುವುದು ಆರೋಗ್ಯಕರ? ಇಲ್ಲಿದೆ ತಜ್ಞರ ಮಾಹಿತಿ!

16/03/2026 8:30 AM2 Mins Read

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

16/03/2026 8:20 AM1 Min Read

ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

16/03/2026 8:19 AM1 Min Read
Recent News

SHOCKING : ಖಾಸಗಿ ಅಂಗದಲ್ಲಿ `ನೀರಿನ ಬಾಟಲ್’ ಸೇರಿಸಿಕೊಂಡ ವ್ಯಕ್ತಿ : `ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !

16/03/2026 8:31 AM

ದಿನಕ್ಕೆ ಎಷ್ಟು ಬಾರಿ ಮಲವಿಸರ್ಜನೆ ಮಾಡುವುದು ಆರೋಗ್ಯಕರ? ಇಲ್ಲಿದೆ ತಜ್ಞರ ಮಾಹಿತಿ!

16/03/2026 8:30 AM

ಭಯೋತ್ಪಾದನಾ ದಾಳಿಯಿಂದ ಪಾರಾದ ಭಾರತದ ‘ಜಗ್ ಲಾಡ್ಕಿ’ ತೈಲ ನೌಕೆ ಈಗ ಸುರಕ್ಷಿತ; ತಾಯ್ನಾಡಿನತ್ತ ಪಯಣ!

16/03/2026 8:27 AM

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

16/03/2026 8:20 AM
State News
KARNATAKA

ದಿನಕ್ಕೆ ಎಷ್ಟು ಬಾರಿ ಮಲವಿಸರ್ಜನೆ ಮಾಡುವುದು ಆರೋಗ್ಯಕರ? ಇಲ್ಲಿದೆ ತಜ್ಞರ ಮಾಹಿತಿ!

By kannadanewsnow5716/03/2026 8:30 AM KARNATAKA 2 Mins Read

ಮಲವಿಸರ್ಜನೆಯ ಬಗ್ಗೆ ಬಹಿರಂಗವಾಗಿ ಮಾತನಾಡಲು ಅನೇಕರು ಸಂಕೋಚಪಡುತ್ತಾರೆ. ಆದರೆ, ನಮ್ಮ ಒಟ್ಟಾರೆ ಆರೋಗ್ಯ ಹೇಗಿದೆ ಎಂದು ತಿಳಿಸುವ ಪ್ರಮುಖ ಸೂಚಕಗಳಲ್ಲಿ…

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

16/03/2026 8:20 AM

ALERT : `LPG’ ಗ್ರಾಹಕರಿಗೆ ಮಹತ್ವದ ಸೂಚನೆ : `ಆಧಾರ್‌ ಇ ಕೆವೈಸಿ’ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !

16/03/2026 8:19 AM

ALERT : ಅಪ್ಪಿತಪ್ಪಿಯೂ ಈ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಇಡಬೇಡಿ : ಇವು ಆರೋಗ್ಯಕ್ಕೆ ವಿಷ !

16/03/2026 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.