Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING: ರಾಡಾರ್ ಸಂಪರ್ಕ ಕಳೆದುಕೊಂಡು ಚಾರ್ಟರ್ಡ್ ವಿಮಾನ ನಾಪತ್ತೆ!

23/02/2026 10:51 PM

BREAKING : ‘ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಆಟವಾಡಲು ಬಯಸುವ ಯಾವುದೇ ದೇಶ…’: ಹೆಚ್ಚಿನ ಸುಂಕದ ಬಗ್ಗೆ ಟ್ರಂಪ್ ಎಚ್ಚರಿಕೆ

23/02/2026 9:50 PM

ಆರೋಗ್ಯಕರ ಲೈಂಗಿಕ ಜೀವನಕ್ಕೆ ಮಾತ್ರೆಗಳ ಅಗತ್ಯವಿಲ್ಲ: ಇಲ್ಲಿದೆ ನೈಸರ್ಗಿಕ ದಾರಿಗಳ ಬಗ್ಗೆ ಕಂಪ್ಲೀಟ್ ಗೈಡ್

23/02/2026 9:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ
KARNATAKA

ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ

By kannadanewsnow0923/12/2025 6:08 PM

ಬೆಂಗಳೂರು: ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಡಿಸೆಂಬರ್ 25 ರಿಂದ 28, 2025 ರ ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. 

ಈ ಸಂಬಂಧ ಪತ್ರಿಕಾಗೋಷ್ಠಿಯು ಬೆಂಗಳೂರಿನ ರಾಜಾಜಿನಗರದ ಪ್ರಶಾಂತಿ ಆಯುರ್ವೇದಿಕ್ ಸೆಂಟರ್’ನಲ್ಲಿ ಇಂದು(23-12-2025) ನಡೆಯಿತು. ಈ ಸಮ್ಮೇಳನದ ರೂವಾರಿಗಳಾದ ಡಾ.ಗಿರಿಧರ ಕಜೆ ಸುದ್ದಿ ಗೋಷ್ಠಿಯನ್ನು ನಡೆಸಿ, ಐತಿಹಾಸಿಕ ವಿಶ್ವ ಸಮ್ಮೇಳನದ ಕುರಿತಾಗಿ ಮಾಹಿತಿ ನೀಡಿದರು. ಹಿಮಾಲಯ ವೆಲ್’ನೆಸ್ ಕಂಪನಿಯ ಡಾ. ಅಶೋಕ್, ದೂತಪಾಪೇಶ್ವರ ಕಂಪೆನಿಯ ಅಜಿತ್ ಹಾಗೂ ಅಭಿಷೇಕ್ ಉಪಸ್ಥಿತರಿದ್ದರು.

ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ 28, 2025 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಆಯೋಜಿಸಿದ್ದು, ಆಯುರ್ವೇದದ ವೈಶಿಷ್ಟ್ಯಗಳ ಅನಾವರಣ ಬೃಹತ್ ರೂಪದಲ್ಲಿ ನೆರವೇರಲಿದೆ. ನಾಡಿನ ಸಂತ ಮಹಂತರು – ಗಣ್ಯ ಮಾನ್ಯರು – ದೇಶ ವಿದೇಶಗಳ ಆಯುರ್ವೇದ ತಜ್ಞರ ಉಪಸ್ಥಿತಿಯಲ್ಲಿ ವಿಶಿಷ್ಟ ಆಯುರ್ವೇದ ಉತ್ಸವ ನಡೆಯಲಿದೆ.

ಶ್ರೀ ಧನ್ವಂತರಿ ಪೂಜೆ, ಸಮ್ಮೇಳನ ಆಶೀರ್ವಚನ, ಶ್ರೀ ಧನ್ವಂತರಿ ಮಹಾಯಜ್ಞ, ವೈಜ್ಞಾನಿಕ ವಿಚಾರ ಸಂಕಿರಣಗಳು, ಧನ್ವಂತರಿ ರಥೋತ್ಸವ, ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ವಸ್ತು ಪ್ರದರ್ಶನ, ಆಯುರ್ವೇದ ಆಹಾರ ಪ್ರದರ್ಶನಿ, ಆಯುರ್ವೇದ ಪಾಕೋತ್ಸವ, ಮೆಗಾ ಆಯುರ್ವೇದ ಎಕ್ಸ್‌ಪೋ, ಜನಪ್ರಿಯ ವೈದ್ಯರ ವಿಚಾರ ಧಾರೆ, ಆಯುರ್ವೇದ ಲೇಸರ್ ಶೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಸಾಂಸ್ಕೃತಿಕ ಉತ್ಸವಗಳು, ವಿಶ್ವದ ನಾನಾ ಭಾಗಗಳ 6000+ ಪ್ರತಿನಿಧಿಗಳು, 400 ಸಾಧಕರಿಗೆ ಸನ್ಮಾನ, ಯಕ್ಷಗಾನ ಯಾನ, ಸ್ವದೇಶಿ ಮೇಳ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಈ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನದಲ್ಲಿ ಇರಲಿದ್ದು, 4 ದಿನದ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಧನ್ವಂತರಿ ಮಹಾಯಜ್ಞ – ಪೂಜೆ – ರಥೋತ್ಸವ

ಆಯುರ್ವೇದದ ಬೃಹತ್ ಉತ್ಸವದಲ್ಲಿ ಧನ್ವಂತರಿಯ ಮಹಾರಾಧನೆ ನಡೆಯಲಿದ್ದು, ಶ್ರೀಧನ್ವಂತರಿ ಮಹಾಯಜ್ಞ – ಧನ್ವಂತರಿ ಪೂಜೆಗಳು ನೆರವೇರಲಿದೆ. ಪಾರಂಪರಿಕ ರಥದಲ್ಲಿ ಧನ್ವಂತರಿಯ ರಥೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಲಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಪಾರಂಪರಿಕ ರಥೋತ್ಸವ ಅಪರೂಪವಾಗಿದ್ದು, ಆಯುರ್ವೇದ ಸಮ್ಮೇಳನದ ಕಳೆಯನ್ನು ಹೆಚ್ಚಿಸುವುದರ ಜೊತೆಗೆ ದೇವತಾನುಗ್ರವನ್ನೂ ಕರುಣಿಸಲಿದೆ.

ಆಯುರ್ವೇದ ಅನುಭವ ಕೇಂದ್ರಗಳು

ಆಯುರ್ವೇದದ ಇತಿಹಾಸದಲ್ಲಿಯೇ ಪ್ರಥಮಬಾರಿಗೆ ವೈಶಿಷ್ಟ್ಯಪೂರ್ಣವಾದ 10 ಆಯುರ್ವೇದ ಅನುಭವ ಕೇಂದ್ರಗಳನ್ನು ಈ ಸಮ್ಮೇಳನದಲ್ಲಿ ಸ್ಥಾಪಿಸಲಾಗುತ್ತಿದ್ದು, ಪ್ರಾತ್ಯಕ್ಷಿಕೆ ರೂಪದಲ್ಲಿ ಪಾರಂಪರಿಕ ಆಯುರ್ವೇದ ಚಿಕಿತ್ಸಾ ವಿಧಾನ, ಸಂವಾದಾತ್ಮಕ ರೀತಿಯಲ್ಲಿ ಆಯುರ್ವೇದದ ಚಿಕಿತ್ಸಾ ಪದ್ಧತಿಯ ಪರಿಚಯವನ್ನು ಈ ಅನುಭವ ಕೇಂದ್ರಗಳು ಮಾಡಲಿದ್ದು, ಆಯುರ್ವೇದ ಜೀವನ ಪದ್ಧತಿಯ ಪ್ರತ್ಯಕ್ಷ ಅನುಭವವನ್ನು ಇದು ಕಟ್ಟುಕೊಡಲಿದೆ.

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

Share. Facebook Twitter LinkedIn WhatsApp Email

Related Posts

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM2 Mins Read

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM2 Mins Read

ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

23/02/2026 9:29 PM1 Min Read
Recent News
BREAKING NEWS

BREAKING: ರಾಡಾರ್ ಸಂಪರ್ಕ ಕಳೆದುಕೊಂಡು ಚಾರ್ಟರ್ಡ್ ವಿಮಾನ ನಾಪತ್ತೆ!

23/02/2026 10:51 PM

BREAKING : ‘ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಆಟವಾಡಲು ಬಯಸುವ ಯಾವುದೇ ದೇಶ…’: ಹೆಚ್ಚಿನ ಸುಂಕದ ಬಗ್ಗೆ ಟ್ರಂಪ್ ಎಚ್ಚರಿಕೆ

23/02/2026 9:50 PM

ಆರೋಗ್ಯಕರ ಲೈಂಗಿಕ ಜೀವನಕ್ಕೆ ಮಾತ್ರೆಗಳ ಅಗತ್ಯವಿಲ್ಲ: ಇಲ್ಲಿದೆ ನೈಸರ್ಗಿಕ ದಾರಿಗಳ ಬಗ್ಗೆ ಕಂಪ್ಲೀಟ್ ಗೈಡ್

23/02/2026 9:43 PM

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

23/02/2026 9:38 PM
State News
KARNATAKA

‘ಮನರೇಗಾ’ ಹೆಸರು ಬದಲಿಸಿದ್ದು ‘ಮೋದಿ ಸರ್ಕಾರ’ದಿಂದ ಮನೆ ಹಾಳು ನಿರ್ಧಾರ: ಸಚಿವ ಬೈರತಿ ಸುರೇಶ್ ಆಕ್ರೋಶ

By kannadanewsnow0923/02/2026 9:38 PM KARNATAKA 2 Mins Read

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ಬದಲಾಯಿಸಿ ವಿಬಿಜಿ ರಾಮ್ ಜಿ ಎಂದು ನಾಮಕರಣ…

ಬೆಂಗಳೂರಲ್ಲಿ 688 ಕೋಟಿ ರೂಪಾಯಿ ಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡಿದ GBA

23/02/2026 9:32 PM

ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

23/02/2026 9:29 PM

ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ದೃಢ ಸಂಕಲ್ಪ ಮಾಡಿ: SC, ST ಮೇಲ್ವಿಚಾರಕಿ ಮತ್ತು ಬಲವರ್ಧನೆ ಸಮಿತಿ ಸಂಚಾಲಕಿ ಪಿ.ಯಶೋಧ

23/02/2026 9:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.