ಬೆಂಗಳೂರು : ರಾಜ್ಯದ ವಿವಿಧ ನಿಗಮ/ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು/ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರು/ ಸದಸ್ಯರುಗಳನ್ನು ನೇಮಿಸಬೇಕಾಗಿರುತ್ತದೆ. ಇದೀಗ ನಿರ್ದೇಶಕರು, ಸದಸ್ಯರ ನೇಮಕಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ವಿವಿಧ ನಿಗಮ/ಮಂಡಳಿಗಳ ನಿರ್ದೇಶಕರು/ ಸದಸ್ಯರುಗಳನ್ನು ಆಯ್ಕೆ ಮಾಡಲು ಈ ಕೆಳಕಂಡ ಮಾನ್ಯ ಸಚಿವರು ಹಾಗೂ ವಿಧಾನಸಭಾ ಸದಸ್ಯರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಾಜ್ಯದ ವಿವಿಧ ನಿಗಮ/ಮಂಡಳಿಗಳಿಗೆ ನಿರ್ದೇಶಕರು/ ಸದಸ್ಯರುಗಳನ್ನು ನೇಮಿಸಲು ಸಮಿತ ರಚಿಸಲಾಗಿದ್ದು, ಈ ಸಮಿತಿಯಲ್ಲಿ ಸಚಿವ ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅರ್ಷದ್ ಸದಸ್ಯರಾಗಿದ್ದಾರೆ.