Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಖಾಲಿ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್
KARNATAKA

Good News: ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಖಾಲಿ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್

By kannadanewsnow0916/01/2025 5:10 AM

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ ಎಂದಿದ್ದಾರೆ.

ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿವಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಸರ್ಕಾರದ ಆದೇಶ ದಿನಾಂಕ:07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಟಿಪ್ಪಣಿ ದಿನಾಂಕ:24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ.
ತಂತ್ರಾಂಶವು ಕೆಳಕಂಡ ಆರು ಹಂತಗಳನ್ನು ಒಳಗೊಂಡಿದೆ ಎಂದಿದ್ದಾರೆ.

1. ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವುದು.
2. ಆಡಳಿತ ಮಂಡಳಿಯಿಂದ ಖಾಲಿ ಹುದ್ದೆ ಭರ್ತಿಗೆ ಅನುಮತಿ ಕೋರಿ ಸಂಬಂಧಿಸಿದ ಆಯುಕ್ತಾಲಯಗಳಿಗೆ ಪ್ರಸ್ತಾವನ ಸಲ್ಲಿಕೆ.
3. ಆಯಾ ಆಯುಕ್ತಾಲಯಗಳಲ್ಲಿ ಸಮಿತಿಗಳನ್ನು ರಚಿಸಿ ಪುಸ್ತಾವನೆಗಳನ್ನು ಪರಿಶೀಲಿಸಿ ಶಿಫಾರಸು ಮಾಡುವುದು. ಶಿಫಾರಸ್ಸು ಆಧರಿಸಿ ಖಾಲಿ ಹುದ್ದೆ ಭರ್ತಿಗೆ ಅನುಮತಿ ನೀಡುವುದು.
4. ಆಡಳಿತ ಮಂಡಳಿಗಳು ಅನುಮತಿಸಿದ ಹುದ್ದೆಗಳಿಗೆ ನಿಯಮಾನುಸಾರ ನೇಮಕಾತಿ ಪ್ರಕ್ರಿಯೆ ಕೈಗೊಂಡು ಸಂಬಂಧಿಸಿದ ಉಪನಿರ್ದೇಶಕರಿಗೆ ನೇಮಕಾತಿ ಅನುಮೋದನೆಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನೆ ಸಲ್ಲಿಕೆ

5. ಉಪನಿರ್ದೇಶಕರಿಂದ ಪರಿಶೀಲಿಸಿ ಸಂಬಂಧಿಸಿದ ಆಯುಕ್ತಾಲಯಗಳಿಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನಗಳ ಸಲ್ಲಿಕೆ
6. ಸಂಬಂದಿಸಿದ ಆಯುಕ್ತಾಲಯಗಳಿಂದ ಸರ್ಕಾರಕ್ಕೆ ಆನ್‌ಲೈನ್‌ನಲ್ಲಿ ಅನುಮೋದನೆಗೆ ಸಲ್ಲಿಕೆ

ಪ್ರಸ್ತುತ ಮೇಲೆ ತಿಳಿಸಿರುವ ಆರು ಹಂತಗಳಲ್ಲಿ ಮೊದಲ ಎರಡು ಹಂತಗಳ ತಂತ್ರಾಂಶ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು ಉಳಿದ ಹಂತಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ಸರ್ಕಾರದ ಸುತ್ತೋಲೆ ಸಂಖ್ಯೆ ಸಿ.ಅ.ಸು.ಇ 388 ಸನನಿ.2024 ದಿನಾಂಕ:25-11-2024 ರಂದು ಎಲ್ಲಾ ನೇಮಕಾತಿ ಪ್ರಕ್ರಿಯೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸದಿರಲು ಆದೇಶಿಸಲಾಗಿದೆ. ಸದರಿ ಆದೇಶದಂತ ಮೊದಲ ಹಂತದ ತಂತ್ರಾಂಶ (BEO Login) ನ್ನು ಚಾಲ್ತಿಗೊಳಿಸುವುದನ್ನು ತಡೆಹಿಡಿದು, ಈ ಕುರಿತು ಸರ್ಕಾರಕ್ಕೆ, ಮಾರ್ಗದರ್ಶನ ಕೋರಲಾಗಿದೆ ಎಂದು ಹೇಳಿದ್ದಾರೆ.

ಆದರೇ ವಿವಿಧ ಶಾಲಾ ಆಡಳಿತ ಮಂಡಳಿಗಳಿಂದ ಹಾಗೂ ಜನ ಪ್ರತಿನಿಧಿಗಳಿಂದ ಸರ್ಕಾರವು ಆದೇಶ ಸಂಖ್ಯೆ: ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024ರಲ್ಲಿ ಆದೇಶ ಮಾಡಿದ್ದರೂ ಸದರಿ ಪ್ರಕ್ರಿಯೆಯನ್ನು ಪ್ರಾರಂಭಿಸಿಲ್ಲ ಎಂದು ತಿಳಿಸುತ್ತಾ ಪ್ರಕ್ರಿಯೆ ಪ್ರಾರಂಭಿಸಲು ಕೋರಿ ಮನವಿಗಳು ಸ್ವೀಕೃತವಾಗುತ್ತಲಿವೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಂತ್ರಾಂಶದ ಮೊದಲ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವ ಪ್ರಕ್ರಿಯೆ ಒಳಗೊಂಡಿದ್ದು ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗಧಿಪಡಿಸುವ ಪ್ರಕ್ರಿಯೆ ಇರುವುದಿಲ್ಲ. ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿ ಉಲ್ಲೇಖ-3ರಲ್ಲಿ ಮಾನ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆರವರನ್ನು ಕೋರಲಾಗಿದೆ. ಈ ಹಂತದಲ್ಲಿ ಯಾವುದೇ ರೋಸ್ಮರ್‌ ಬಿಂದು ನಿಗಧಿಪಡಿಸುವ ಪ್ರಕ್ರಿಯೆ ಇರುವುದಿಲ್ಲ. ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿದ್ದಾರೆ ಎಂದು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM2 Mins Read

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM3 Mins Read

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM2 Mins Read
Recent News

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM

BREAKING: ಪಠ್ಯಪುಸ್ತಕಗಳಿಲ್ಲದಿದ್ದರೂ 7 ದಿನಗಳಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತರಲು ಸಿಬಿಎಸ್‌ಇ ಶಾಲೆಗಳಿಗೆ ಆದೇಶ

09/04/2026 9:01 PM
State News
KARNATAKA

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

By kannadanewsnow0909/04/2026 9:44 PM KARNATAKA 2 Mins Read

ಬೆಂಗಳೂರು: ಈ ತಿಂಗಳ 11ರಂದು ನಗರದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಗ್ರೇಟರ್ ಬೆಂಗಳೂರು ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು…

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.