Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಏರ್ ಇಂಡಿಯಾ ವಿಮಾನ ದುರಂತ: ವಿಶ್ವಸಂಸ್ಥೆ ತನಿಖಾಧಿಕಾರಿಗೆ ಪ್ರವೇಶ ನಿರಾಕರಿಸಿದ ಭಾರತ

27/06/2025 9:45 AM

Shocking: ಪಾಕ್ ನಲ್ಲಿ ಮೂವರು ಹಿಂದೂ ಸಹೋದರಿಯರನ್ನು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿದ ಶಿಕ್ಷಕರು

27/06/2025 9:36 AM

Shocking: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಜ್ಜಿಯನ್ನು ಕಸದ ರಾಶಿಯಲ್ಲಿ ಬಿಟ್ಟ ಮೊಮ್ಮಗನ ಬಂಧನ

27/06/2025 9:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ವಿರುದ್ದ ಶಿಸ್ತುಕ್ರಮದ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!
KARNATAKA

ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ವಿರುದ್ದ ಶಿಸ್ತುಕ್ರಮದ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

By kannadanewsnow0705/03/2024 1:28 PM
vidhana soudha
vidhana soudha

ಬೆಂಗಳೂರು: ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ಪ್ರಕರಣಗಳಲ್ಲಿ ಶಿಸ್ತು ಕ್ರಮದ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವ ಮಾಹಿತಿಗಳು ಈ ಕೆಳಕಂಡತಿದೆ.

ಸರ್ಕಾರದ ಅಧಿಕೃತ ಜ್ಞಾಪನ : ಸಿಆಸುಇ 25ಸೇಇವಿ 2001 ದಿನಾಂಕ: 01/08/2001 ವಿಷಯದನ್ವಯ, ಅನಧಿಕೃತವಾಗಿ ಗೈರು ಹಾಜರಾಗಿರುವ ಸರ್ಕಾರಿ ನೌಕರರ ಮೇಲೆ ಇಲಾಖಾ ವಿಚಾರಣೆಯನ್ನು ನಡೆಸಿ ಅಂತಹವರನ್ನು ಕೆಲಸದಿಂದ ತೆಗೆದುಹಾಕುವ ಅಥವಾ ವಜಾಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳುವ ವಿಷಯದಲ್ಲಿ ಅನುಸರಿಸಬೇಕಾದ ಕ್ರಮವನ್ನು ಉಲ್ಲೇಖ-1 ರ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿರುತ್ತದೆ.

BREAKING: ರಾಜ್ಯ ಸರ್ಕಾರಕ್ಕೆ ಇಮೇಲ್ ಮೂಲಕ ‘ಬಾಂಬ್ ಬೆದರಿಕೆ’: ತನಿಖೆ ಆರಂಭಿಸಿದ ಅಧಿಕಾರಿಗಳು

ಕೆಲವು ಶಿಕ್ಷಕರು ವರ್ಗಾವಣೆಗೆ ಪರ್ಯಾಯವಾಗಿ ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾಗಿ ನಂತರ ಅಮಾನತ್ತುಗೊಂಡು ನಂತರ ತಮಗೆ ಅನುಕೂಲಕರವಾದ ಶಾಲೆಗೆ ಸ್ಥಳನಿಯುಕ್ತಿಗೊಳ್ಳುತ್ತಿರುವ ಕುರಿತಾಗಿ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿರುತ್ತದೆ ಮತ್ತು ರಾಜ್ಯದ ಕೆಲವು ಉಪನಿರ್ದೇಶಕರು(ಆಡಳಿತ) ಇವರು ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ ಅನಧಿಕೃತ ಗೈರುಹಾಜರಾಗಿರುವ ಶಿಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲೆಯೊಳಗೆ ಒಂದು ತಾಲ್ಲೂಕಿನಿಂದ ಮತ್ತೊಂದು ತಾಲ್ಲೂಕಿಗೆ ಅಂದರೆ ಹೆಚ್ಚು ಖಾಲಿ ಹುದ್ದೆಗಳು ಇರುವ ತಾಲ್ಲೂಕಿನಿಂದ ಶಿಕ್ಷಕರನ್ನು ಅಮಾನತ್ತುಗೊಳಿಸುತ್ತಿರುವುದು ಕಂಡುಬಂದಿರುತ್ತದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020ರ ಸೆಕ್ಷನ್-7(1)ರ ಪ್ರಕಾರ ಅಮಾನತ್ತು ತೆರವುಗೊಳಿಸಿ ಕಡ್ಡಾಯವಾಗಿ ‘ಸಿ’ ವಲಯದ ಶಾಲೆಗೆ ಸ್ಥಳನಿಯುಕ್ತಿಗೊಳಿಸಬೇಕಾಗುತ್ತದೆ. ಮಕ್ಕಳ ಮತ್ತು ಶಿಕ್ಷಕರ ಅನುಪಾತಕ್ಕೆ ತಕ್ಕಂತೆ ಹೆಚ್ಚು ಖಾಲಿ ಹುದ್ದೆಗಳಿರುವ ತಾಲ್ಲೂಕಿಗೆ ಸ್ಥಳ ನಿಯುಕ್ತಿಗೊಳಿಸಬೇಕಾಗುತ್ತದೆ. ಆದರೆ ಕೆಲವು ಉಪನಿರ್ದೇಶಕರುಗಳು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ನಿಯಮಬಾಹಿರವಾಗಿ ಶಿಕ್ಷಕರ ಸ್ಥಳನಿಯುಕ್ತಿಗೊಳಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿರುತ್ತದೆ. ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ.

‘ಪಾಕಿಸ್ತಾನ ಪರ’ ಘೋಷಣೆ ಕೇಸ್: ‘ನಾಸೀರ್ ಹುಸೇನ್’ ವಿರುದ್ಧ FIR ದಾಖಲಿಸಲು ಬಿವೈ ವಿಜಯೇಂದ್ರ ಒತ್ತಾಯ

ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯನ್ನು ಪಡೆಯದೇ ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಿಯ ಅವಧಿಯಲ್ಲಿ ಅಂತಹ ನೌಕರರಿಗೆ ವೇತನವನ್ನು ಪಾವತಿಸಲಾಗುವುದಿಲ್ಲ. ಒಂದು ವೇಳೆ ಅನಧಿಕೃತ ಗೈರುಹಾಜರಾದಂತಹಾ ಶಿಕ್ಷಕರನ್ನು ಸಿ.ಸಿ.ಎ ನಿಯಮ-10ರಡಿಯಲ್ಲಿ ಸೇವೆಯಿಂದ ಅಮಾನತ್ತುಗೊಳಿಸಿದಲ್ಲಿ ಅಂತಹಾ ನೌಕರನಿಗೆ ನಿಯಮಾನುಸಾರ ಜೀವನಾಧಾರ ಭತ್ಯೆಯನ್ನು ಅನಿವಾರ್ಯವಾಗಿ ಪಾವತಿಸಲಾಗುವುದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತದೆ. ಹೀಗಿದ್ದರೂ ಸಹಾ ಗೈರುಹಾಜರಾದ ಶಿಕ್ಷಕರನ್ನು ನಿಯಮ ಉಲ್ಲಂಘಿಸಿ ಅಮಾನತ್ತುಗೊಳಿಸಿದ್ದೇ ಆದಲ್ಲಿ ಅಂತಹಾ ಶಿಕ್ಷಕರಿಗೆ ಪಾವತಿಸಲಾಗುವ ಜೀವನಾಧಾರ ಭತ್ಯೆಯಿಂದ ಸರ್ಕಾರಕ್ಕೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ವಸೂಲಿ ಮಾಡಲು ಕ್ರಮಕೈಗೊಳ್ಳಬೇಕಾಗುತ್ತದೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ : ನಾಸಿರ್ ಹುಸೇನ್ ಬಂಧಿಸುವಂತೆ ಬಿಜೆಪಿಯಿಂದ ದೂರು ದಾಖಲು

ಸಾಮಾನ್ಯವಾಗಿ ಕರ್ನಾಟಕ ಸಿವಿಲ್ ಸೇವೆಗಳು (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ನಿಯಮ-11 ಮತ್ತು ನಿಯಮ-IIAಗೆ ಅನುಗುಣವಾಗಿ ವಿಚಾರಣೆ ನಡೆಸಲು ಮತ್ತು ಶಿಸ್ತುಕ್ರಮವನ್ನು ಅಂತಿಮಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳಲು ಅವಕಾಶವಿರುವುದಿಲ್ಲ. ಸರ್ಕಾರಿ ನೌಕರನು ಸಕ್ಷಮ ಪ್ರಾಧಿಕಾರದ ಸೂಚನೆಗಳು/ ಆದೇಶಗಳನ್ನು ಸ್ವೀಕರಿಸಲು ನಿರಾಕರಿಸಿದರೆ, ಕರ್ನಾಟಕ ಸಿವಿಲ್ ಸೇವೆಗಳು (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ನಿಯಮ 28-A ಅಡಿಯಲ್ಲಿ ನಿಗದಿಪಡಿಸಿದ ಕಾರ್ಯವಿಧಾನವನ್ನು ಅನುಸರಿಸಿ ಅಗತ್ಯತೆಯನುಸಾರ ವಿಚಾರಣೆಯನ್ನು ನಡೆಸಬಹುದು. ಅನಧಿಕೃತ ಗೈರುಹಾಜರಿಯ ಆರೋಪ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ತೆಗೆದುಹಾಕುವ ಅಥವಾ ವಜಾಗೊಳಿಸುವ ಅಂತಿಮ ಆದೇಶವನ್ನು ಜಾರಿಗೊಳಿಸಬೇಕಾಗಿರುವುದು ಸಕ್ಷಮ ಶಿಸ್ತು ಪ್ರಾಧಿಕಾರದ ಆಧ್ಯ ಕರ್ತವ್ಯವಾಗಿದೆ. ಈ ಕುರಿತಾಗಿ ಉಲ್ಲೇಖ-3 ರ ಸರ್ಕಾರದ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಇದಕ್ಕೆ ಪೂರಕವಾಗಿ ಅನಧಿಕೃತ ಗೈರುಹಾಜರಾದ ಸರ್ಕಾರಿ ನೌಕರರ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಹಾಗೂ ಸಕಾಲದಲ್ಲಿ ಇಂತಹಾ ಕ್ರಮವನ್ನು ತೆಗೆದುಕೊಳ್ಳದಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ.

The state government has issued an order on disciplinary action against employees who are unauthorisedly absent from duty. ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ವಿರುದ್ದ ಶಿಸ್ತುಕ್ರಮದ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ.!

27/06/2025 8:56 AM1 Min Read

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

27/06/2025 7:55 AM2 Mins Read

BREAKING : ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

27/06/2025 7:52 AM1 Min Read
Recent News

BREAKING: ಏರ್ ಇಂಡಿಯಾ ವಿಮಾನ ದುರಂತ: ವಿಶ್ವಸಂಸ್ಥೆ ತನಿಖಾಧಿಕಾರಿಗೆ ಪ್ರವೇಶ ನಿರಾಕರಿಸಿದ ಭಾರತ

27/06/2025 9:45 AM

Shocking: ಪಾಕ್ ನಲ್ಲಿ ಮೂವರು ಹಿಂದೂ ಸಹೋದರಿಯರನ್ನು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿದ ಶಿಕ್ಷಕರು

27/06/2025 9:36 AM

Shocking: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಜ್ಜಿಯನ್ನು ಕಸದ ರಾಶಿಯಲ್ಲಿ ಬಿಟ್ಟ ಮೊಮ್ಮಗನ ಬಂಧನ

27/06/2025 9:30 AM

BIG NEWS : ಸಾರ್ವಜನಿಕರೇ ಗಮನಿಸಿ :`ಆಸ್ತಿ’ ಖರೀದಿಸುವಾಗ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ

27/06/2025 9:13 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ.!

By kannadanewsnow5727/06/2025 8:56 AM KARNATAKA 1 Min Read

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಮುಸ್ಲಿಂ ಸಹೋದ್ಯೋಗಿ ಯುವತಿಗೆ ಬೈಕ್ ನಲ್ಲಿ…

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

27/06/2025 7:55 AM

BREAKING : ರಾಜ್ಯದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

27/06/2025 7:52 AM

BIG NEWS : ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ ಯೋಜನೆ’ಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ

27/06/2025 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.