ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಸೇರಿದಂತೆ ರಾಜ್ಯಾಧ್ಯಂತ ಪ್ರತಿ ಭಾನುವಾರವೂ ಏಪ್ರಿಲ್ ತಿಂಗಳಿಂದ ಉಪ ನೋಂದಣಾಧಿಕಾರಿಗಳ ಕಚೇರಿ ತೆರೆದಿರೋದಕ್ಕೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ.

ಈ ಕುರಿತಂತೆ ಕಂದಾಯ ಇಲಾಖೆಯ ನೋಂದಣಿ ಮತ್ತು ಮುದ್ರಾಂಕದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ 5 ನೋಂದಣಿ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿ ಜಿಲ್ಲೆಯಲ್ಲಿ ಒಂದು ಉಪ ನೋಂದಣಿ ಕಛೇರಿಯು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಛೇರಿಗಳ ಪೈಕಿ ಯಾವುದಾದರೂ ಒಂದು ಉಪ ನೋಂದಣಿ ಕಛೇರಿ ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಆ ವಾರದ ಮಂಗಳವಾರದ ದಿನದಂದು ಸದರಿ ಕಛೇರಿಯು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.

ಇದೇ ರೀತಿ ಪ್ರಾಯೋಗಿಕವಾಗಿ ಏಪ್ರಿಲ್ ಮಾಹೆಯಿಂದ ರಾಜ್ಯದ ಬೆಂಗಳೂರು ನಗರ ನೋಂದಣಿ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯು ಸೇರಿದಂತೆ ರಾಜ್ಯದ ಇತರೆ ಎಲ್ಲಾ ನೋಂದಣಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಉಪ ನೋಂದಣಿ ಕಛೇರಿಗಳಲ್ಲಿ ಒಂದು ಉಪ ನೋಂದಣಿ ಕಛೇರಿಯನ್ನು ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಸದರಿ ಕಛೇರಿಗಳಿಗೆ ಆ ವಾರದ ಮಂಗಳವಾರ ದಿನದಂದು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.

ನೋಂದಣಿ ಜಿಲ್ಲೆಯ ಉಪ ನೋಂದಣಿ ಕಛೇರಿಗಳ ಪೈಕಿ ಭಾನುವಾರದಂದು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಕಾರ್ಯನಿರ್ವಹಿಸುವ ಉಪ ನೋಂದಣಿ ಕಛೇರಿಯ ವಿವರಗಳನ್ನು ಈ ಕೂಡಲೇ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಸಾರ್ವಜನಿಕರ ಮಾಹಿತಿಗಾಗಿ ಅವರ ಕಛೇರಿಯ ಅಧಿಕೃತ ಜಾಲತಾಣದಲ್ಲಿ ಹಾಗೂ ಕಾವೇರಿ-2 ಜಾಲತಾಣದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪಕಟಿಸುವುದು. ಅಲ್ಲದೆ ಭಾನುವಾರದಂದು ಕಾರ್ಯನಿರ್ವಹಿಸುವ ಉಪ ನೋಂದಣಿ ಕಛೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸಿಕೊಳ್ಳಲು ಸಾರ್ವಜನಿಕರು ಅನುಕೂಲಕರ ಸಮಯವನ್ನು ನಿಗದಿಪಡಿಸಿಕೊಳ್ಳಲು ಕಾವೇರಿ-2 ತಂತ್ರಾಂಶದಲ್ಲಿ ಸೂಕ್ತ ಪಾರದರ್ಶಕ ಅವಕಾಶಗಳನ್ನು ಕಲ್ಪಿಸಲು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಅವಶ್ಯಕ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದ್ದಾರೆ.

ಈ ಜನಸ್ನೇಹಿ ಆಡಳಿತ ಸುಧಾರಣೆಯನ್ನು ಯಾವುದೇ ಗೊಂದಲವಿಲ್ಲದ ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರಿಗೆ ಸೂಚಿಸಿದ್ದಾರೆ.

Breaking News: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

ಬೆಂಗಳೂರಲ್ಲಿ ‘ಜುವೆಲ್ಲರೀ ಶಾಪ್ ‘ ಮೇಲೆ ಗುಂಡಿನ ದಾಳಿ : ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದೇನು?

Share.
Exit mobile version