Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ: ಬೊಮ್ಮಾಯಿ ಗಂಭೀರ ಆರೋಪ
KARNATAKA

ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ: ಬೊಮ್ಮಾಯಿ ಗಂಭೀರ ಆರೋಪ

By ವಸಂತ ಬಿ ಈಶ್ವರಗೆರೆ

ಚಿಕ್ಕಬಳ್ಳಾಪುರ: ಜನಶಕ್ತಿ ಮುಂದೆ ಯಾವ ಶಕ್ತಿಯೂ ನಡೆಯುವುದಿಲ್ಲ. ಇದು ಸ್ಥಳೀಯ ಶಾಸಕರಿಗೆ ಗೊತ್ತಿಲ್ಲ. ಅಧಿಕಾರ ಇದೇ ಗೆದ್ದೇ ಗೆಲ್ಲುತ್ತೇವೆ ಎಂದು ಕೊಂಡಿದ್ದರು. ಆದರೆ ಡಾ. ಸುಧಾಕರ್ ಗೆಲುವಿನ ಮೂಲಕ ಜನಶಕ್ತಿಗೆ ಎದಿರೇಟು ಕೊಡುವ ಶಕ್ತಿ ಇದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.

ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸುಧಾಕರ್ ಅವರು ಕಳೆದ ಚುನಾವಣೆಯಲ್ಲಿ ಸೋತಾಗ ನನಗೆ ಸೋತಿದ್ದಕ್ಕೆ ದುಃಖವಿಲ್ಲ. ಆದರೆ, ಕೆಲಸಗಳು ಆಗಲ್ಲವಲ್ಲ ಎಂದಿದ್ದರು. ಅವರಿಗೆ ಎಲ್ಲೇ ಸ್ಥಾನ ಇದ್ದರೂ ಚಿಕ್ಕಬಳ್ಳಾಪುರದಲ್ಲಿ ಇದ್ದೇ ಇರುತ್ತಾರೆ. ಜನಶಕ್ತಿ ಗೆಲ್ಲಿಸುವ ಮೂಲಕ ಅವರಿಗೆ ಅವಕಾಶ ಕೊಟ್ಟಿದೆ ಎಂದು ತಿಳಿಸಿದರು.

ಸುಧಾಕರ್ ಅವರು ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳು ಅವರ ಕೈ ಹಿಡಿದಿವೆ. ದೊಡ್ಡ ಪ್ರಮಾಣದ ಗೆಲುವು ಸಿಕ್ಕಿದೆ. ಕ್ಷೇತ್ರದ ಋಣಾನುಬಂಧ ಸುಧಾಕರ್ ಅವರನ್ನು ಎಳೆದುತಂದು ಸಮಗ್ರ ಅಭಿವೃದ್ಧಿ ಗೆ ಅವಕಾಶ ಕೊಟ್ಟಿದ್ದೀರಿ. ಎಲ್ಲ ಕನಸುಗಳ ಸಾಕಾರ ಮಾಡಿಕೊಳ್ಳಲು ಸುಧಾಕರ್ ಅವರನ್ನು ಆಯ್ಕೆ ಮಾಡಿದ್ದೀರಿ ಎಂದು ಹೇಳಿದರು.

ಕ್ಷೇತ್ರದಲ್ಲಿ 25 ಸಾವಿರ ನಿವೇಶನಗಳ ವಿತರಣೆ ಮಾಡುವ ಕೆಲಸ ಒಂದು ಕ್ರಾಂತಿ. ಅಂತಹ ಕೆಲಸವನ್ನು ಸುಧಾಕರ್ ಅವರು ಮಾಡಿದ್ದರು. ಮೆಡಿಕಲ್ ಕಾಲೇಜಿಗಾಗಿ ರಾಜೀನಾಮೆ ಕೊಟ್ಟು ಪಟ್ಟು ಹಿಡಿದು ಮೆಡಿಕಲ್ ಕಾಲೇಜು ಮಾಡಿಸಿದರು. ಆದರೆ, ಕಾಂಗ್ರೆಸ್ ಸರಕಾರದಿಂದ ಅಳಿದುಳಿದ ಕೆಲಸ ಮಾಡಿ ಅಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡುತ್ತಿಲ್ಲ. ಕಾಂಗ್ರೆಸ್ ಸರಕಾರ ಯಾವ ಮುಖ ಇಟ್ಟುಕೊಂಡು ಅಧಿಕಾರ ನಡೆಸುತ್ತಿದೆ ಎಂದು ಹೇಳಿದರು.

ಇಡೀ ರಾಜ್ಯದಲ್ಲಿ ಯಾರಿಗೂ ಅನುದಾನ ಕೊಟ್ಟಿಲ್ಲ. ರಾಜ್ಯ ಸರಕಾರ ದಿವಾಳಿಯಾಗಿದೆ. ಮುಂಬರುವ ದಿನಗಳಲ್ಲಿ ಸರಕಾರಿ ನೌಕರರಿಗೆ ದುಡ್ಡು ಕೊಡಲು ಆಗುವುದಿಲ್ಲ. ಒಪಿಎಸ್ ಜಾರಿಗೆ ತರುತ್ತೇವೆ ಎಂದಿದ್ದರು. ಆದರೆ ಈಗ ಆ ಶಬ್ದವನ್ನೇ ಆಡುತ್ತಿಲ್ಲ. ರೈತರನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಇಂತ ಕೆಟ್ಟ ಸರಕಾರವನ್ನು ನನ್ನ ಜೀವನದಲ್ಲಿ ನೋಡಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದರು.

ಕೇಂದ್ರ ಸರಕಾರ ಕೊಟ್ಟಿರುವ ಪರಿಹಾರವನ್ನು ಸರಿಯಾಗಿ ಇವರ ಕೊಡುತ್ತಿಲ್ಲ. ನಮ್ಮ ಸರಕಾರಿವಿದ್ದಾಗ ಡಬಲ್ ಪರಿಹಾರ ಕೊಟ್ಟಿದ್ದೇವೆ. ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದರು. ಸಿಎಂ ಮತ್ತು ಡಿಸಿಎಂಗಳನ್ನು ಮಾಡಿಕೊಳ್ಳುವುದಕ್ಕೆ ಮಾತ್ರ ಈ ಸರಕಾರವಿದೆ ಎಂದು ಹೇಳಿದರು.

ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟವನ್ನು ಸುಧಾಕರ್ ಅವರು ಪಟ್ಟು ಹಿಡಿದು ಮಾಡಿಸಿದ್ದರು. ಆದರೆ ಕಾಂಗ್ರೆಸ್ ಸರಕಾರ ರದ್ದು ಮಾಡಿದೆ. ನೀವೆಲ್ಲಾ ಏಕೆ ಸುಮ್ನೆ ಕೂತಿದ್ದೀರಾ.. ಎಲ್ಲರೂ ಸುಧಾಕರ್ ಅವರ ನೇತೃತ್ವದಲ್ಲಿ ಚಳವಳಿ ಮಾಡಿ. ಈ ಭಾಗದ ರೈತರಿಗೆ ಪ್ರತ್ಯೇಕ ಹಾಲು ಒಕ್ಕೂಟ ಅತ್ಯಗತ್ಯ ಎಂದು ತಿಳಿಸಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಲೋಕಸಭೆ ಚುನಾವಣೆ ನಂತರ ಭಾರೀ ಚೆನ್ನಾಗಿ ಅಟ್ಯಾಕ್ ಮಾಡುತ್ತಿದ್ದಾರೆ. ಏನೋ ಅವರಿಗೆ ಬೆಳಕು ಕಾಣಿಸ್ತಿದೆ. ಖಂಡಿತ ಬೆಳಕು ಸಿಗಲಿದೆ. ಬಿಜೆಪಿ-ಜೆಡಿಎಸ್‌ಗೆ ಮಾತ್ರ ಭವಿಷ್ಯವಿದೆ. ಮಾಜಿ ಪ್ರಧಾನ ಮಂತ್ರಿಗಳಿರುವ ಪ್ರಾದೇಶಿಕ ಪಕ್ಷವದು ಎಂದು ಹೇಳಿದರು.

‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ಬೆಂಗಳೂರು-ಪಂಢರಪುರ ನಿಲ್ದಾಣ’ಗಳ ನಡುವೆ ವಿಶೇಷ ರೈಲು ಸಂಚಾರ

BIG NEWS: ‘ಶಿಕ್ಷಣ ಸಚಿವ’ರ ಕ್ಷೇತ್ರದಲ್ಲೇ ಲಂಚಾವತಾರ: ‘ಪೋನ್ ಪೇ’ ಮೂಲಕವೇ ‘SDA ಲಂಚ ಸ್ವೀಕಾರ’

Share. Facebook Twitter LinkedIn WhatsApp Email

Related Posts

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read
Recent News

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

​ಲಿಯೋನೆಲ್ ಮೆಸ್ಸಿ ತಂದೆ ನಿಧನರಾಗಿದ್ದಾರೆಂದು ತಪ್ಪು ವರದಿ: ಲೈವ್ ಶೋನಲ್ಲೇ ಸುಳ್ಳು ಸುದ್ದಿ ಹೇಳಿ ರಾಜೀನಾಮೆ ನೀಡಿದ ಅರ್ಜೆಂಟೀನಾದ ಪ್ರಸಿದ್ಧ ಟಿವಿ ನಿರೂಪಕಿ!

State News
KARNATAKA

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ…

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.