Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಕಾಂಡ್ಲಾಗೆ ತೆರಳುತ್ತಿದ್ದ ಹಡಗಿನ ಮೇಲಿನ ದಾಳಿಗೆ ಭಾರತ ಖಂಡನೆ

11/03/2026 9:53 PM

‘ಗೂಗಲ್, ಮೈಕ್ರೋಸಾಫ್ಟ್’ನಂತಹ ಕಂಪನಿಗಳ ಮೇಲೆ ದಾಳಿ ಮಾಡುತ್ತೇವೆ ; ಅಮೆರಿಕ, ಇಸ್ರೇಲ್’ಗೆ ಇರಾನ್ ಎಚ್ಚರಿಕೆ

11/03/2026 9:08 PM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ: ಹೆಚ್.ಡಿ ಕುಮಾರಸ್ವಾಮಿ ಕಿಡಿ
KARNATAKA

ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ: ಹೆಚ್.ಡಿ ಕುಮಾರಸ್ವಾಮಿ ಕಿಡಿ

By kannadanewsnow0905/07/2025 2:43 PM

ಮೈಸೂರು: ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ನನ್ನ ಈ ಮಾತಿಗೆ ನಾನು ಈಗಲೂ ಬದ್ಧವಾಗಿದೇನೆ ಎಂದು ಕೇಂದ್ರ ಸಚಿವರು ಪುನರುಚ್ಚರಿಸಿದರು.

ಡಿಎಂಕೆ ಮುಲಾಜಿನಲ್ಲಿ ಕಾಂಗ್ರೆಸ್!!:

ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ದೈರ್ಯವಾಗಿ ಧಿಕ್ಕರಿಸಿ ಮೇಕೆದಾಟು ಯೋಜನೆ ಕೈಗೆತ್ತಿಗೊಂಡದರೆ ಅದು ಸಾಧ್ಯ ಆಗುತ್ತದೆ ಎಂದು ಸಚಿವರು ಹೇಳಿದರು.

ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯ ಆಗುವುದಿಲ್ಲ. ತಮಿಳುನಾಡು ಸರ್ಕಾರವನ್ನೇ ಒಪ್ಪಿಸದೆ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು, ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದರಲ್ಲ, ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ? ಎಂದು ಅವರು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷಕ್ಕೆ ನನ್ನ ಭಯವಿದೆ, ಅದಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದೆ:

ಕಾಂಗ್ರೆಸ್ ಪಕ್ಷದವರಿಗೆ ಜನರ ಕೆಲಸ ಮಾಡುವುದು ಬಿಟ್ಟು ರಾಜಕೀಯ ಮಾಡುವುದರಲ್ಲಿ ಹೆಚ್ಚು ಆಸಕ್ತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆಯೇ ಆ ಪಕ್ಷಕ್ಕೆ ಅತಿಯಾದ ಭಯವಿದೆ. ಈಗಾಗಿ ಪದೇಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪ ಮಾಡುತ್ತಿರುತ್ತಾರೆ. ಬಿಜೆಪಿ – ಜೆಡಿಎಸ್ ಜೊತೆಯಾದ ಮೇಲಂತೂ ಕಾಂಗ್ರೆಸ್ ನಾಯಕರಿಗೆ ನಿದ್ದೆಯೇ ಬರುತ್ತಿಲ್ಲ. ಈಗಾಗಿ ನನ್ನ ಮೇಲೆ ಪದೇಪದೇ ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.

ಮುಂದೆ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, ಸಂತೋಷ. ಮುಂದಿನ ಐದು ವರ್ಷ ಅಲ್ಲದಿದ್ದರೆ ಐವತ್ತು ವರ್ಷ ಅವರೇ ಆಳ್ವಿಕೆ ಮಾಡಲಿ. ಮೊದಲು ಜನರು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದರೂ ಎನ್ನುವುದು ನನಗೆ ಗೊತ್ತಿದೆ. ಮುಂದೆ ಯಾರದ್ದು ಸರ್ಕಾರ ಎಂಬುದನ್ನು ಜನರೇ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸ್ ಪಕ್ಷವನ್ನು ಜನ ಹೇಗೆ ಒಪ್ಪುತ್ತಾರೆ? ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

ಮಂಡ್ಯಕ್ಕೆ ಎಷ್ಟು ಅನುದಾನ ತಂದಿದ್ದೇನೆ ಎಂದು ಮೊದಲು ತಿಳಿಯಲಿ; ಚೆಲುವರಾಯಸ್ವಾಮಿಗೆ ತಿರುಗೇಟು

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಸದನಾಗಿ ನಾನು ಎಷ್ಟು ಅನುದಾನ ತಂದಿದ್ದೇನೆ ಎಂಬ ಬಗ್ಗೆ ನನ್ನ ಬಗ್ಗೆ ಟೀಕೆ ಮಾಡಿರುವ ಸಚಿವ ಮಹಾಶಯರು ಮೊದಲು ಮಾಹಿತಿ ಪಡೆದುಕೊಂಡು ಮಾತಾಡಲಿ. ಕೇವಲ ಸಂಸದರ ಅನುದಾನ ತಂದಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಬರೀ ಸಂಸದರ ನಿಧಿಯಿಂದ ಹಣ ತಂದಿಲ್ಲ. ಬೇರೆ ಬೇರೆ ವಿಶೇಷ ಅನುದಾನಗಳನ್ನೇ ತಂದಿದ್ದೇನೆ. ಮಾಹಿತಿ ಇಲ್ಲದಿದ್ದರೆ ಮಾತನಾಡಬಾರದು. ನಾನು ವಿವಿಧ ಬಾಬ್ತುಗಳಿಂದ ಎಷ್ಟು ಅನುದಾನ ತಂದಿದ್ದೇನೆ ಎಂಬುದನ್ನ ಮೊದಲು ಅವರು ತಿಳಿದುಕೊಳ್ಳಲಿ. ಸಂಸದರ ಅನುದಾನ ಅಲ್ಲದೆ ಸಿಎಸ್ ಆರ್ ಮೂಲದಿಂದಲೂ ಅನುದಾನ ತಂದಿದ್ದೇನೆ ಎಂಬುದು ಮಂಡ್ಯ ಜನತೆಗೆ ಗೊತ್ತಿದೆ. ಸಚಿವರಾದವರಿಗೆ ಮಾಹಿತಿ ಇಲ್ಲದಿದ್ದರೆ ನಾನು ಏನು ಮಾಡಲು ಸಾಧ್ಯ? ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದರು.

ಪೂರ್ವ ನಿಗದಿತ ಸಭೆಗಳ ಕಾರಣಕ್ಕೆ ಬಂದಿಲ್ಲ:

ಸಚಿವರು ಸಭೆಗಳಿಗೆ ನನ್ನನ್ನು ಕರೆದಿಲ್ಲ ಎಂದಲ್ಲ. ನಾನು ಕೇಂದ್ರ ಸಚಿವನಾಗಿದ್ದೇನೆ. ಪೂರ್ವ ನಿಯೋಜಿತವಾಗಿ ಅನೇಕ ಸಭೆಗಳು ನಿಗದಿ ಆಗಿರುತ್ತದೆ. ಬೇರೆ ರಾಜ್ಯಗಳ ಪ್ರವಾಸಗಳು ಕೂಡ ಇರುತ್ತವೆ. ಆದರೂ ನಾನು ಮಂಡ್ಯ ಕ್ಷೇತ್ರಕ್ಕೆ ಆದ್ಯತೆಯ ಮೇರೆಗೆ ಭೇಟಿ ನೀಡುತ್ತಿದ್ದೇನೆ. ನನ್ನ ಪಾಲಿನ ಕೆಲಸಗಳನ್ನು ಯಾವುದೂ ಬಾಕಿ ಉಳಿಸಿಕೊಂಡಿಲ್ಲ. ಇವರು ತರಾತುರಿಯಲ್ಲಿ ಸಭೆಗಳಿಗೆ ಬನ್ನಿ ಎಂದು ಕರೆದಾಗ ಅದಕ್ಕೂ ಮೊದಲೇ ನಿಗದಿ ಆಗಿರುವ ಸಭೆಗಳು ಇರುತ್ತವೆ. ಹೀಗಾಗಿ ಅವರ ಸಭೆಗಳಿಗೆ ಹೋಗಲು ಆಗಿಲ್ಲ ಅಷ್ಟೇ. ಅದರಲ್ಲಿ ಬೇರೆ ಅರ್ಥ ಹುಡುಕುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದರು.

ದಿಶಾ ಸಭೆಯಲ್ಲಿ ಪಾಲ್ಗೊಂಡ ಸಚಿವರು:

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಮೈಸೂರು ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಅಸಭ್ಯ ಅಧ್ಯಕ್ಷತೆಯನ್ನು ವಹಿಸಿದರು.

ಸಭೆಯಲ್ಲಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ಶಾಸಕರಾದ ಜಿ.ಡಿ. ಹರೀಶ್ ಗೌಡ, ಶ್ರೀವತ್ಸ, ಮಾಜಿ ಶಾಸಕ ಹಾಗೂ ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯ ಅಶ್ವಿನ್ ಕುಮಾರ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತಿ ಸಿಇಒ ಯುಕೇಶ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ‌ ಸುಂದರರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿ ಆಗಿದ್ದರು.

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 8:40 PM1 Min Read

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM2 Mins Read

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM2 Mins Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಕಾಂಡ್ಲಾಗೆ ತೆರಳುತ್ತಿದ್ದ ಹಡಗಿನ ಮೇಲಿನ ದಾಳಿಗೆ ಭಾರತ ಖಂಡನೆ

11/03/2026 9:53 PM

‘ಗೂಗಲ್, ಮೈಕ್ರೋಸಾಫ್ಟ್’ನಂತಹ ಕಂಪನಿಗಳ ಮೇಲೆ ದಾಳಿ ಮಾಡುತ್ತೇವೆ ; ಅಮೆರಿಕ, ಇಸ್ರೇಲ್’ಗೆ ಇರಾನ್ ಎಚ್ಚರಿಕೆ

11/03/2026 9:08 PM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 8:40 PM

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM
State News
KARNATAKA

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow5711/03/2026 8:40 PM KARNATAKA 1 Min Read

ಬೆಂಗಳೂರು: ರಾಜ್ಯದ ಪ್ರಮುಖ ಸಮುದಾಯಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಸಮಾಜಗಳನ್ನು ಪರಿಶಿಷ್ಟ ಪಂಗಡ (ST) ಪಟ್ಟಿಗೆ…

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.