Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಥುವಾದಲ್ಲಿ ಪಾಕ್ ನುಸುಳುಕೋರನ ಹತ್ಯೆ; ಉಗ್ರರ ಅಡಗುತಾಣ ಪತ್ತೆ

12/08/2025 8:02 AM

ಲೋಕಸಭೆಯಲ್ಲಿ `ಆದಾಯ ತೆರಿಗೆ ಮಸೂದೆ 2025’ ಅಂಗೀಕಾರ : ಏನೇನು ಬದಲಾವಣೆ? ತಿಳಿಯಿರಿ | Income Tax Bill 2025

12/08/2025 8:00 AM

ಉಕ್ರೇನ್ ನೊಂದಿಗೆ ಪುಟಿನ್ ಕದನ ವಿರಾಮಕ್ಕೆ ಒಪ್ಪಿದರೆ, ಭಾರತಕ್ಕೆ ಅನುಕೂಲವಾಗಲಿದೆ” : ದಕ್ಷಿಣ ಏಷ್ಯಾ ತಜ್ಞರು

12/08/2025 7:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 2023ರ ವೇಳೆಗೆ ‘1 ಟ್ರಿಲಿಯನ್ ಡಾಲರ್’ ಗಾತ್ರದ ‘ಆರ್ಥಿಕತೆ’ ಬೆಳೆಸುವ ಹೆಗ್ಗುರಿ– ಸಚಿವ ಎಂ.ಬಿ ಪಾಟೀಲ
KARNATAKA

ರಾಜ್ಯದಲ್ಲಿ 2023ರ ವೇಳೆಗೆ ‘1 ಟ್ರಿಲಿಯನ್ ಡಾಲರ್’ ಗಾತ್ರದ ‘ಆರ್ಥಿಕತೆ’ ಬೆಳೆಸುವ ಹೆಗ್ಗುರಿ– ಸಚಿವ ಎಂ.ಬಿ ಪಾಟೀಲ

By kannadanewsnow0904/03/2024 2:33 PM

ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.

ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬಿಝಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯುಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಗಣ್ಯ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, `ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದೆ. ಅಲ್ಲದೆ, ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ ಎಂದು ಅವರು ತಿಳಿಸಿದರು.

ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುವುದು. ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0ಯನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸರಕಾರವು ಅಭಿವೃದ್ಧಿ ಪಡಿಸುತ್ತಿದೆ. ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಇದರ ಹಿಂದಿರುವ ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುವುದು ಎಂದು ಅವರು ನುಡಿದರು.

ಉತ್ಕೃಷ್ಟ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಬೆಂಗಳೂರು ನಗರವು, ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾಪೂರ್ಣ ಮಾನವ ಸಂಪನ್ಮೂಲವನ್ನು ಒದಗಿಸುವ ತೊಟ್ಟಿಲಾಗಿದೆ. ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೆ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ ಮತ್ತು ಅದರ ರಫ್ತು, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಇವುಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ. ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿದೆ ಎಂದು ಪಾಟೀಲ ವಿವರಿಸಿದರು.

ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ ಆರ್ ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು.

‘ಕ್ಷಮಿಸಿ, ಮೋದಿ ಸರ್ಕಾರಕ್ಕೆ ಕ್ಷಮೆಯಾಚಿಸಿದ ಗೂಗಲ್! ಕಾರಣ ಏನು ಗೊತ್ತಾ?

‘Modi ka parivar’: 2019 ರ ‘ಚೌಕಿದಾರ್’ ಅಭಿಯಾನದ ನಂತರ ಎಕ್ಸ್ ನಲ್ಲಿ ಬಿಜೆಪಿಯಿಂದ ಮತ್ತೊಂದು ಅಭಿಯಾನ ಶುರು!

Share. Facebook Twitter LinkedIn WhatsApp Email

Related Posts

`ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಬಿ’ ಖಾತಾಗೆ `ಎ’ ಖಾತಾ ನೀಡುವ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.!

12/08/2025 7:41 AM1 Min Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 1,000 `ಚಾಲಕ ಕಂ-ನಿರ್ವಾಹಕ ಹುದ್ದೆಗಳ’ ಭರ್ತಿ.!

12/08/2025 7:31 AM1 Min Read

BIG NEWS : `ಸ್ಪೀಡ್ ಪೋಸ್ಟ್’ ನಲ್ಲಿ ರಿಜಿಸ್ಟ್ರಾರ್ ಪೋಸ್ಟ್ ವಿಲೀನ : ಎಲ್ಲಾ ಇಲಾಖೆ ಲಕೋಟೆ ಮೇಲೆ `Speed Post’ ನಮೂದಿಸಲು ಆದೇಶ

12/08/2025 7:16 AM1 Min Read
Recent News

ಕಥುವಾದಲ್ಲಿ ಪಾಕ್ ನುಸುಳುಕೋರನ ಹತ್ಯೆ; ಉಗ್ರರ ಅಡಗುತಾಣ ಪತ್ತೆ

12/08/2025 8:02 AM

ಲೋಕಸಭೆಯಲ್ಲಿ `ಆದಾಯ ತೆರಿಗೆ ಮಸೂದೆ 2025’ ಅಂಗೀಕಾರ : ಏನೇನು ಬದಲಾವಣೆ? ತಿಳಿಯಿರಿ | Income Tax Bill 2025

12/08/2025 8:00 AM

ಉಕ್ರೇನ್ ನೊಂದಿಗೆ ಪುಟಿನ್ ಕದನ ವಿರಾಮಕ್ಕೆ ಒಪ್ಪಿದರೆ, ಭಾರತಕ್ಕೆ ಅನುಕೂಲವಾಗಲಿದೆ” : ದಕ್ಷಿಣ ಏಷ್ಯಾ ತಜ್ಞರು

12/08/2025 7:58 AM

BREAKING: ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ : ಮೂವರು ಸಾವು, ಹಲವರಿಗೆ ಗಾಯ |WATCH VIDEO

12/08/2025 7:52 AM
State News
KARNATAKA

`ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಬಿ’ ಖಾತಾಗೆ `ಎ’ ಖಾತಾ ನೀಡುವ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.!

By kannadanewsnow5712/08/2025 7:41 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, ಬಿ ಖಾತಾ ಸ್ವತ್ತುಗಳಿಗೆ ಎ ಖಾತಾ ನೀಡುವ ಯೋಜನೆಯನ್ನು ರಾಜ್ಯಾದ್ಯಂತ…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 1,000 `ಚಾಲಕ ಕಂ-ನಿರ್ವಾಹಕ ಹುದ್ದೆಗಳ’ ಭರ್ತಿ.!

12/08/2025 7:31 AM

BIG NEWS : `ಸ್ಪೀಡ್ ಪೋಸ್ಟ್’ ನಲ್ಲಿ ರಿಜಿಸ್ಟ್ರಾರ್ ಪೋಸ್ಟ್ ವಿಲೀನ : ಎಲ್ಲಾ ಇಲಾಖೆ ಲಕೋಟೆ ಮೇಲೆ `Speed Post’ ನಮೂದಿಸಲು ಆದೇಶ

12/08/2025 7:16 AM

ಅನರ್ಹ `BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 12.69 ಲಕ್ಷ ಅಕ್ರಮ ಪಡಿತರ ಚೀಟಿ ರದ್ದು.!

12/08/2025 6:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.