ಕೋಲಾರ: ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ದೇಶ ಹೊಡೆಯುವ ಕೆಲಸ ಹಾಗೂ ಭಯೋತ್ಪಾದನೆಗೆ ಉತ್ತೇಜನ ನೀಡುವ ಕೆಲಸ ಮಾಡಿದೆ. ಇದೀಗ ಅಧಿಕಾರ ಉಳಿಸಿಕೊಳ್ಳಲು ಸಮಸ್ಯೆಗಳನ್ನು ಹುಟ್ಟುಹಾಕಿದ ಏಕೈಕ ಪಕ್ಷ ಅದು ಕಾಂಗ್ರೆಸ್ ಪಕ್ಷ ಎಂದು ಕಾಂಗ್ರೆಸ್‌ ವಿರುದ್ಧ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

BIGG NEWS: ಜಡಿ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ; ಇದು ಸುದ್ದಿಯೇ ಅಲ್ಲ ಅಂದ್ರು ರಮ್ಯಾ…..!

ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳುವುದಕ್ಕೆ ನಾಟಕ ಮಾಡುತ್ತಿದೆ ಎಂದು ಹೇಳಿದ್ದಾರೆ.
ಕಾಶ್ಮೀರ, ಪಂಜಾಬ್, ಅಸ್ಸಾಂ ಸೇರಿದಂತೆ ಎಲ್ಲಿಯೂ ಸ್ಪಷ್ಟತೆ ಎನ್ನುವುದು ಇಲ್ಲ, ಎಲ್ಲಾ ಕಡೆ ಸಮಸ್ಯೆಗಳನ್ನು ಹುಟ್ಟುಹಾಕಿರುವವರು ಕಾಂಗ್ರೆಸ್‍ನವರು. ಅಲ್ಲದೇ ಚೀನಾ ಜೊತೆ ಯುದ್ಧ ಆದಾಗ ಜಾಗವನ್ನು ಬಿಟ್ಟುಕೊಟ್ಟಿವರು ಕಾಂಗ್ರೆಸಿಗರು, ಪಾಕಿಸ್ತಾನದಲ್ಲಿ ಯುದ್ಧ ಗೆದ್ದರೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಏಕೆ ಪಡೆದುಕೊಳ್ಳಲಿಲ್ಲ ಎಂದು ಪ್ರಶ್ನಿಸಿದ್ದಾರೆ.

Share.
Exit mobile version