Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಪ್ರತ್ಯೇಕ ಘಟನೆ : ಈಜಲು ಹೋಗಿದ್ದಾಗ ನೀರಲ್ಲಿ ಮುಳುಗಿ ನಾಲ್ವರು ದುರ್ಮರಣ!

20/04/2026 10:01 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿ : ಏ. 24ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ

20/04/2026 9:55 AM

ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಪಂಜಾಬ್ ಕಿಂಗ್ಸ್: ಲಕ್ನೋ ವಿರುದ್ಧ ಅಬ್ಬರಿಸಿ ಮೊದಲ ತಂಡವಾಗಿ ಹೊಸ ಮೈಲಿಗಲ್ಲು!

20/04/2026 9:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ
KARNATAKA

ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ

By kannadanewsnow0926/06/2025 3:18 PM

ಮಂಗಳೂರು: ‘ಎಸ್‌ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್‌’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳವಾರ ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಈ ಘಟಕವು ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಬೃಹತ್ ತೈಲ, ರಾಸಾಯನಿಕ ನಿರ್ವಹಣೆ ಮಾಡುವ ಕೈಗಾರಿಕೆಗಳಿಗೆ ನಿಖರತೆ, ಸುರಕ್ಷತೆ ಮತ್ತು ನಿಯಂತ್ರಕ ಕ್ರಮಗಳನ್ನು ಅನುಸರಿಸಲು ಪೂರಕವಾಗಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಉದ್ಯಮದ ಮುಖಂಡರು ಮತ್ತು ಧಾರ್ಮಿಕ ನಾಯಕರು ಪಾಲ್ಗೊಂಡಿದ್ದರು. ಬೆಂಗಳೂರಿನ ಸೈಂಟ್ ಆಂಡ್ರ್ಯೂಸ್ ಚರ್ಚ್‌ನ ವಂ.ಡಾ. ಡೆಕ್ಸ್ಟರ್ ಎಸ್. ಮಾಬೆನ್, ಜೋನಸ್ ಗ್ರೂಪ್‌ನ ನಿರ್ದೇಶಕ ಸುನಿಲ್ ಎ. ಜೋನಸ್, ಎಸ್‌ಎಸ್ ಮೆಟಲ್ಸ್‌ ನಿರ್ದೇಶಕಿ ಸಂಧ್ಯಾ ದೀಪಾ ಜೋನಸ್ ಭಾಗವಹಿಸಿದ್ದರು.

ಪ್ರಮುಖ ಉದ್ಯಮ ಪ್ರತಿನಿಧಿಗಳಾದ ಎಂಆರ್‌ಪಿಎಲ್‌ನ ಜಿಜಿಎಂ (ಎಚ್‌ಆರ್) ಕೃಷ್ಣ ಹೆಗ್ಡೆ ಮಿಯಾರ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಕಾರ್ಯ ನಿರ್ವಾಹಕ ನಿರ್ದೇಶಕ ಸಂಜಯ್ ಪರಾಶರ್, ಶೈನಿ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥಾಪಕ ಸ್ಟ್ಯಾನಿ ಲಿಯೋ ನೊರೊನ್ಹಾ ಉಪಸ್ಥಿತರಿದ್ದರು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್), ಭಾರತ್ ಪೆಟ್ರೋಲಿಯಂ (ಬಿಪಿಸಿಎಲ್), ಹಿಂದೂಸ್ತಾನ್ ಪೆಟ್ರೋಲಿಯಂ (ಎಚ್‌ಪಿಸಿಎಲ್), ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್), ಶೆಲ್ ಮತ್ತು ನಯಾರಾ ಎನರ್ಜಿ ಸೇರಿದಂತೆ ಪ್ರಮುಖ ತೈಲ ಮತ್ತು ಇಂಧನ ಕಂಪೆನಿಗಳ ಪ್ರಮುಖ ವ್ಯಕ್ತಿಗಳು ನೂತನ ಘಟಕದ ಮಹತ್ವದ ಕುರಿತು ಬೆಳಕು ಚೆಲ್ಲಿದರು. ಇದೇ ಸಂದರ್ಭದಲ್ಲಿ, ಎಂಆರ್‌ಪಿಎಲ್‌ ಕಾರ್ಯ ನಿರ್ವಾಹಕ ನಿರ್ದೇಶಕ (ರಿಫೈನರಿ) ಬಿ. ಸುದರ್ಶನ್ ಅವರನ್ನು ಅವರ ಕೊಡುಗೆಗಳಿಗಾಗಿ ಸನ್ಮಾನಿಸಲಾಯಿತು.

ಜೋನಸ್ ಗ್ರೂಪ್‌ನ ಪ್ರಮುಖ ಉದ್ಯಮವಾದ ಎಸ್‌ಎಸ್ ಮೆಟಲ್ಸ್‌ನ್ನು ಸಂಧ್ಯಾ ದೀಪಾ ಜೋನಸ್ ಸ್ಥಾಪಿಸಿದ್ದು, ಉದ್ಯಮ ವಲಯದ ನಾವೀನ್ಯತೆ ಮತ್ತು ಅಭಿವೃದ್ಧಿಗೆ ಅಡಿಪಾಯ ಹಾಕಿದೆ. 2020ರಲ್ಲಿ ಎಸ್‌ಎಸ್ ಮೆಟಲ್ಸ್ ಮತ್ತು ಇಂಡಸ್ಟ್ರೀಸ್ ಅತ್ಯಾಧುನಿಕ ಎಫ್ಲುಯೆಂಟ್ ಟ್ರೀಟ್‌ಮೆಂಟ್ ಪ್ಲಾಂಟ್ (ಇಟಿಪಿ) ಜತೆಗೆ ಸುಧಾರಿತ- ಸ್ವಯಂಚಾಲಿತ ಶುದ್ಧೀಕರಣ ಘಟಕವನ್ನು ಪ್ರಾರಂಭಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿತ್ತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕೃತಗೊಳಿಸಿದ ಈ ನವೀನ ಸೌಲಭ್ಯವು ಕರ್ನಾಟಕದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಟಿಪಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಟ್ಯಾಂಕ್ ತೊಳೆಯಲು ಪರಿಣಾಮಕಾರಿಯಾಗಿ ಮರುಬಳಕೆ ಮಾಡಲಾಗುತ್ತದೆ, ಇದು ಸಿಹಿನೀರಿನ ಬಳಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ಪರಿಸರ ಸ್ನೇಹಿಯೂ ಆಗಿದೆ. ಕಂಪೆನಿಯು ಇದೀಗ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಆರಂಭಿಸುವುದರೊಂದಿಗೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಈ ಅತ್ಯಾಧುನಿಕ ಸೌಲಭ್ಯವು ಮಂಗಳೂರು ಮತ್ತು ವಿವಿಧೆಡೆ ಬೃಹತ್ ತೈಲ ಮತ್ತು ರಾಸಾಯನಿಕಗಳನ್ನು ನಿರ್ವಹಿಸುವ ವ್ಯವಹಾರಗಳಿಗೆ ಮೂಲಾಧಾರವಾಗಲಿದೆ. ಈ ಸೌಲಭ್ಯವು ಸಾಟಿಯಿಲ್ಲದ ನಿಖರತೆ ಒದಗಿಸಲಿದೆ ಎಂದು ಸಂಧ್ಯಾ ಜೋನಾಸ್ ಅವರು ಘಟಕದ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದರು.

ತೈಲ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಾಸಾಯನಿಕಗಳನ್ನು ನಿರ್ವಹಿಸುವ ಕೈಗಾರಿಕೆಗಳಿಗೆ ಟ್ಯಾಂಕರ್ ಮಾಪನಾಂಕ ನಿರ್ಣಯದ ಪ್ರಕ್ರಿಯೆ ಅತ್ಯಂತ ಅನಿವಾರ್ಯ. ಕಾನೂನು ಅನುಸರಣೆ, ದೃಢವಾದ ಗುಣಮಟ್ಟ, ನ್ಯಾಯಯುತ ವ್ಯಾಪಾರ ಅಭ್ಯಾಸಗಳು ಮತ್ತು ಪರಿಸರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ನಿಖರವಾದ ಮಾಪನ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗಿರುವ ಈ ಹೊಸ ಘಟಕವು ವೈವಿಧ್ಯಮಯ ಶ್ರೇಣಿಯ ಟ್ಯಾಂಕರ್‌ಗಳಿಗೆ ವಿಶ್ವಾಸಾರ್ಹ ಮತ್ತು ಹೆಚ್ಚು ನಿಖರವಾದ ಮಾಪನಾಂಕ ನಿರ್ಣಯ ಸೇವೆ ಒದಗಿಸಲು ಸಜ್ಜಾಗಿದೆ.

ಜೋನಸ್ ಗ್ರೂಪ್‌ ಕುರಿತು:

1991ರಲ್ಲಿ ಸೇಂಟ್ ಅಲೋಶಿಯಸ್‌ ಕಾಲೇಜಿನಲ್ಲಿ ಪಿಯು ಶಿಕ್ಷಣದ ಬಳಿಕ ಪಿವಿ ಪೈನಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಪಡೆದ ಸುನಿಲ್ ಎ. ಜೋನಸ್ ಅವರು ಆರಂಭದಲ್ಲಿ ಎನ್‌ಜಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌, ಬಳಿಕ 2001ರವರೆಗೆ ಗಲದಾರಿ ಆಟೋಮೊಬೈಲ್ಸ್ ದುಬೈನಲ್ಲಿ ಕಾರ್ಯ ನಿರ್ವಹಿಸಿ ಕೌಶಲ್ಯ ಮತ್ತು ನಾಯಕತ್ವ ಅನುಭವಗಳನ್ನು ಪಡೆದುಕೊಂಡರು. 2001ರಲ್ಲಿ ಸುನಿಲ್‌ ಜೋನಸ್‌ ಉದ್ಯಮವಲಯಕ್ಕೆ ಕಾಲಿರಿಸಿದ್ದು, ಸನ್ನಿಧಿ ಎಂಟರ್‌ಪ್ರೈಸಸ್ ಪ್ರಾರಂಭಿಸಿದರು.

2002ರಲ್ಲಿ ಸಂಧ್ಯಾ ದೀಪಾ ಜೋನಸ್ ಅವರೊಂದಿಗೆ ವಿವಾಹವಾಗಿದ್ದು, ಬಳಿಕ ಇವರು ವ್ಯವಹಾರ ಪಾಲುದಾರರಾದರು. 2003ರಿಂದ 2008ರವರೆಗೆ ಗಣಿಗಾರಿಕೆ ಮತ್ತು ಸಾರಿಗೆ ಕ್ಷೇತ್ರಕ್ಕೆ ತಮ್ಮ ಉದ್ಯಮವನ್ನು ವಿಸ್ತರಿಸಿದರು. 2006ರಲ್ಲಿ ಸಂಧ್ಯಾ ದೀಪಾ ಜೋನಸ್‌ ಅವರು ಕುಟುಂಬದ ಪ್ರಮುಖ ಉದ್ಯಮವಾದ ಎಸ್‌ಎಸ್ ಮೆಟಲ್ಸ್‌ನ್ನು ಸ್ಥಾಪಿಸಿ ಹೊಸತನದ ಉದ್ಯಮಕ್ಕೆ ಅಡಿಪಾಯ ಹಾಕಿದರು. 2010ರಲ್ಲಿ ಜೋನಸ್ ಪೆಟ್ರೋ ಪ್ರಾಡಕ್ಟ್ಸ್ ಆರಂಭಿಸಿದರು. ಈ ಕಂಪೆನಿಯು ಕರಾವಳಿ ಕರ್ನಾಟಕದ ಏಕೈಕ ಕೆಎಸ್‌ಪಿಸಿಬಿ- ಅಧಿಕೃತ ತ್ಯಾಜ್ಯ ತೈಲ ನಿರ್ವಹಣಾ ಕಂಪೆನಿಯಾಗಿದೆ. ಇದೀಗ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಇನ್ನೊಂದು ಮೈಲಿಗಲ್ಲು ಸ್ಥಾಪಿಸಿದೆ.

ರಾಜ್ಯದಲ್ಲಿ ಒಂದೇ ವರ್ಷದಲ್ಲಿ 45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 200 ವಿದೇಶಿಗರ ಗಡಿಪಾರ – ಗೃಹ ಸಚಿವ ಪರಮೇಶ್ವರ್

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಪ್ರತ್ಯೇಕ ಘಟನೆ : ಈಜಲು ಹೋಗಿದ್ದಾಗ ನೀರಲ್ಲಿ ಮುಳುಗಿ ನಾಲ್ವರು ದುರ್ಮರಣ!

20/04/2026 10:01 AM2 Mins Read

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿ : ಏ. 24ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ

20/04/2026 9:55 AM1 Min Read

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

20/04/2026 9:40 AM1 Min Read
Recent News

BREAKING : ರಾಜ್ಯದಲ್ಲಿ ಪ್ರತ್ಯೇಕ ಘಟನೆ : ಈಜಲು ಹೋಗಿದ್ದಾಗ ನೀರಲ್ಲಿ ಮುಳುಗಿ ನಾಲ್ವರು ದುರ್ಮರಣ!

20/04/2026 10:01 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿ : ಏ. 24ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ

20/04/2026 9:55 AM

ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಪಂಜಾಬ್ ಕಿಂಗ್ಸ್: ಲಕ್ನೋ ವಿರುದ್ಧ ಅಬ್ಬರಿಸಿ ಮೊದಲ ತಂಡವಾಗಿ ಹೊಸ ಮೈಲಿಗಲ್ಲು!

20/04/2026 9:51 AM

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

20/04/2026 9:40 AM
State News
KARNATAKA

BREAKING : ರಾಜ್ಯದಲ್ಲಿ ಪ್ರತ್ಯೇಕ ಘಟನೆ : ಈಜಲು ಹೋಗಿದ್ದಾಗ ನೀರಲ್ಲಿ ಮುಳುಗಿ ನಾಲ್ವರು ದುರ್ಮರಣ!

By kannadanewsnow0520/04/2026 10:01 AM KARNATAKA 2 Mins Read

ಹಾಸನ / ಕೊಪ್ಪಳ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪ್ರತ್ಯೇಕ ಘಟನೆಯಲ್ಲಿ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ…

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿ : ಏ. 24ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ

20/04/2026 9:55 AM

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

20/04/2026 9:40 AM

BREAKINg : ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ತಪ್ಪಿದ ಭಾರೀ ದುರಂತ : 4 ಗಂಟೆ ಕಾಲ ಆಗಸದಲ್ಲೇ ಹಾರಾಡಿದ `Fly 91’ ವಿಮಾನ.!

20/04/2026 9:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.